ಉತ್ಥಾನ ದ್ವಾದಶಿಯಂದು ರಾಮನ ಉತ್ಥಾನ: ಪಲಿಮಾರು ಶ್ರೀ
Team Udayavani, Nov 10, 2019, 5:12 AM IST
ಉಡುಪಿ: ಉತ್ಥಾನ ದ್ವಾದಶಿಯ ಪರ್ವ ಕಾಲದಲ್ಲಿ ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟು ದೇಶದ ಆರಾಧ್ಯ ದೇವರನ್ನು ಎಬ್ಬಿಸುವಂತಹ ಉತ್ತಮ ತೀರ್ಪು ನೀಡಿದೆ ಎಂದು ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಹೇಳಿದ್ದಾರೆ.
ನ್ಯಾಯಾಲಯದ ಮೇಲಿಟ್ಟ ನಿರೀಕ್ಷೆ, ಭರವಸೆ ಈಡೇರಿದೆ, ನ್ಯಾಯ ಸಿಕ್ಕಿದೆ. ನ್ಯಾಯಾಧೀಶರೂ ಅಭಿನಂದನೀಯರು. ತೀರ್ಪಿನ ಹಿನ್ನೆಲೆಯಲ್ಲಿ ಶಾಂತಿ, ಸೌಹಾರ್ದ ಕಾಪಾಡಲು ಕೈಗೊಂಡ ಕ್ರಮ ಶ್ಲಾಘನೀಯ. ಮಂದಿರ ನಿರ್ಮಾಣಕ್ಕೆ ಉತ್ತಮ ವಾತಾವರಣ ಮೂಡಿದೆ.
ವಿವಾದಿತ ಕಟ್ಟಡ ಬೀಳುವಾಗ ಭಜನೆ ನಡೆಯುತ್ತಿದ್ದರೆ ಉಡುಪಿಯಲ್ಲಿ ಕಳೆದೆರಡು ವರ್ಷಗಳಿಂದ ಆಯೋಜಿಸಿದ ಅಖಂಡ ಭಜನೆ ಭಕ್ತರ ಭಕ್ತಿಯ ಜತೆಗೆ ನ್ಯಾಯಾಲಯದ ನ್ಯಾಯ ತೀರ್ಮಾನಕ್ಕೆ ವರವಾಗಿದೆ.
“ಯದಾ ಯದಾ ಹಿ ಧರ್ಮಸ್ಯ ಗ್ಲಾನಿರ್ಭವತಿ ಭಾರತ, ಅಭ್ಯುತ್ಥಾನಮಧರ್ಮಸ್ಯ ಧರ್ಮ ಸಂಸ್ಥಾಪನಾರ್ಥಾಯ ಸಂಭವಾಮಿ ಯುಗೇ ಯುಗೇ’ ಎಂದ ಕೃಷ್ಣ ಈಗಲೂ ಧರ್ಮದ ರಕ್ಷಣೆ ಕೆಲಸ ಮಾಡುತ್ತಿದ್ದಾನೆ. ಐದು ಎಕರೆ ಜಾಗದ ನ್ಯಾಯ ಮಸೀದಿ ನಿರ್ಮಾಣಕ್ಕೆ ಸಂದಿದೆ. ರಾಮ ರಹೀಮರ ಪರಸ್ಪರ ಸಹಕಾರದಿಂದ ದೇಶಕ್ಕೆ ಒಳಿತಾಗಲಿ ಎನ್ನುವ ಹಾರೈಕೆಯೊಂದಿಗೆ ಶ್ರೀಕೃಷ್ಣಮುಖ್ಯಪ್ರಾಣರಿಗೆ ಪ್ರಾರ್ಥನೆ ಸಲ್ಲಿಸುವುದಾಗಿ ಸಂದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ