MAHE:ಪ್ರಸಕ್ತ ಶೈಕ್ಷಣಿಕ ವರ್ಷದಿಂದ ‘ಬಿಎ ಇನ್ ಎಸ್ಥೆಟಿಕ್ಸ್ ಆಂಡ್ ಪೀಸ್ ಸ್ಟಡೀಸ್’ ಪ್ರಾರಂಭ


Team Udayavani, Jun 23, 2021, 2:15 PM IST

04

ಮಣಿಪಾಲ್ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನ (ಮಾಹೆ) ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ (ಜಿಸಿಪಿಎಎಸ್)  ಅನೇಕ ಹೊಸ ವೈಶಿಷ್ಟ್ಯಗಳೊಂದಿಗೆ ಈ ಶೈಕ್ಷಣಿಕ ವರ್ಷದಿಂದ ‘ಬಿಎ ಇನ್ ಎಸ್ಥೆಟಿಕ್ಸ್ ಆಂಡ್ ಪೀಸ್ ಸ್ಟಡೀಸ್’ ಅನ್ನು ಪ್ರಾರಂಭಿಸಿದೆ. ಈ ನೂತನ ಕಾರ್ಯಕ್ರಮವು ಆನರ್ಸ್ ಪದವಿಯ ಸಾಧ್ಯತೆಯೊಂದಿಗೆ ರಾಷ್ಟ್ರೀಯ ಶಿಕ್ಷಣ ನೀತಿ -2020 ಗೆ ಅನುಗುಣವಾಗಿದೆ.

ಹೆಚ್ಚು ಚರ್ಚಿಸಲ್ಪಡುತ್ತಿರುವ ಅಂತರಶಿಸ್ತೀಯ ಶಿಕ್ಷಣದೊಂದಿಗೆ, ‘ಬಿಎ ಇನ್ ಎಸ್ಥೆಟಿಕ್ಸ್ ಆಂಡ್ ಪೀಸ್ ಸ್ಟಡೀಸ್’ ತನ್ನ ವಿಶಾಲ ಚೌಕಟ್ಟಿನಲ್ಲಿ ಕಲೆ ಮತ್ತು ಸಮಾಜ ಶಾಸ್ತ್ರದ ಅಧ್ಯಯನವನ್ನು ಒಟ್ಟಿಗೆ ತರಲು ಉದ್ದೇಶಿಸಿದೆ. ಸಾಹಿತ್ಯ, ಕಲೆ ಮತ್ತು ಮಾಧ್ಯಮಗಳ ಕಲಿಕೆಯು ಇಲ್ಲಿ ರಾಜಕೀಯ ಶಾಸ್ತ್ರ, ಅಂತರರಾಷ್ಟ್ರೀಯ ಸಂಬಂಧಗಳು, ತತ್ವಶಾಸ್ತ್ರ ಗಳ ಅಧ್ಯಯನದ ಜೊತೆಗೆ ಸಾಧ್ಯವಾಗಲಿದೆ.

‘ಸೃಜನಶೀಲ / ಕಲಾ ಸಮರ್ಥ್ಯ ಮತ್ತು ಬೌದ್ಧಿಕ ಕುಶಾಗ್ರಮತಿ’ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಅರ್ಥಪೂರ್ಣ ವೃತ್ತಿ ಸಾಧ್ಯತೆಗಳನ್ನು ಒದಗಿಸುವುದು ಇದರ ಉದ್ದೇಶ. ಪತ್ರಿಕೋದ್ಯೋಗ, ಮಾಧ್ಯಮ, ಸಂವಹನ, ಸಾಮಾಜಿಕ ವಲಯ, ಅಂತರರಾಷ್ಟ್ರೀಯ ಸಂಸ್ಥೆಗಳು, ಸಂಶೋಧನೆ ಮತ್ತು ಪ್ರಕಾಶನ ಕ್ಷೇತ್ರಗಳಲ್ಲಿ ಕೆಲಸ ಮಾಡಲು ಸಾಧ್ಯವಾಗುವಂತೆ ವಿದ್ಯಾರ್ಥಿಗಳು ಕಲಾತ್ಮಕ, ಬೌದ್ಧಿಕ ಮತ್ತು ಸಂವಹನ ಸಾಮರ್ಥ್ಯಗಳನ್ನು ಬೆಳೆಯಿಸಿಕೊಳ್ಳುವಂತೆ ಸಿದ್ಧಗೊಳಿಸಲಾಗುವುದು ಎಂದು ಜಿಸಿಪಿಎಎಸ್ ನಿರ್ದೇಶಕರಾದ ಪ್ರೊ. ವರದೇಶ್ ಹಿರೇಗಂಗೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಬಿಎ (ಎಸ್ಥೆಟಿಕ್ಸ್ ಆಂಡ್ ಪೀಸ್ ಸ್ಟಡೀಸ್) ಕಾರ್ಯಕ್ರಮದಲ್ಲಿ ನಿರ್ಗಮನ ವರ್ಷಗಳ ಆಯ್ಕೆ ಇದ್ದು, ವಿದ್ಯಾರ್ಥಿಗಳು ಮೂರು ವರ್ಷಗಳ ಕಾಲ ಅಧ್ಯಯನ ಮಾಡಿ ಸಾಮಾನ್ಯ ಪದವಿ ಪಡೆಯುವ, ನಾಲ್ಕು ವರ್ಷಗಳ ಕಾಲ ಅಧ್ಯಯನ ಮಾಡಿ ಆನರ್ಸ್ ಪದವಿ ಪಡೆಯುವ, ಎರಡು ವರ್ಷಗಳ ಕಾಲ ಅಧ್ಯಯನ ಮಾಡಿ ಡಿಪ್ಲೊಮಾ, ಒಂದು ವರ್ಷ ಅಧ್ಯಯನ ಮಾಡಿ ಪ್ರಮಾಣಪತ್ರ ಪಡೆಯುವ ಅವಕಾಶಗಳಿವೆ. ಆನರ್ಸ್ ಪದವಿಯಲ್ಲಿ ಸಂಶೋಧನೆಯು ಅವಿಭಾಜ್ಯ ಅಂಗವಾಗಿರುವುದರಿಂದ ಇದು ವಿಭಿನ್ನ ಮತ್ತು ಜಾಗತಿಕ ಮಾನದಂಡಗಳಿಗೆ ಸಮನಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಕಳೆದ ಎರಡು ವರ್ಷಗಳಲ್ಲಿ, ಎಕೋಸೊಫಿಕಲ್ ಎಸ್ಥೆಟಿಕ್ಸ್‌  ಮತ್ತು ಆರ್ಟ್ ಆಂಡ್ ಪೀಸ್ ಸ್ಟಡೀಸ್‌ನಲ್ಲಿ ಎರಡು ನೂತನ ಬಗೆಯ ಸ್ನಾತಕೋತ್ತರ ಕಾರ್ಯಕ್ರಮಗಳನ್ನು ಪ್ರಾರಂಭಿಸಿರುವ ಜಿಸಿಪಿಎಎಸ್, ಇದೇ ದಾರಿಯಲ್ಲಿ ವೈವಿಧ್ಯಮಯ ಕಲಾತ್ಮಕ ಆಸಕ್ತಿಯುಳ್ಳ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ,ಈ ಹೊಸ ಪದವಿ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. “ಇದು ಜಗತ್ತಿನ ಹೊಸ ಬದಲಾವಣೆ; ಇಂತಹ ಅನೇಕ ಆಸಕ್ತಿಗಳನ್ನು ಹೊಂದಿರುವ ವಿದ್ಯಾರ್ಥಿಗಳನ್ನು ನಾವು ನೋಡುತ್ತೇವೆ; ಆ ಬಗೆಯ ತಮ್ಮ ಆಸಕ್ತಿಯನ್ನೇ ವೃತ್ತಿಯನ್ನಾಗಿಸಿಕೊಳ್ಳಲು ಉದ್ದೇಶಿಸುವ ವಿದ್ಯಾರ್ಥಿಗಳಿಗೆ ಕಲಿಕೆಯ ಅವಕಾಶವನ್ನು ಸೃಷ್ಟಿಸುವ ಪ್ರಯತ್ನ ಇದಾಗಿದೆ” ಎಂದು ಅವರು ಹೇಳಿದ್ದಾರೆ.

ಮಾಹೆಯ ಸಹಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಮತ್ತು ಕುಲಪತಿ ಲೆಫ್ಟಿನೆಂಟ್ ಜನರಲ್ ಡಾ. ಎಂ.ಡಿ. ವೆಂಕಟೇಶ್ ಅವರು ತಮ್ಮ ಇತ್ತೀಚಿನ ಮಾತಿನಲ್ಲಿ, ಹೊಸ ಪದವಿ ಕಾರ್ಯಕ್ರಮದಲ್ಲಿನ ಅಂತರಶಿಸ್ತೀಯ ಕಲಿಕೆಯ ಬಗ್ಗೆ ಸಂತೋಷವನ್ನು ವ್ಯಕ್ತಪಡಿಸಿ, ಇದು ಕಲೆ / ಮಾನವಿಕ ಶಾಸ್ತ್ರ ಮತ್ತು ಸಾಮಾಜ ಶಾಸ್ತ್ರಗಳ ಅಧ್ಯಯನವನ್ನು ಪ್ರೋತ್ಸಾಹಿಸುವ ಮಾಹೆಯ ಬದ್ಧತೆಗೆ ಅನುಗುಣವಾಗಿದೆ ಎಂದು ನುಡಿದಿದ್ದಾರೆ.

ಪದವಿ ಮತ್ತು ಸ್ನಾತಕ್ಕೋತ್ತರ ಕಾರ್ಯಕ್ರಮದ ವಿವರಗಳನ್ನು ಈ ಲಿಂಕ್‌ನಿಂದ ಪಡೆಯಬಹುದಾಗಿದೆ.

https://manipal.edu/gandhian-centre.html

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.