‘ಬಾಂಧವ್ಯ ಸ್ನೇಹಿತರು’ ಕಟ್ಟಿದ ‘ನೆರಳು’ ಮನೆ ಫಲಾನುಭವಿ ಕುಟುಂಬಕ್ಕೆ ಹಸ್ತಾಂತರ
ಬಾಂಧವ್ಯ ಬ್ಲಡ್ ಕರ್ನಾಟಕ, ಕೋಟ ಜೆಸಿಐ ಮತ್ತು ಮಂದಾರ ಸಂಘಟನೆಗಳ ಸ್ವಯಂ ಸೇವಕ ಸದಸ್ಯರ ಜಂಟಿ ಪ್ರಯತ್ನದ ಫಲ
Team Udayavani, Jan 19, 2020, 10:19 PM IST
ಉಡುಪಿ: ಬಾಂಧವ್ಯ ಬ್ಲಡ್ ಕರ್ನಾಟಕ, ಕೋಟ ಜೆಸಿಐ ಹಾಗೂ ಬೈಕಾಡಿಯ ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ ‘ಮಂದಾರ’ ಜಂಟಿಯಾಗಿ ನವೀಕರಣಗೊಳಿಸಿ ನಿರ್ಮಿಸಿದ್ದ ‘ನೆರಳು’ ಮನೆಯನ್ನು ಇಂದು ಫಲಾನುಭವಿಗಳಾದ ಗೀತಾ ಶ್ರಿಯಾನ್ ಕುಟುಂಬಕ್ಕೆ ಹಸ್ತಾಂತರಿಸುವ ಕಾರ್ಯಕ್ರಮ ಇಂದು ನಡೆಯಿತು.
ಸಂತ ಆಂತೋಣಿ ಚರ್ಚ್ ನ ಧರ್ಮಗುರುಗಳಾಗಿರುವ ರೆವರೆಂಡ್ ಫಾದರ್ ಜಾನ್ ವಾಲ್ಟರ್ ಮೆಂಡೊನ್ಸಾ ಹಾಗೂ ಪಾಂಡೇಶ್ವರದ ರಕ್ತೇಶ್ವರಿ ದೇವಸ್ಥಾನದ ಧರ್ಮದರ್ಶಿ ಕೆ.ವಿ. ರಮೇಶ್ ರಾವ್ ಅವರು ಜೊತೆಯಾಗಿ ನೂತನ ಮನೆಯ ಬಾಗಿಲನ್ನು ತೆರಯುವ ಮೂಲಕ ಈ ಗೃಹ ಹಸ್ತಾಂತರ ಕಾರ್ಯಕ್ರಮವನ್ನು ಸಂಪನ್ನಗೊಳಿಸಿದರು.
ಈ ಸಂದರ್ಭದಲ್ಲಿ ಯೋಜನೆಗೆ ಸಹಕರಿಸಿದ ಸ್ವಯಂ ಸೇವಕರನ್ನು ಗೌರವಿಸಲಾಯಿತು. ಬಾಂಧವ್ಯ ಬ್ಲಡ್ ಕರ್ನಾಟಕ, ಮಂದಾರ ಸಂಘಟನೆಯ ಪದಾಧಿಕಾರಿಗಳು ಮತ್ತು ಜೆಸಿಐ ಸಂಘಟನೆಯ ಸದಸ್ಯರ ಸಹಿತ ವಿವಿಧ ಗಣ್ಯರು ಈ ಸಮಾರಂಭಕ್ಕೆ ಸಾಕ್ಷಿಯಾಗಿದ್ದರು.
ಇಲ್ಲಿನ ಮೂಡಹಡು ಪಾಂಡೇಶ್ವರ ಸಾಸ್ತಾನದ ಗೀತಾ ಶ್ರೀಯಾನ್ ಅವರ ಮನೆ ಶಿಥಿಲಾವಸ್ಥೆಯಲ್ಲಿದ್ದು ವಾಸಯೋಗ್ಯ ಸ್ಥಿತಿಯಲ್ಲಿ ಇರಲಿಲ್ಲ. ಇದರ ಕುರಿತಾಗಿ ಮಾಹಿತಿ ಪಡೆದ ಬಾಂಧವ್ಯ ಬ್ಲಡ್ ಕರ್ನಾಟಕದ ದಿನೇಶ್ ಬಾಂಧವ್ಯ ಮತ್ತು ಇತರರು ಮನೆ ನವೀಕರಣದ ಅಂದಾಜು ವೆಚ್ಚ ಸಿದ್ಧಗೊಳಿಸಿ ಸ್ವಯಂಸೇವಕರ ಸಹಾಯದಿಂದ ಕಾಮಗಾರಿ ಪ್ರಾರಂಭಿಸಿದ್ದರು. ಇವರಿಗೆ ಕೋಟ ಜೆಸಿಐ ಘಟಕದ ಸದಸ್ಯರು ಹಾಗೂ ಬೈಕಾಡಿಯ ಮಂದಾರ ಸಾಂಸ್ಕೃತಿಕ ಸಂಘನೆಯ ಸಮಾನಮನಸ್ಕ ಗೆಳೆಯರು ಸಹಕಾರ ನೀಡಿದ್ದರು. ಸಾಮಾಜಿಕ ಜಾಲತಾಣದ ಮೂಲಕ ದಾನಿಗಳಿಂದ ಸಂಗ್ರಹಿಸಿದ ಹಣದಲ್ಲಿ ಈ ಕಾಮಗಾರಿಯನ್ನು ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ