“ಯೋಗ ಸ್ವಭಾವ’ಕ್ಕೆ ಬಾಬಾ ಸಲಹೆ

ಮಹಿಳೆಯರು, ಮಕ್ಕಳಿಗಾಗಿ ವಿಶೇಷ ಯೋಗ ಶಿಬಿರ

Team Udayavani, Nov 19, 2019, 6:15 AM IST

cc-40

ಮಹಿಳೆಯರು ಮತ್ತು ಮಕ್ಕಳ ವಿಶೇಷ ಯೋಗ ಶಿಬಿರವನ್ನು ಡಾ| ಸಂಧ್ಯಾ ಪೈ ದೀಪ ಬೆಳಗಿ ಉದ್ಘಾಟಿಸಿದರು.

ಉಡುಪಿ: ಯೋಗ ನಮ್ಮ ಸ್ವಭಾವ ಆಗ ಬೇಕು. ಅದು ನಮ್ಮ ಮೂಲ ಪ್ರಕೃತಿ. ವೇದಾಭ್ಯಾಸ ದಂತೆ ಯೋಗಾಭ್ಯಾಸವನ್ನೂ ದಿನನಿತ್ಯ ರೂಢಿಸಿ ಕೊಳ್ಳಬೇಕು ಎಂದು ಯೋಗಗುರು ಬಾಬಾ ರಾಮದೇವ್‌ ಕರೆನೀಡಿದರು. ಮಹಿಳೆಯರು ಮತ್ತು ಮಕ್ಕಳಿಗಾಗಿ ಸೋಮ ವಾರ ರಾಜಾಂಗಣದಲ್ಲಿ ನಡೆದ ವಿಶೇಷ ಯೋಗ ಶಿಬಿರದಲ್ಲಿ ಅವರು ಮಾತನಾಡಿದರು.

ಮಕ್ಕಳಿಗೆ ಬಾಲ್ಯದಲ್ಲಿಯೇ ಯೋಗಾಸನಗಳನ್ನು ತಿಳಿಸಿಕೊಡಬೇಕು. ಪ್ರಾಣಾಯಾಮ ಮಾಡಿದ ಅನಂತರ ಅಮೃತಬಳ್ಳಿ, ಅಲೋವೆರಾ ಸೇವಿಸುವುದರಿಂದ ರೋಗನಿರೋಧಕ ಶಕ್ತಿ ವೃದ್ಧಿಸುತ್ತದೆ. ಮನುಷ್ಯನ ದೇಹಕ್ಕೆ ಸಸ್ಯಾಹಾರವೇ ಉತ್ತಮ. ವಿವಿಧ ಬಗೆಯ ತರಕಾರಿಗಳಿಂದ ಆರೋಗ್ಯಕ್ಕೆ ಹಲವು ಉಪಯೋಗಗಳಿವೆ. ಸಾತ್ವಿಕ ವಿಚಾರಗಳಷ್ಟೇ ಸಾತ್ವಿಕ ಆಹಾರಗಳಿಗೂ ಪ್ರಾಧಾನ್ಯ ನೀಡಬೇಕು. ಉತ್ತರ ಭಾರತದಲ್ಲಿ ಶೇ.20ರಷ್ಟು ಮಂದಿ ಮಾತ್ರ ತುಳಸಿ ಬೆಳೆಯುತ್ತಾರೆ. ಆದರೆ ಇಲ್ಲಿ ಪ್ರತಿಯೊಬ್ಬರ ಮನೆಯಲ್ಲೂ ತುಳಸಿಯಿದೆ. ಇದು ಉತ್ತಮ ಲಕ್ಷಣ ಎಂದು ಬಾಬಾ ಶ್ಲಾ ಸಿದರು.

40 ವರ್ಷಗಳಿಂದ ರಜೆ ಇಲ್ಲ
ಯೋಗದಿಂದ ಹಲವಾರು ಕಾಯಿಲೆಗಳನ್ನು ದೂರ ಮಾಡಲು ಸಾಧ್ಯವಿದೆ. ಕೆಲಸ ಮಾಡಿದಷ್ಟು ನಮ್ಮ ದೇಹಕ್ಕೆ ವ್ಯಾಯಾಮ ಸಿಗುತ್ತದೆ. ಈ ಕಾರಣಕ್ಕೆ ನಾನು 40 ವರ್ಷಗಳಿಂದ ಒಂದೇ ಒಂದು ರಜಾ ತೆಗೆದುಕೊಂಡಿಲ್ಲ ಎಂದರು.

ಯೋಗದಿಂದ ಭಗವಂತನ ಅನುಗ್ರಹ
ಪರ್ಯಾಯ ಶ್ರೀಪಾದರು ಮಾತನಾಡಿ, ಹೆಣ್ಮಕ್ಕಳೇ ಇಂದು ಯೋಗಾಭ್ಯಾಸಕ್ಕೆ ಹೆಚ್ಚು ಆಸಕ್ತಿ ಪ್ರದರ್ಶಿಸುತ್ತಿದ್ದಾರೆ. ಯೋಗದಿಂದ ಭಗವಂತನ ಅನುಗ್ರಹ ಪ್ರಾಪ್ತಿಯಾಗಲಿದೆ ಎಂದರು.

ಆತ್ಮ-ಪರಮಾತ್ಮರನ್ನು ಬೆಸೆಯುವ ಸಾಧನ
“ತರಂಗ’ ವಾರಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಸಂಧ್ಯಾ ಎಸ್‌. ಪೈ ಮಾತನಾಡಿ, ಮನಃಶಾಂತಿಗಾಗಿ ನಾವು ಯೋಗವನ್ನು ಬಯಸಿದ್ದೇವೆ. ಯೋಗ ಎಂಬುದು ಆತ್ಮನನ್ನು ಪರಮಾತ್ಮನೊಂದಿಗೆ ಬೆಸೆಯುವ ಸಾಧನವಾಗಿದೆ. ಯೋಗದಿಂದ ಶಾಂತಿ, ಸಾಮರಸ್ಯ, ಕರುಣೆ, ಉತ್ತಮ ಮನೋಭಾವ ಸಿದ್ಧಿಸಲು ಸಾಧ್ಯ ಎಂದರು.

ರಾಮದೇವ್‌ ಅವರೊಂದಿಗೆ ಯೋಗದಲ್ಲಿ ಗಿನ್ನೆಸ್‌ ದಾಖಲೆ ಮಾಡಿದ ಉಡುಪಿಯ ತನುಶ್ರೀ ಪಿತ್ರೋಡಿ ಯೋಗಾಭ್ಯಾಸ ಮಾಡಿದರು. ಪಲಿಮಾರು ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು, ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಯಶೋದಾ, ಶಾಂತಾ ಆಚಾರ್ಯ, ಗಾಯತ್ರಿ ಪ್ರಭು, ಮೀನಾಕ್ಷಿ, ಡಾ| ದೀಪಿಕಾ, ಮೀನಾಕ್ಷಿ, ಚಂದ್ರಕಲಾ ಉಪಸ್ಥಿತರಿದ್ದರು. ಮಕ್ಕಳು, ಮಹಿಳೆ ಯರು ಬೃಹತ್‌ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

“ಮರುಪರಿಶೀಲನ ಅರ್ಜಿಯಿಂದ ತಪ್ಪು ಸಂದೇಶ’
ಮುಸ್ಲಿಂ ಪರ್ಸನಲ್‌ ಲಾ ಬೋರ್ಡ್‌ ಅಯೋಧ್ಯೆ ತೀರ್ಪಿನ ಬಗ್ಗೆ ಮರುಪರಿಶೀಲನ ಅರ್ಜಿ ಸಲ್ಲಿಸುವುದರಿಂದ ತಪ್ಪು ಸಂದೇಶ ನೀಡಿದಂತಾಗುತ್ತದೆ ಎಂದು ಯೋಗಗುರು ಬಾಬಾ ರಾಮದೇವ್‌ ತಿಳಿಸಿದರು. ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿ, ಎಲ್ಲ ನ್ಯಾಯಾಧೀಶರು ಏಕಮತದ ನಿರ್ಣಯ ಮಾಡಿದ್ದಾರೆ. ಇದನ್ನು ಪ್ರಶ್ನಿಸಲು ಲಾ ಬೋರ್ಡ್‌ ಸ್ವತಂತ್ರವಾಗಿದೆ. ಆದರೆ ಅರ್ಜಿಯಿಂದ ಸು. ಕೋರ್ಟ್‌ ತೀರ್ಪನ್ನು ಒಪ್ಪಲು ಅವರು ಸಿದ್ಧರಿಲ್ಲ ಎಂಬ ಸಂದೇಶ ರವಾನೆಯಾಗುತ್ತದೆ ಎಂದರು.

ತುಳಸೀ: ಪ್ರಯೋಗಸಿದ್ಧ
ಕೆಲವರಿಗೆ ತುಳಸೀ, ಗೋವು, ಪ್ರಾಚೀನ ಜ್ಞಾನ ಪರಂಪರೆ ಬಗ್ಗೆ ಮಾತನಾಡಿದರೆ ಹಿಡಿಸುವುದಿಲ್ಲ. ತುಳಸಿಯ ರೋಗನಿರೋಧಕ, ವಿಕಿರಣ ನಿಯಂತ್ರಣ ಗುಣ ಪರೀಕ್ಷೆಯಿಂದ ಸಾಬೀತಾಗಿದೆ ಎಂದರು.

ಡಿಎನ್‌ಎ ಪರೀಕ್ಷೆ ಮಾಡಲಿ
ಪೆರಿಯಾರ್‌ ನಿಲುವನ್ನು ಖಂಡಿಸುತ್ತೇನೆ. ನಂಬಿಕೆಗೆ ಅವಮಾನ ಮಾಡುವುದು, ಹಿಂದೂ ಪರಂಪರೆ ಬ್ರಾಹ್ಮಣವಾದ ಎಂಬುದು ಸರಿಯಲ್ಲ. ದಲಿತರು, ಆದಿವಾಸಿಗಳಲ್ಲದೆ ಇಲ್ಲಿರುವ ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರ ಎಲ್ಲರೂ ಭಾರತೀಯರು ಮತ್ತು ಇಲ್ಲಿನ ಮೂಲ ನಿವಾಸಿಗಳು. ಈ ಬಗ್ಗೆ ಬೇಕಾದರೆ ಡಿಎನ್‌ಎ ಟೆಸ್ಟ್‌ ಮಾಡಿ ಪರೀಕ್ಷಿಸಲಿ ಎಂದರು. ಅಂಬೇಡ್ಕರ್‌, ಜ್ಯೋತಿ ಬಾಪುಲೆ ಸಹಿತಿ ದಲಿತ ಮಹಾಪುರುಷರನ್ನು ನಾವು ಗೌರವಿಸುತ್ತೇವೆ. ಜಾತಿ ಮುಕ್ತ ಭಾರತವನ್ನು ಸಮರ್ಥಿಸುತ್ತೇವೆ. ಮೂಲನಿವಾಸಿ ಚಿಂತನೆ ವೈಚಾರಿಕವಾಗಿ ವಿಧ್ವಂಸಕಾರಿ ಮತ್ತು ಇಂಟಲೆಕುcವಲ್‌ ಟೆರರಿಸಂ ಆಗಿದೆ ಎಂದು ರಾಮದೇವ್‌ ಹೇಳಿದರು.

“ಉದಯವಾಣಿ’ ಯೋಗವಾಣಿ
ಬಾಬಾ ರಾಮದೇವ್‌ ತನ್ನ ಯೋಗಾಭ್ಯಾಸದ ಕಾರ್ಯ ಕ್ರಮಗಳನ್ನು ಅಚ್ಚುಕಟ್ಟಾಗಿ ಪ್ರಸಾರ ಮತ್ತು ಮುದ್ರಣ ಮಾಡುತ್ತಿರುವ ಟಿವಿ ಮತ್ತು ಪತ್ರಿಕೆಗಳನ್ನು ಶ್ಲಾ ಸಿದರು. “ಉದಯವಾಣಿ’ ಪತ್ರಿಕೆಯು ಯೋಗ ಶಿಬಿರ ಮತ್ತು ಚಿಕಿತ್ಸಾ ಶಿಬಿರಗಳ ವರದಿ ಮತ್ತು ಚಿತ್ರಗಳ ಅಚ್ಚುಕಟ್ಟಾಗಿ ಪ್ರಕಟಿಸಿ “ಯೋಗವಾಣಿ’ಯಾಗಿದೆ ಎಂದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.