ಕರಾವಳಿ ತೀರದ ಬಡ ಮೀನುಗಾರರ, ಕೂಲಿ ಕಾರ್ಮಿಕರ ಮಕ್ಕಳಿಗೆ ಜ್ಞಾನದೇಗುಲ
ಬಡಾನಿಡಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ
Team Udayavani, Dec 1, 2019, 5:19 AM IST
19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.
ಮಲ್ಪೆ: ಬಡಾನಿಡಿಯೂರು ಹಿರಿಯ ಪ್ರಾಥಮಿಕ ಶಾಲೆ ತೊಟ್ಟಂ- ಬಡಾನಿಡಿಯೂರು ಗ್ರಾಮದ ಕರಾವಳಿಯ ತೀರದ ಬಡ ಮೀನುಗಾರರ ಮತ್ತು ಕೂಲಿ ಕಾರ್ಮಿಕರ ಮಕ್ಕಳಿಗೆ ಜ್ಞಾನದೇಗುಲವಾಗಿ ಬದುಕಿಗೆ ಬೆಳಕಾಗಿತ್ತು.
1907ರಲ್ಲಿ ಸ್ಥಾಪನೆಯಾದ ಈ ಶಾಲೆ ಆರಂಭದಲ್ಲಿ ತೊಟ್ಟಂ ಹಳೆಯ ಸೈಂಟ್ ಆ್ಯನ್ಸ್ ಚರ್ಚ್ನ ಸಮೀಪದಲ್ಲಿ ಬಾಡಿಗೆ ಕಟ್ಟಡ ಒಂದರಲ್ಲಿ ನಡೆಯುತ್ತಿತ್ತು. 1982ರಲ್ಲಿ ಜಿಲ್ಲಾ ಪಂಚಾಯತ್ ಅನುದಾನದ ಜತೆಗೆ ಊರವರು ಹಣವನ್ನು ಒಟ್ಟು ಗೂಡಿಸಿ ಈಗಿರುವ ಬಡಾನಿಡಿಯೂರು ಬಸ್ಸು ನಿಲ್ದಾಣದಿಂದ ಸ್ವಲ್ಪ ಸರಕಾರಿ ಜಾಗದಲ್ಲಿ ನೂತನವಾಗಿ ಕಟ್ಟಡವನ್ನು ನಿರ್ಮಿಸಿ ಅಂದಿನಿಂದ ಇಂದಿನವರೆಗೆ ಪ್ರಗತಿಯನ್ನು ಕಾಣುತ್ತಾ ಬಂದಿದೆ. ಪ್ರಸ್ತುತ ಶಾಲೆಯಲ್ಲಿ ಒಂದರಿಂದ 7ನೇ ತರಗತಿಯ ವರೆಗೆ ಒಟ್ಟು 80 ವಿದ್ಯಾರ್ಥಿಗಳಿದ್ದಾರೆ. 5 ಮಂದಿ ಇಲಾಖೆ ಶಿಕ್ಷಕರು, ಇಬ್ಬರು ಗೌರವ ಶಿಕ್ಷಕರು ಸೇವೆಯನ್ನು ಸಲ್ಲಿಸುತ್ತಿದ್ದಾರೆ.
ಹಲವು ಸೌಲಭ್ಯಗಳು
ಸರಕಾರದ ಉಚಿತ ಪಠ್ಯಪುಸ್ತಕ, ಬಿಸಿಯೂಟ, ಶೂ, ಸಾಕ್ಸ್ ಅಲ್ಲದೆ, ದಾನಿಗಳಾದ ರಮೇಶ್ ಕೋಟ್ಯಾನ್, ಪ್ರಸಾದ್ರಾಜ್ ಕಾಂಚನ್, ಗಣೇಶ್ ಪ್ರಸಾದ್ ಭಟ್ ಹೈದರಾಬಾದ್, ಉಮೇಶ್ ಪೂಜಾರಿ, ಸಚಿನ್ ಕೋಟ್ಯಾನ್, ಸುರೇಶ್ ಶೆಟ್ಟಿ, ರಫೀಕ್ ಸಾಹೇಬ್, ರಾಮಚಂದ್ರ ಕುಂದರ್, ಪ್ರಭಾಕರ ಪೂಜಾರಿ ಹಾಗೂ ಯಾಂತ್ರಿಕ ಮೀನುಗಾರ ಸಹಕಾರಿ ಸಂಘವು ನೋಟು ಪುಸ್ತಕ, ಶಾಲಾ ಬ್ಯಾಗ್ ಸೇರಿದಂತೆ ಶಾಲೆಗೆ ಬೇಕಾದ ಎಲ್ಲ ಅಗತ್ಯ ಸೌಲಭ್ಯಗಳನ್ನು ನಿರಂತರವಾಗಿ ಪೂರೈಸುತ್ತಾ ಶಾಲೆಯ ಬೆನ್ನೆಲುಬಾಗಿ ನಿಂತಿದ್ದಾರೆ. ಮಕ್ಕಳಿಗೆ ಶಾಲಾ ವಾಹನ ವ್ಯವಸ್ಥೆ ಹಾಗೂ ನಿರ್ವಹಣೆಗೆ ದಾನಿಗಳ ಜತೆಯಲ್ಲಿ ಇಲ್ಲಿನ ಶಿಕ್ಷಕ ವರ್ಗವೂ ಕೈಜೋಡಿಸುತ್ತಿರುವುದು ಗಮನಾರ್ಹವಾಗಿದೆ.
ಹಲವು ಸೌಲಭ್ಯಗಳು
ಸರ್ವ ಶಿಕ್ಷಣ ಅಭಿಯಾನದ 2009ರಲ್ಲಿ ಎರಡು ತರಗತಿ, 2012ರಲ್ಲಿ ಒಂದು ತರಗತಿ ಕೋಣೆಯನ್ನು ಈಗಾಗಲೇ ನಿರ್ಮಿಸಲಾಗಿದೆ. ಅಕ್ಷರ ದಾಸೋಹ ಕಟ್ಟಡ, ಶುದ್ಧ ಕುಡಿಯುವ ನೀರಿನ ಘಟಕ, ರಂಗಮಂಟಪ, ಶೌಚಾಲಯ ವ್ಯವಸ್ಥೆಗಳನ್ನು ಹೊಂದಿದೆ.
ಹೆಮ್ಮೆಯ ಮುಖ್ಯೋಪಾಧ್ಯಾಯರು,
ಹಳೆ ವಿದ್ಯಾರ್ಥಿಗಳು
ಕೂರಾಡಿ ಸೀತಾರಾಮ ಅಡಿಗ, ಕುಶಲ ಶೆಟ್ಟಿ, ಮಂಜುನಾಥ ಗಾಣಿಗ, ಕರುಣಾಕರ ಮಾಸ್ತರ್, ಶಫಿ ಅಹಮ್ಮದ್, ವಿಟuಲ ಯು. ಮುಂತಾದವರು ಮುಖೋÂಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದರು.
ಯಕ್ಷಗಾನ, ನಾಟಕ, ಕ್ರೀಡೆ ಸೇರಿದಂತೆ ವಿವಿಧ ರಂಗಗಳಲ್ಲಿ ಸಾಧನೆ ಮಾಡಿದ ಹಲವಾರು ಮಂದಿ ಇಲ್ಲಿಯ ಹಳೆವಿದ್ಯಾರ್ಥಿಗಳಾಗಿದ್ದಾರೆ. ಪ್ರಸ್ತುತ ಎರಡು ಮೂರು ವರ್ಷದ ಹಿಂದಿನ ವಿದ್ಯಾರ್ಥಿಗಳು ಆತ್ಲೆಟಿಕ್ಸ್ನಲ್ಲಿ ರಾಷ್ಟ್ರಮಟ್ಟದಲ್ಲಿ ಪದಕವನ್ನು ಪಡೆದಿದ್ದಾರೆ.
ಆಂಗ್ಲಮಾದ್ಯಮ ಪೈಪೋಟಿ ಎದುರಿಸಲು ಶಾಲೆಯಲ್ಲಿ ಮಕ್ಕಳಿಗೆ ಇಂಗ್ಲಿಷ್ ಭಾಷಾ ಬೋಧನೆಗೆ ಸ್ನಾತಕೋತ್ತರ ಪದವಿ ಪಡೆದ ಶಿಕ್ಷಕಿಯನ್ನು ನೇಮಿಸಲಾಗಿದೆ. ದಾನಿಗಳ ಸಹಕಾರದಿಂದ ಶಾಲಾ ಮಕ್ಕಳಿಗೆ ಇಲಾಖೆಯ ಸೌಲಭ್ಯಗಳಲ್ಲದೆ ಉಚಿತ ನೋಟ್ ಪುಸ್ತಕ, ಸಮವಸ್ತ್ರ ಸಾರಿಗೆ ವ್ಯವಸ್ಥೆಗಳನ್ನು ಒದಗಿಸಿ ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ.
-ದಿನಕರ ಶೆಟ್ಟಿ,ಮುಖ್ಯ ಶಿಕ್ಷಕರು
ಈ ಶಾಲೆಯಲ್ಲಿ ಕಲಿತು ಹೊರರಾಜ್ಯ ಹೊರದೇಶದಲ್ಲಿ ಇರುವವವರು ಹೆಚ್ಚು ಮಂದಿ ಇದ್ದಾರೆ ಅವರೆಲ್ಲರನ್ನು ಸಂಪರ್ಕ ಮಾಡಿ ಶಾಲೆಯನ್ನು ಇನ್ನಷ್ಟು ಅಭಿವೃದ್ದಿಪಡಿಸುವ ಯೋಜನೆ ಇದೆ. ಅಕ್ಷರ ಕಲಿಸಿದ ಈ ಕನ್ನಡ ಶಾಲೆಯನ್ನು ಎಲ್ಲ ಹಳೆ ವಿದ್ಯಾರ್ಥಿಗಳು ಒಟ್ಟಾಗಿ ಉಳಿಸಿ ಬೆಳೆಸುವಲ್ಲಿ ಸಹಕಾರ ನೀಡಬೇಕಾಗಿದೆ.
-ಸುರೇಶ ಬಂಗೇರ ತೊಟ್ಟಂ, ಹಳೆವಿದ್ಯಾರ್ಥಿ
-ನಟರಾಜ್ ಮಲ್ಪೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ