ಬಜೆ ನೀರು ಎಪ್ರಿಲ್‌ ತನಕ ಮಾತ್ರ


Team Udayavani, Feb 17, 2017, 1:40 PM IST

Baje-Dam-17-2.jpg

ಉಡುಪಿ: ಬಜೆ ಡ್ಯಾಂನಲ್ಲಿ ಈಗಿರುವ ನೀರಿನ ಪ್ರಮಾಣ ನೋಡಿದರೆ ಉಡುಪಿ ನಗರಕ್ಕೆ ಮುಂದಿನ ಎಪ್ರಿಲ್‌ ಅಂತ್ಯದವರೆಗೆ ಮಾತ್ರ ನೀರು ಕೊಡಬಹುದು. ಮೇ ಅಂತ್ಯದವರೆಗೆ ನೀರು ಕೊಡುವ ಸಲುವಾಗಿ ಈಗಿನಿಂದಲೇ ನೀರು ಪೂರೈಕೆಯಲ್ಲಿ ಕಡಿತ ಅನಿವಾರ್ಯ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು. ಗುರುವಾರ ಬಜೆ ಡ್ಯಾಂನ ನೀರು ಸಂಗ್ರಹ ಘಟಕಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕಿಸಿದ ಬಳಿಕ ಪತ್ರಕರ್ತರ ಜತೆ ಮಾತನಾಡಿದ ಅವರು, ಕಳೆದ ವರ್ಷ ಈ ದಿನಗಳಲ್ಲಿ ಸುಮಾರು 5.62 ಮೀ. ನೀರು ಇದ್ದರೆ ಈ ಬಾರಿ 5.32 ಮೀ. ನೀರು ಸಂಗ್ರಹವಿದೆ. ಸುಮಾರು 0.32 ಮೀ. ನೀರು ಕಡಿಮೆಯಿದ್ದು, ಎರಡು ದಿನಕ್ಕೊಮ್ಮೆ ಅಥವಾ ದಿನದಲ್ಲಿ ಕೆಲ ಗಂಟೆ ಮಾತ್ರ ನೀರು ಬಿಡುವ ಕ್ರಮ ಕೈಗೊಳ್ಳುವ ಬಗ್ಗೆ ನಗರಸಭೆ ಶೀಘ್ರ ಸಭೆ ಕರೆದು ಮುಂಜಾಗ್ರತಾ ಕ್ರಮ ಕೈಗೊಳ್ಳಲಿದೆ ಎಂದರು.

24 ಗಂಟೆ ವಿದ್ಯುತ್‌ ಪೂರೈಕೆ
ಬಜೆ ಡ್ಯಾಂನ ನೀರು ಶೇಖರಣಾ ಘಟಕದಲ್ಲಿ ಒಂದು ಗಂಟೆ ವಿದ್ಯುತ್‌ ಇಲ್ಲದಿದ್ದರೆ ಸಾಕಷ್ಟು ಸಮಸ್ಯೆ ಉಂಟಾಗುತ್ತಿದೆ. ಆದ್ದರಿಂದ ಸದ್ಯ ಹಿರಿಯಡಕದಿಂದ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದ್ದು, ಹೆಚ್ಚುವರಿಯಾಗಿ ಮಣಿಪಾಲದಿಂದಲೂ ಎಕ್ಸ್‌ಪ್ರೆಸ್‌ ಕಾರಿಡಾರ್‌ ಲೈನ್‌ನಿಂದಲೂ ವಿದ್ಯುತ್‌ ಸಂಪರ್ಕ ಕಲ್ಪಿಸಿ ಕುಡಿಯುವ ನೀರು ಪೂರೈಕೆಗೆ ತೊಂದರೆಯಾಗದಂತೆ 24 ಗಂಟೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಪ್ರಮೋದ್‌ ಹೇಳಿದರು.

ಕೃಷಿಗೆ ನೀರು: ರೈತರ ಮನವಿ
ಈ ಸಂದರ್ಭ ಬಜೆ ಡ್ಯಾಂನ ಆಸುಪಾಸಿನ ರೈತರು ಕೃಷಿಗೆ ಕನಿಷ್ಠ ವಾರದಲ್ಲಿ ಒಂದು ದಿನ ನೀರು ನೀಡಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು. ಈ ವೇಳೆ ಮಾತನಾಡಿದ ಜಿಲ್ಲಾ ಕೃಷಿಕ ಸಂಘದ ಕಾರ್ಯದರ್ಶಿ ಕುದಿ ಶ್ರೀನಿವಾಸ್‌ ಭಟ್‌, ಭತ್ತದ ಕಟಾವು ಈಗಾಗಲೇ ಮುಗಿದಿದ್ದು, ಬಜೆ ಡ್ಯಾಂನ ನೀರು ಕಡಿತದಿಂದ ತೆಂಗು ಹಾಗೂ ಅಡಿಕೆ ಬೆಳೆಗಾರರು ಸಂಕಷ್ಟ ಅನುಭವಿಸುತ್ತಿದ್ದಾರೆ. ಕನಿಷ್ಠ ವಾರಕ್ಕೆ ಒಂದು ದಿನ ಆದರೂ ನೀರು ಬಿಡುವ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ವೇಳೆ ಪ್ರತಿಕ್ರಿಯಿಸಿದ ಸಚಿವರು ಕುಡಿಯುವ ನೀರಿಗೆ ನಮ್ಮ ಮೊದಲ ಆದ್ಯತೆಯಾಗಿದ್ದು, ರೈತರು ಸಹಕರಿಸಬೇಕು ಎಂದರು. ಈ ಸಂದರ್ಭ ನಗರಸಭಾಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಜಿ.ಪಂ. ಸದಸ್ಯೆ ಚಂದ್ರಿಕಾ ಕೇಲ್ಕರ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸತೀಶ್‌ ಅಮೀನ್‌ ಪಡುಕರೆ, ಜನಾರ್ದನ ಭಂಡಾರ್‌ಕರ್‌, ನಗರಸಭಾ ಸದಸ್ಯರು ಉಪಸ್ಥಿತರಿದ್ದರು.

ಕಟ್ಟಡ ನಿರ್ಮಾಣಕ್ಕೆ ನೀರು ಸ್ಥಗಿತ
ಕಟ್ಟಡ ಕಾಮಗಾರಿಗಳಿಗೆ ನೀರು ಪೂರೈಕೆ ಮಾಡುವುದನ್ನು ಈಗಾಗಲೇ ಸ್ಥಗಿತಗೊಳಿಸಲಾಗಿದೆ. ಹಾಗೇನಾದರೂ ಬಳಸಿದ್ದು ಕಂಡುಬಂದಲ್ಲಿ ದಂಡ ವಿಧಿಸಲಾಗುವುದು. ಮುಂದಿನ ದಿನಗಳಲ್ಲಿ ಮಣಿಪಾಲಕ್ಕೂ 2 ದಿನಕ್ಕೊಮ್ಮೆ ಕೊಡುವ ಬಗ್ಗೆ ನಿರ್ಧರಿಸಲಾಗುವುದು. ಕಾಂಪ್ಲೆಕ್ಸ್‌ಗಳಿಗೂ 3ಕ್ಕಿಂತ ಹೆಚ್ಚಿನ ಮಳಿಗೆಯಿದ್ದರೆ ನೀರು ಕಡಿತಗೊಳಿಸುವ ಸಂಬಂಧ ಅಧಿಸೂಚನೆ ಕೊಟ್ಟಿದ್ದೇವೆ. ಟ್ಯಾಂಕರ್‌ ಮೂಲಕ ಕೆಲವೆಡೆ ಈಗಾಗಲೇ ನೀರು ಪೂರೈಕೆ ಮಾಡಲಾಗುತ್ತಿದೆ. ಎಲ್ಲ ಸದಸ್ಯರ ಸಭೆ ಕರೆದು ಟಾಸ್ಕ್ಫೋರ್ಸ್‌ ರಚಿಸಿ ಒಬ್ಬ ನೋಡಲ್‌ ಅಧಿಕಾರಿಯನ್ನು ನೇಮಿಸಿ ಎಂದು ನಗರಸಭಾ ಪೌರಾಯುಕ್ತ ಡಿ. ಮಂಜುನಾಥಯ್ಯ ಹೇಳಿದರು.

42 ದಶಲಕ್ಷ ಲೀಟರ್‌ ನೀರು ಅಗತ್ಯ
ಉಡುಪಿ ನಗರಕ್ಕೆ ದಿನವೊಂದಕ್ಕೆ 42 ದಶಲಕ್ಷ ನೀರು ಬೇಕಾಗುತ್ತಿದ್ದು, ಸದ್ಯ 22 ದಶಲಕ್ಷ ಲೀಟರ್‌ ನೀರು ಪೂರೈಕೆ ಮಾಡಲಾಗುತ್ತಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಶೇ. 25.85ರಷ್ಟು ಮಳೆ ಕೊರತೆಯಾಗಿದೆ. ಕಳೆದ ವರ್ಷ ಈ ಸಮಯದಲ್ಲಿ ಬಜೆ ಡ್ಯಾಂನ ನೀರಿನ ಮಟ್ಟ 5.62 ಮೀಟರ್‌ ಇತ್ತು. ಅದೇ ಈಗ ಅಂದರೆ ಗುರುವಾರದವರೆಗೆ ನೀರಿನ ಮಟ್ಟ 5.32 ಮೀ. ಇದೆ. ಕಳೆದ ಬಾರಿಗಿಂತ ಶೇ. 32 ಮೀ. ನೀರು ಕೊರತೆಯಿದೆ. ಒಟ್ಟು 17, 862 ಮನೆಗಳು ಹಾಗೂ 8 ಗ್ರಾ. ಪಂ.ಗಳಿಗೆ ನೀರು ಪೂರೈಕೆ ಮಾಡಲಾಗುತ್ತಿದೆ.

ಶೀಂಬ್ರದಲ್ಲಿ  ಅಣೆಕಟ್ಟು ನಿರ್ಮಾಣ
ಕುಡಿಯುವ ನೀರಿಗಾಗಿ ನಗರಕ್ಕೆ ಸುಮಾರು 102 ಕೋ.ರೂ. ಕುಡ್ಸೆಂಪ್‌ ಯೋಜನೆ ಅನುಷ್ಠಾನಗೊಳಿಸಲಾಗಿದೆ. ನೀರಿನ ಅಭಾವದಿಂದ ಜನರಿಗೆ ತೊಂದರೆಯಾಗದಂತೆ ಶಾಶ್ವತ ಪರಿಹಾರ ನೀಡುವ ನಿಟ್ಟಿನಲ್ಲಿ ಶೀಂಬ್ರದಲ್ಲಿ ಅಣೆಕಟ್ಟು ಕಟ್ಟಿ ಅಲ್ಲಿಂದ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು. ಕೂಡಲೇ ನೀರಾವರಿ ತಜ್ಞರನ್ನು ಕರೆಯಿಸಿ ಹೈಡ್ರೋಲಾಜಿಕಲ್‌ ಸರ್ವೇ ನಡೆಸಿ ಅಣೆಕಟ್ಟು ನಿರ್ಮಾಣದ ಬಗ್ಗೆ ನಿರ್ಧರಿಸಿ ಆನಂತರ ಟೆಂಡರ್‌ ಕರೆಯಲಾಗುವುದು. 8 ಕಡೆ ಓವರ್‌ ಹೆಡ್‌ ಟ್ಯಾಂಕ್‌ ನಿರ್ಮಾಣ ಹಾಗೂ ಪಂಪಿಂಗ್‌ ಕೆಪಾಸಿಟಿ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.