ಬೇಸಗೆಯಲ್ಲೂ ಬಜೆಯಲ್ಲಿ  5.71  ಮೀ. ನೀರು ಸಂಗ್ರಹ!


Team Udayavani, May 5, 2021, 5:40 AM IST

ಬೇಸಗೆಯಲ್ಲೂ ಬಜೆಯಲ್ಲಿ  5.71  ಮೀ. ನೀರು ಸಂಗ್ರಹ!

ಉಡುಪಿ: ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಜೆ ಅಣೆಕಟ್ಟಿನಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, 15 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮೇ ತಿಂಗಳಿನಲ್ಲಿಯೂ ಭಾರೀ ಪ್ರಮಾಣದ ನೀರು ಸಂಗ್ರಹವಾಗಿದೆ.

ಪ್ರತಿ ವರ್ಷ ಮಾರ್ಚ್‌ ಆರಂಭದಲ್ಲಿ ಬಜೆಯಲ್ಲಿ ನೀರು ಬರಿದಾಗಿ ಎ.11ರ ಸುಮಾರಿಗೆ ಸ್ವರ್ಣಾ ನದಿಯಲ್ಲಿ ಪಂಪಿಂಗ್‌ ಕೆಲಸ ಪ್ರಾರಂಭಿಸಲಾಗುತ್ತಿತ್ತು. ಮೇ ಆರಂಭದಲ್ಲಿ ಟ್ಯಾಂಕರ್‌ ಮೂಲಕ ಕುಡಿಯುವ ನೀರು ಪೂರೈಸುವ ಪರಿಪಾಠ ಹಿಂದಿ ನಿಂದಲೂ ಇತ್ತು. ಆದರೆ ಈ ಬಾರಿ ಅಂತಹ ಸ್ಥಿತಿ ಇಲ್ಲ. ಜನವರಿಯಿಂದ ಎಪ್ರಿಲ್‌ವರೆಗೆ ಬಿಟ್ಟು ಬಿಟ್ಟು ಸುರಿದ ಮಳೆಯಿಂದ ಜಲಮೂಲಗಳು ಚೇತರಿಸಿವೆ. ಮುಂದಿನ ತಿಂಗಳು ಸಮಯಕ್ಕೆ ಸರಿಯಾಗಿ ಮುಂಗಾರು ಪ್ರವೇಶವಾದರೆ ಈ ಬಾರಿ ನಗರಕ್ಕೆ ನೀರಿನ ಸಮಸ್ಯೆ ಕಾಡದು.

ಇತಿಹಾಸದಲ್ಲೇ ಮೊದಲು :

ಕಳೆದೊಂದು ದಶಕದ ಇತಿಹಾಸದಲ್ಲಿ ಮೇ ನಲ್ಲಿ 5.71 ಮೀಟರ್‌ವರೆಗೆ ನೀರು ಏರಿಕೆಯಾಗಿರುವುದು ಇದೇ ಮೊದಲ ಬಾರಿ. ಕಳೆದ ಮಾರ್ಚ್‌ ತಿಂಗಳಿನಲ್ಲಿ 4.40 ಮೀಟರ್‌ ನೀರು ಸಂಗ್ರಹವಿತ್ತು. ಈ ಹಿನ್ನೆಲೆಯಲ್ಲಿ ಎಪ್ರಿಲ್‌ ತಿಂಗಳ ಅಂತ್ಯದಲ್ಲಿ ಡ್ರೆಜಿಂಗ್‌  ಮಾಡುವ ನಿಟ್ಟಿನಲ್ಲಿ 30 ಲ.ರೂ. ಕಾಯ್ದಿರಿಸ ಲಾಗಿತ್ತು. ಈ ಬಾರಿ ಎಪ್ರಿಲ್‌ ತಿಂಗಳ ಅಂತ್ಯದಲ್ಲಿ ಏಕಾಏಕಿ ನೀರಿನ ಒಳಹರಿವು ಪ್ರಾರಂಭವಾದ ಹಿನ್ನೆಲೆಯಲ್ಲಿ ಹೂಳೆತ್ತಿಲ್ಲ.

ನೀರಿನ ಬಳಕೆ ಹೆಚ್ಚಳ :

ನಗರದಲ್ಲಿ ಸುಮಾರು 12,500 ಮನೆಗಳು, ಮಣಿಪಾಲ ಕೈಗಾರಿಕಾ ವಲಯದಲ್ಲಿ 70ರಿಂದ 80 ಕೈಗಾರಿಕೆ ಘಟಕ, 570 ಫ್ಲ್ಯಾಟ್‌ಗಳಿವೆ; ಸುಮಾರು 1,000 ವಾಣಿಜ್ಯ ಸಂಸ್ಥೆಗಳಿವೆ; ಸುಮಾರು 600 ಹೊಟೇಲ್‌, 40 ಲಾಡ್ಜ್ಗಳಿವೆ. ಸರಕಾರದ ಪ್ರಕಾರ ಪ್ರತಿ ಪ್ರಜೆಗೆ ದಿನಕ್ಕೆ 135 ಲೀ. ನೀರು ಒದಗಿಸಬೇಕು. ನಗರ ಪ್ರದೇಶದ ಶೇ. 90ರಷ್ಟು ವಾಣಿಜ್ಯ ಕಟ್ಟಡಗಳು ನಗರಸಭೆಯ ನೀರನ್ನೇ ಅವಲಂಬಿಸಿರುವುದರಿಂದ ಬೇಸಗೆಯಲ್ಲಿ ಹೊಟೇಲ್‌ಗ‌ಳಲ್ಲಿ ನೀರಿನ ಬಳಕೆ ಪ್ರಮಾಣ ಹೆಚ್ಚಾಗಿದೆ. ಈ ಬಾರಿ  ನಳ್ಳಿ ನೀರು ಸಂಪರ್ಕ 19,200ಕ್ಕೆ ಏರಿಕೆಯಾಗಿದೆ.

70 ದಿನಗಳಿಗೆ ಸಾಕು :

ಪ್ರಸ್ತುತ ಬಜೆಯಲ್ಲಿ ಸಂಗ್ರಹವಾದ 5.71 ಮೀಟರ್‌ ನೀರಿನಲ್ಲಿ 1.5 ಮೀಟರ್‌ ಡೆಡ್‌ ಸ್ಟೋರೆಜ್‌ ಹೊರತು ಪಡಿಸಿದರೆ, ಸಂಗ್ರಹವಿರುವ 4.21 ಮೀಟರ್‌ ನೀರಿನಲ್ಲಿ ಇಡೀ ನಗರಕ್ಕೆ 70 ದಿನಗಳ ವರೆಗೆ ನೀರು ಯಾವುದೇ ವ್ಯತ್ಯಯವಿಲ್ಲದೆ ಪೂರೈಸಬಹುದು. ನಗರಸಭೆ 2020ರಲ್ಲಿ ಹೂಳೆತ್ತಲು 13 ಲ.ರೂ. ವ್ಯಯ ಮಾಡಿತ್ತು. ಆದರೆ ಟ್ಯಾಂಕರ್‌ ನೀರು ನೀಡಿರಲಿಲ್ಲ. ಈ ಬಾರಿ ಮುನ್ನೆಚ್ಚರಿಕೆ ಕ್ರಮವಾಗಿ ಬಜೆ, ಶಿರೂರಿನಲ್ಲಿ ಸ್ಯಾಂಡ್‌ ಬ್ಯಾಗ್‌ ಬಳಸಿ ನೀರನ್ನು ಸಂಗ್ರಹಿಸಿ ಇಡಲಾಗಿದೆ ಎಂದು ನಗರಸಭೆ ಎಇಇ ಮೋಹನ್‌ ರಾಜ್‌ ತಿಳಿಸಿದ್ದಾರೆ.

ಪ್ರತಿದಿನ 24 ದಶಲಕ್ಷ ಲೀಟರ್‌ ನೀರು : ಬಜೆಯಲ್ಲಿ 1972ರ ಜನಸಂಖ್ಯೆ ಹಾಗೂ ಅಭಿವೃದ್ಧಿ ಆಧಾರದ ಮೇಲೆ ಅಣೆಕಟ್ಟು ನಿರ್ಮಿಸಲಾಗಿತ್ತು. ಸ್ವರ್ಣಾ ನದಿಯಿಂದ 2 ಹಂತಗಳಲ್ಲಿ ನಗರಕ್ಕೆ ನೀರು ಸರಬರಾಜಾಗುತ್ತಿದೆ. ಬಜೆ ಅಣೆಕಟ್ಟು ನಿರ್ಮಾಣವಾದ ಬಳಿಕ ಮೊದಲ ಹಂತದಲ್ಲಿ ಪ್ರತಿದಿನ 9 ದಶಲಕ್ಷ ಲೀ. ನೀರು ಸರಬರಾಜು ಆಗಿತ್ತು. 2006ರಲ್ಲಿ ಆರಂಭಗೊಂಡ ಎರಡನೇ ಹಂತದ ಯೋಜನೆಯಲ್ಲಿ ಪ್ರತಿದಿನ 24 ದಶಲಕ್ಷ ಲೀ. ನೀರು ಸರಬರಾಜು ಮಾಡುವ ಯೋಜನೆಯಾಗಿದೆ.

ಪ್ರಸ್ತುತ ಬಜೆಯಲ್ಲಿ ಸಂಗ್ರಹವಾಗಿರುವ ನೀರು ನಗರಕ್ಕೆ 70ದಿನಗಳ ಕಾಲ ಪೂರೈಕೆ ಮಾಡಬಹುದು. ಜನವರಿಯಿಂದ ಬಿಟ್ಟು ಬಿಟ್ಟು ಮಳೆ ಬರುತ್ತಿರುವುದರಿಂದ ಕಡುಬೇಸಗೆಯಲ್ಲಿಯಲ್ಲಿ ಸಹ ಒಳಹರಿವು ಇದೆ.  -ಮೋಹನ್‌ ರಾಜ್‌,  ಎಎಇ ನಗರಸಭೆ, ಉಡುಪಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.