ಬಜೆಯಲ್ಲಿ ನೀರಿನ ಮಟ್ಟ ಕುಸಿತ: ಉಡುಪಿಗೆ 2 ದಿನಕ್ಕೊಮ್ಮೆ ನೀರು
Team Udayavani, Mar 22, 2017, 3:50 AM IST
ಉಡುಪಿ: ನಗರಸಭಾ ವ್ಯಾಪ್ತಿಗೆ ಕುಡಿಯುವ ನೀರು ಸರಬರಾಜು ಮಾಡುವ ಬಜೆ ಅಣೆಕಟ್ಟಿನಲ್ಲಿ ನೀರಿನ ಸಂಗ್ರಹದ ಮಟ್ಟ ದಿನೇ ದಿನೇ ಕುಸಿಯುತ್ತಿದ್ದು, ಮಾ. 23ರಿಂದ ನಗರಸಭೆಯ ಒಟ್ಟು 35 ವಾರ್ಡ್ಗಳನ್ನು 2 ವಿಭಾಗಳಾಗಿ ವಿಂಗಡಿಸಿ ಪ್ರತೀ ವಾರ್ಡ್ಗೆ ಎರಡು ದಿನಕ್ಕೊಮ್ಮೆ ನೀರು ಪೂರೈಕೆ ಮಾಡುವ ನಿರ್ಧಾರಕ್ಕೆ ನಗರಸಭೆ ಬಂದಿದೆ.
ಮಾ. 23ರಿಂದ ಈ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದ್ದು, ಮೊದಲ ಕಂತಿನಲ್ಲಿ 21 ವಾರ್ಡ್ಗಳಾದ ಕುಂಜಿಬೆಟ್ಟು, ತೆಂಕಪೇಟೆ, ಒಳಕಾಡು, ಬೈಲೂರು, ಕಿನ್ನಿಮೂಲ್ಕಿ, ಅಜ್ಜರಕಾಡು, ಅಂಬಲಪಾಡಿ, ಬನ್ನಂಜೆ, ಶಿರಿಬೀಡು, ಕೊಳ, ವಡಭಾಂಡೇಶ್ವರ, ಕಲ್ಮಾಡಿ, ಇಂದಿರಾನಗರ, ಚಿಟಾ³ಡಿ, ಬಡಗುಬೆಟ್ಟು, ಕೊಡವೂರು, ಕಸ್ತೂರ್ಬಾನಗರ, ಮಲ್ಪೆ ಸೆಂಟ್ರಲ್, ಇಂದ್ರಾಳಿ, ಸಗ್ರಿ ಹಾಗೂ ಮೂಡುಪೆರಂಪಳ್ಳಿಗೆ ನೀರು ಪೂರೈಕೆ ಮಾಡಲಾಗುವುದು.
2ನೇ ಕಂತಿನಲ್ಲಿ ಮಾ. 24ರಂದು 14 ವಾರ್ಡ್ಗಳಾದ ಸರಳೇಬೆಟ್ಟು, ಈಶ್ವರನಗರ, ಮಣಿಪಾಲ, ಕಕ್ಕುಂಜೆ, ಕರಂಬಳ್ಳಿ, ಮೂಡುಧಿಬೈಲು, ಕೊಡಂಕೂರು, ನಿಟ್ಟೂರು, ಸುಬ್ರಹ್ಮಣ್ಯಧಿನಗರ, ಗೋಪಾಲಪುರ, ಕಡಿಧಿಯಾಳಿ, ಗುಂಡಿಬೈಲು, ಸೆಟ್ಟಿಬೆಟ್ಟು ಹಾಗೂ ಪರ್ಕಳಕ್ಕೆ ನೀರು ಪೂರೈಕೆ ಮಾಡಲಾಗುವುದು. ಇದೇ ಮಾದರಿಯಲ್ಲಿ ಎರಡು ದಿನಕ್ಕೊಮ್ಮೆ ನೀರು ಸರಬರಾಜು ಪ್ರಕ್ರಿಯೆ ನಡೆಯಲಿದೆ.
ನಗರಸಭಾ ವ್ಯಾಪ್ತಿಯ ನಳ್ಳಿ ನೀರು ಪೂರೈಕೆಧಿಯಲ್ಲಿ ವ್ಯತ್ಯಯ ಉಂಟಾದರೆ ಟ್ಯಾಂಕರ್ ಮೂಲಕ ಪ್ರತಿ ಮನೆಗೆ ತಲಾ 500 ಲೀ. ನೀರು ಸರಬರಾಜು ಮಾಡಲಿದ್ದಾರೆ.
ಸಹಾಯವಾಣಿ ಸಂಖ್ಯೆ
ದೂರುಗಳಿದ್ದಲ್ಲಿ 8496989248, 8496989166, 8496989184, 8496989122 ಮೊಬೈಲ್ ನಂಬರ್ಗೆ
ಕರೆ ಮಾಡಿ ತಿಳಿಸಬಹುದು. ಅದಲ್ಲದೆ ನಗರಸಭೆಯ ಕಾರ್ಯಪಾಲಕ ಅಭಿಯಂತ ಕೆ. ಗಣೇಶ್ (8496989759) ಹಾಗೂ ಪರಿಸರ ಅಭಿಯಂತ ರಾಘವೇಂದ್ರ ಬಿ. ಎಸ್.(9448507244) ಅವರಿಗೆ ತಿಳಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
MUST WATCH
ಹೊಸ ಸೇರ್ಪಡೆ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್