ಬಜೆ: ನೀರೆತ್ತುವ ಪ್ರಕ್ರಿಯೆ ಆರಂಭ


Team Udayavani, May 8, 2019, 6:15 AM IST

baje

ಉಡುಪಿ: ನಗರಕ್ಕೆ ನೀರುಣಿಸುವ ಸಲುವಾಗಿ ನಗರಸಭೆ ಆಯುಕ್ತರ ಸಹಿತ ಅಧಿಕಾರಿಗಳು ಬಜೆ ಡ್ಯಾಂನಲ್ಲಿ ಬೀಡುಬಿಟ್ಟಿದ್ದಾರೆ. ನೀರೆತ್ತುವ ಪ್ರಕ್ರಿಯೆ ರವಿವಾರ ಆರಂಭವಾಗಬೇಕಿತ್ತಾದರೂ ಕಾರಣಾಂತರಗಳಿಂದ ವಿಳಂಬವಾಗಿತ್ತು. ಸೋಮವಾರ ರಾತ್ರಿ ಸುಮಾರು 11.30ರ ವರೆಗೂ ಅಧಿಕಾರಿಗಳು ಸ್ಥಳದಲ್ಲಿದ್ದರು. ಮಂಗಳವಾರ ಬೆಳಗ್ಗೆ 10 ಗಂಟೆಗೆ ಭಂಡಾರಿಬೆಟ್ಟುವಿನ ಬ್ರಹ್ಮರಗುಂಡಿ ಪ್ರದೇಶದಲ್ಲಿ ನೀರೆತ್ತುವಿಕೆ ಆರಂಭಗೊಂಡಿದೆ.

2 ದೋಣಿ ಹಾಗೂ 125 ಅಶ್ವಶಕ್ತಿ ಎಂಜಿನ್‌ವುಳ್ಳ 25 ಎಚ್‌ಪಿ ಸಾಮರ್ಥ್ಯದ 3 ಪಂಪ್‌ಬಳಸಿ ನೀರೆತ್ತಲಾಗುತ್ತಿದೆ. ಸುಮಾರು 12 ಕಾರ್ಮಿಕರು ಇದರಲ್ಲಿ ತೊಡಗಿಸಿಕೊಂಡಿದ್ದರು. ಈ ಪ್ರಕ್ರಿಯೆಯು ಹಗಲು ರಾತ್ರಿ ನಿರಂತರವಾಗಿ ನಡೆಯುತ್ತಿದೆ.

ಇಂದಿನಿಂದ ಪೂರೈಕೆ
ನೀರೆತ್ತುವ ಪ್ರಕ್ರಿಯೆ ಮಳೆಬರುವ ತನಕ ನಿರಂತರವಾಗಿ ನಡೆಯಲಿದೆ. ಪ್ರಸ್ತುತ ನೀರಿನ ಲಭ್ಯತೆ 20ರಿಂದ 25 ದಿನಗಳಿಗಾಗುವಷ್ಟು ಸಾಕಾಗಬಹುದು. ಇಂದಿನಿಂದ ಕಲ್ಮಾಡಿ, ಕೊಡವೂರು, ಪಾಳೆಕಟ್ಟೆ ಪ್ರದೇಶಕ್ಕೆ ನಳ್ಳಿ ಮೂಲಕ ನೀರು ಪೂರೈಕೆ ನಡೆಯಲಿದೆ. ಪುತ್ತಿಗೆ ಭಾಗದಲ್ಲಿ ನೀರೆತ್ತುವ ಪ್ರಕ್ರಿಯೆ ಆರಂಭಗೊಂಡ ಅನಂತರ ಉಳಿದ ಪ್ರದೇಶಕ್ಕೆ ನೀರು ಪೂರೈಸುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗಲಿದೆ ಎನ್ನುತ್ತಾರೆ ಎಂಜಿನಿಯರ್‌ ಗಣೇಶ್‌.

ಹೂಳೆತ್ತಿದ್ದರೆ 4 ವರ್ಷದ ನೀರು
ಡ್ಯಾಂನ ಸುತ್ತಮುತ್ತ ಸುಮಾರು 10ರಿಂದ 15 ಅಡಿಗಳಷ್ಟು ಹೂಳು ತುಂಬಿದೆ. 20 ವರ್ಷ ಗಳಿಂದಲೂ ಹೂಳೆತ್ತುವ ಪ್ರಕ್ರಿಯೆ ನಡೆಯದಿರುವುದೇ ಇದಕ್ಕೆಲ್ಲ ಕಾರಣ. ನೀರೆತ್ತುವ ಜತೆಗೆ ಹೂಳು ತೆಗೆಯಲು ಜಿಲ್ಲಾಡಳಿತ ಅನುಮತಿ ನೀಡಿದರೆ ಕನಿಷ್ಠ 4 ವರ್ಷಕ್ಕೆ ಉಡುಪಿಗೆ ನೀರಿನ ಸಮಸ್ಯೆ ಉದ್ಬವಿಸದು ಎಂದು ತಿಳಿಸುತ್ತಾರೆ ಸ್ಥಳೀಯರು.

ಗಂಟೆಗೆ ಲಕ್ಷ ಲೀ. ನೀರು
ಮಂಗಳವಾರ ಮುಂಜಾನೆ ಎರಡು ಪಂಪ್‌ ಮೂಲಕ ನೀರೆತ್ತುವ ಪ್ರಕ್ರಿಯೆ ನಡೆಯಿತು. ಸಂಜೆ 6 ಗಂಟೆ ಹೊತ್ತಿಗೆ ಮತ್ತೂಂದು ಪಂಪ್‌ ಅಳವಡಿಸಲಾಯಿತು. ಈ ಪಂಪ್‌ಗ್ಳಿಂದ ಗಂಟೆಗೆ 1 ಲಕ್ಷ ಲೀ. ನೀರು ಬಜೆ ಪಂಪ್‌ ಇರುವಲ್ಲಿಗೆ ಸರಬರಾಜು ಆಗುತ್ತಿದೆ.

ಜನರ ಸಹಕಾರವೂ ಅಗತ್ಯ
ಬಜೆ ಅಣೆಕಟ್ಟು ಸಹಿತ ಭಂಡಾರಿಬೆಟ್ಟು ಹಾಗೂ ಪುತ್ತಿಗೆ ಪ್ರದೇಶದಲ್ಲಿ ಕಸಕಡ್ಡಿ ಸಹಿತ ತ್ಯಾಜ್ಯ ತುಂಬಿದ್ದು, ಜನ ಜಾಗೃತಿ ಅಗತ್ಯ ಎಂಬುದು ಸ್ಥಳೀಯರ ಆಗ್ರಹ.
ಶಾಸಕ ರಘುಪತಿ ಭಟ್‌ ಭೇಟಿ ನಗರದ ನೀರಿನ ಸಮಸ್ಯೆ ಪರಿಹರಿಸಲು ಪಣತೊಟ್ಟಿರುವ ಶಾಸಕ ಕೆ. ರಘುಪತಿ ಭಟ್‌ ಅವರು ಮಂಗಳವಾರ ಬಜೆ ಡ್ಯಾಂ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ನಗರಸಭಾ ಸದಸ್ಯರಾದ ಪ್ರಭಾಕರ ಪೂಜಾರಿ, ಗಿರೀಶ್‌ ಅಂಚನ್‌, ಮಂಜುನಾಥ್‌ ಮಣಿಪಾಲ, ಗಿರಿಧರ ಆಚಾರ್ಯ, ಪ್ರಮುಖರಾದ ಚಂದ್ರಶೇಖರ್‌ ಕರಂಬಳ್ಳಿ ಉಪಸ್ಥಿತರಿದ್ದರು.

ನಿರಂತರ ನೀರು ಯಾವಾಗ?
ಮಾ. 24ರ ಮೊದಲು ನಗರಕ್ಕೆ 24×7 ನೀರು ಪೂರೈಕೆಯಾಗುತ್ತಿತ್ತು. ಅನಂತರ 3 ದಿನಕ್ಕೊಮ್ಮೆ ಸೀಮಿತವಾಯಿತು. ಬರು ಬರುತ್ತಾ 4-5 ದಿನ ಆದರೂ ನೀರು ಲಭಿಸುತ್ತಿರಲಿಲ್ಲ. ಜನರ ಬೇಡಿಕೆಯನ್ನು ಮನಗಂಡು ನಗರಸಭೆ ಕೊನೆಗೂ ಎಚ್ಚೆತ್ತುಕೊಂಡಿದೆ. ಲಭ್ಯತೆ, ಪೂರೈಕೆಗೆ ಅನುಗುಣವಾಗಿ ನೀರು ಪೂರೈಕೆ ಮಾಡುತ್ತೇವೆ ಎಂದು ನಗರಸಭೆಯ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.