ಸಮತೋಲಿತ ಶಿಕ್ಷಣ ಅಗತ್ಯ: ಜೆರಾಲ್ಡ್ ಲೋಬೋ


Team Udayavani, Jun 2, 2019, 11:15 AM IST

lobo

ಮಲ್ಪೆ: ದೇಹದ ಆರೋಗ್ಯಕ್ಕೆ ಹೇಗೆ ಸಮತೋಲಿತ ಆಹಾರ‌ ಅಗತ್ಯವಿದೆಯೇ ಹಾಗೆಯೇ ಇಂದಿನ ವಿದ್ಯಾರ್ಥಿಗಳಿಗೆ ಪಾಠ, ಪಠ್ಯೇತರ ಜ್ಞಾನದ ಜತೆಗೆ ಮೌಲ್ಯಗಳುಳ್ಳ ನೈತಿಕ ಶಿಕ್ಷಣದ ಅಗತ್ಯವಿದೆ. ತರಗತಿ ಕೋಣೆಗಳಲ್ಲಿ ನಾಳಿನ ಉಜ್ವಲ ಭಾರತದ ಪ್ರಜ್ಞಾವಂತ ನಾಗರಿಕರು ರೂಪುಗೊಳ್ಳುತ್ತಿದ್ದಾರೆ ಎಂದು ಉಡುಪಿ ಧರ್ಮಪ್ರಾಂತ್ಯದ ಬಿಷಪ್‌ ಅತಿ ವಂದನೀಯ ಡಾ| ಜೆರಾಲ್ಡ್ ಐಸಾಕ್‌ ಲೋಬೋ ಹೇಳಿದರು.

ಕಲ್ಯಾಣಪುರ ಸಂತೆಕಟ್ಟೆಯ ಮೌಂಟ್ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ಸುಸಜ್ಜಿತ ನಾಲ್ಕು ಮಹಡಿಗಳ ನೂತನ ಶಾಲಾ ಕಟ್ಟಡವನ್ನು ಅವರು ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಯಾಗಿ ಜಿ.ಪಂ. ಸದಸ್ಯ ಜನಾರ್ದನ ತೋನ್ಸೆ ಮಾತನಾಡಿ 1997ರಲ್ಲಿ ಕಲ್ಯಾಣಪುರ ಗ್ರಾ.ಪಂ. ಅಧ್ಯಕ್ಷನಾಗಿ ಶಾಲೆ ಆರಂಭಿಸಲು ಅನುಮತಿ ಪತ್ರ ನೀಡುವಾಗ ಕೇವಲ 16 ವಿದ್ಯಾರ್ಥಿಗಳು ಇದ್ದು, ಇಂದು ತನ್ನ 22 ವರ್ಷಗಳಲ್ಲಿ ಶಿಸ್ತು, ಪಠ್ಯ, ಕ್ರೀಡೆಗಳಲ್ಲಿ ಅದ್ಭುತ ಸಾಧನೆ ತೋರಿಸಿದೆ. ಪ್ರಸ್ತುತ 1,500ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಾರೆ ಎಂದರೆ ಆಡಳಿತ ಮಂಡಳಿ ಹಾಗೂ ಶಿಕ್ಷಕ ಬದ್ಧತೆ ತೋರಿಸುತ್ತದೆ ಎಂದವರು ತಿಳಿಸಿದರು.

ಶಾಲಾ ಕಟ್ಟಡದ ಗುತ್ತಿಗೆದಾರರು, ತಂತ್ರಜ್ಞರು, ಕಾರ್ಮಿಕರನ್ನು ಸಮ್ಮಾನಿಸ ಲಾಯಿತು.

ಶಾಲಾ ಸಂಚಾಲಕ ವಂದನೀಯ ಡಾ| ಲೆಸ್ಲಿ ಡಿ’ಸೋಜಾ ಅವರನ್ನು ಬಿಷಪರು ಸಮ್ಮಾನಿಸಿದರು.

ಶಾಲೆಯು ಸುಸಜ್ಜಿತ ತರಗತಿ, ಪ್ರಯೋಗಾಲಯ, ಗ್ರಂಥಾಲಯ, ಶಿಕ್ಷಕರ ಕೊಠಡಿ, ಕಂಪ್ಯೂಟರ್‌ ಲ್ಯಾಬ್‌, ಶೌಚಾಲಯ, ಪ್ರತಿ ಮಹಡಿಯಲ್ಲಿ ಸಂಸ್ಕರಿಸಿದ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಸಭಾಂಗಣ ಹೊಂದಿದೆ ಎಂದರು. ಸಮಾರಂಭದಲ್ಲಿ ಮುಖ್ಯ ಅತಿಥಿ ಡಾ| ಜೆರಿ ವಿನ್ಸೆಂಟ್ ಡಯಾಸ್‌, ಸಹಾಯಕ ಧರ್ಮಗುರು ಕ್ಲ್ಯಾನಿ ಡಿ’ಸೋಜಾ,ಚರ್ಚ್‌ ಪಾಲನ ಮಂಡಳಿಯಉಪಾಧ್ಯಕ್ಷ ಬ್ಯಾಪ್ಟಿಸ್ಟ್‌ ಡಯಾಸ್‌, ಕಾರ್ಯದರ್ಶಿ ರೊನಾಲ್ಡ್ ಡಿ’ಸೋಜಾ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಡಾ| ರವಿಶಂಕರ್‌ ಶೆಣೈ, ಧರ್ಮಗುರುಗಳು, ಧರ್ಮಭಗಿನಿಯರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.ಶಾಲಾ ಸಂಚಾಲಕ ಡಾ| ಲೆಸ್ಲಿ ಡಿ’ಸೋಜಾ ಸ್ವಾಗತಿಸಿದರು. ಶಿಕ್ಷಕಿಯರಾದ ವನಿತಾ, ಲವೀನಾ ನಿರೂಪಿಸಿದರು. ಶಾಲಾ ಮುಖ್ಯ ಶಿಕ್ಷಕಿ ವಂದಿತಾ ವಂದಿಸಿದರು.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.