ಇಂದಿನಿಂದ ಯಾಂತ್ರಿಕ ಮೀನುಗಾರಿಕೆ ನಿಷೇಧ; ಡೀಸೆಲ್‌ ಹೊರೆಯಿಂದ ಬಹುತೇಕ ಬೋಟುಗಳು ನಷ್ಟದಲ್ಲಿ


Team Udayavani, Jun 1, 2022, 7:15 AM IST

ಇಂದಿನಿಂದ ಯಾಂತ್ರಿಕ ಮೀನುಗಾರಿಕೆ ನಿಷೇಧ; ಡೀಸೆಲ್‌ ಹೊರೆಯಿಂದ ಬಹುತೇಕ ಬೋಟುಗಳು ನಷ್ಟದಲ್ಲಿ

ಮಲ್ಪೆ/ಮಂಗಳೂರು: ರಾಜ್ಯ ಸರಕಾರ ಯಾಂತ್ರಿಕ ಮೀನುಗಾರಿಕೆಗೆ ಜೂ. 1ರಿಂದ ಜು. 31ರ ವರೆಗೆ ನಿಷೇಧ ಹೇರಿರುವ ಹಿನ್ನೆಲೆಯಲ್ಲಿ ಎಲ್ಲ ಯಾಂತ್ರಿಕ ಮೀನುಗಾರರು ತಮ್ಮ ಬೋಟುಗಳನ್ನು ದಡ ಸೇರಿಸುತ್ತಿದ್ದಾರೆ.

ಬುಧವಾರ ಈ ಋತುವಿನ ಯಾಂತ್ರಿಕ ಮೀನುಗಾರಿಕೆಗೆ ಅಧಿಕೃತ ತೆರೆ ಬೀಳಲಿದೆ. ಎಪ್ರಿಲ್‌, ಮೇ ತಿಂಗಳು ವಿಪುಲ ವಾಗಿ ಮೀನುಗಾರಿಕೆ ನಡೆಸುವ ಸಮಯ. ಆಗ ಅತ್ಯಧಿಕ ಸ‌ಂಖ್ಯೆಯಲ್ಲಿ ಮೀನುಗಾರಿಕೆ ನಡೆಯುತ್ತಿದೆ. ಕೆಲವು ವರ್ಷಗಳಿಂದ ಸಿಗದ ಬೂತಾಯಿ, ಬಂಗುಡೆ ಮತ್ತು ಬೊಂಡಾಸ್‌ ಮೀನುಗಳು ಈ ಬಾರಿ ಕಾಣಸಿಕ್ಕಿವೆ. ಆದರೆ ಏರುತ್ತಿರುವ ಡೀಸೆಲ್‌ ದರ ಮೀನು ಗಾರಿಕೆಗೆ ತಡೆಯೊಡ್ಡಿದೆ. ನಷ್ಟದ ಭೀತಿಯಲ್ಲಿ ಮಾಲಕರು ಬೋಟುಗಳನ್ನು ಲಂಗರು ಹಾಕಿದ್ದಾರೆ.

ರೋಡ್‌ಸೆಸ್‌ನಿಂದ
ವಿನಾಯಿತಿಗೆ ಆಗ್ರಹ
ಬೋಟುಗಳು ನೀರಿನಲ್ಲಿ ಚಲಿಸುವುದರಿಂದ ಮೀನುಗಾರಿಕೆಗೆ ರೋಡ್‌ಸೆಸ್‌ ಬರುವುದಿಲ್ಲ. ಈಗಿನ ಡೀಸೆಲ್‌ ದರದಲ್ಲಿ ಒಂದು ಪ್ರಯಾಣದಲ್ಲಿ 6 ಲಕ್ಷ ರೂ. ಮೌಲ್ಯದ ಮೀನು ಹಿಡಿದರೂ ಲಾಭದಾಯಕವಲ್ಲ. ಆದ್ದರಿಂದ ಕರಾವಳಿ ಭಾಗದ ಸಂಸದರು, ಶಾಸಕರು ಸೇರಿ ಮೀನುಗಾರರಿಗೆ ರೋಡ್‌ಸೆಸ್‌ನಿಂದ ವಿನಾಯಿತಿ ಸಿಗುವಂತೆ ಮಾಡಬೇಕು ಎಂದು ಮಲ್ಪೆ ಮೀನುಗಾರರ ಸಂಘದ ಮಾಜಿ ಅಧ್ಯಕ್ಷ ಸತೀಶ್‌ ಕುಂದರ್‌ ಆಗ್ರಹಿಸಿದ್ದಾರೆ.

ಮೀನು ಇಳಿಸಲು ಅವಕಾಶ
ಜೂ. 1ರಿಂದ ಯಾಂತ್ರಿಕ ಮೀನು ಗಾರಿಕೆಗೆ ರಜೆ ಇದ್ದರೂ ಬಂದರು ಸೇರಿರುವ ಬೋಟುಗಳಿಂದ ಮೀನು ಖಾಲಿ ಮಾಡಲು ಕೆಲವು ದಿನಗಳ ಅವಕಾಶ ಕಲ್ಪಿಸಲಾಗಿದೆ ಎಂದು ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಕೆ. ಸುವರ್ಣ ತಿಳಿಸಿದ್ದಾರೆ.

ಕರ್ನಾಟಕ ಕರಾವಳಿ ಮೀನುಗಾರಿಕೆ (ನಿಯಂತ್ರಣ) ಕಾಯ್ದೆ 198 ರ ಅನ್ವಯ ಉಡುಪಿ ಜಿಲ್ಲೆಯ ಕರಾವಳಿಯಲ್ಲಿ ಜೂ. 1ರಿಂದ ಜು. 31ರವರೆಗೆ ಯಾಂತ್ರಿಕೃತ ಮೀನುಗಾರಿಕೆ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಎಲ್ಲ ಮೀನುಗಾರರು ಕಡ್ಡಾಯವಾಗಿ ಸರಕಾರದ ಆದೇಶವನ್ನು ಪಾಲಿಸಬೇಕಾಗಿದೆ. ಕಾನೂನು ಉಲ್ಲಂಘಿಸಿದರೆ ಸರಕಾರದಿಂದ ಸಿಗುವ ಮಾರಾಟ ಕರ ರಹಿತ ಡೀಸೆಲ್‌, ಇತರ ಯಾವುದೇ ಸೌಲಭ್ಯಗಳು ಸಿಗುವುದಿಲ್ಲ ಮತ್ತು ದಂಡನೆಗೆ ಗುರಿಯಾಗುತ್ತಾರೆ.
– ಗಣೇಶ್‌ ಕೆ., ಜಂಟಿ ನಿರ್ದೇಶಕರು, ಮೀನುಗಾರಿಕಾ ಇಲಾಖೆ

ಮಳೆಗಾಲದಲ್ಲಿ ನಾಡದೋಣಿ
ಯಾಂತ್ರಿಕ ಮೀನುಗಾರಿಕೆಗೆ ನಿಷೇಧವಿದ್ದರೂ ನಾಡದೋಣಿ ಮೀನುಗಾರಿಕೆಗೆ ಅವಕಾಶವಿದೆ. 12 ನಾಟಿಕಲ್‌ ಮೈಲುನೊಳಗೆ 10 ಅಶ್ವಶಕ್ತಿಯ ಎಂಜಿನ್‌ ಬಳಸಿದ ದೋಣಿಗಳಲ್ಲಿ ಸಮುದ್ರತೀರದಲ್ಲಿ ಮೀನುಗಾರಿಕೆ ನಡೆಸಬಹುದಾಗಿದೆ ಎಂದು ಮಲ್ಪೆ ಸಾಂಪ್ರದಾಯಿಕ ನಾಡದೋಣಿ ಮೀನುಗಾರ ಸಂಘದ ಅಧ್ಯಕ್ಷ ಸುಂದರ ಪಿ. ಸಾಲ್ಯಾನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.