ಬೆಂಗಳೂರು – ವಾಸ್ಕೋ ರೈಲು: ಇಂದು ದಿನಾಂಕ ನಿರ್ಣಯ?
Team Udayavani, Feb 28, 2020, 1:21 AM IST
ಸಾಂದರ್ಭಿಕ ಚಿತ್ರ
ಕುಂದಾಪುರ: ಬೆಂಗಳೂರಿನಲ್ಲಿ ಗುರುವಾರ ನಡೆದ ಭಾರತೀಯ ರೈಲ್ವೇಯ ವೇಳಾಪಟ್ಟಿ ಸಮಿತಿ (ಐಆರ್ಟಿಸಿ) ಸಭೆಯಲ್ಲಿ ಬೆಂಗಳೂರು – ಉಡುಪಿ – ಕಾರವಾರ – ವಾಸ್ಕೋ ರೈಲು ಸಂಚಾರವನ್ನು ಆರಂಭಿಸುವ ಕುರಿತು ಮತ್ತು ಅದರ ಸಾಧಕ – ಬಾಧಕಗಳ ಬಗ್ಗೆ ಭಾರೀ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.
ಶುಕ್ರವಾರವೂ ಸಭೆ ಮುಂದುವರಿ ಯಲಿದ್ದು, ವಾಸ್ಕೋ ರೈಲು ಓಡಾಟ ಆರಂಭದ ದಿನಾಂಕ ನಿರ್ಧಾರ ವಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಈಗಾಗಲೇ ರೈಲಿನ ಕೋಚ್ಗಳು ಬೆಂಗಳೂರಿಗೆ ಆಗಮಿಸಿದ್ದು, ವೇಳಾಪಟ್ಟಿ ಪ್ರಕಟವಾಗಿ 15 ದಿನಗಳಾಗಿವೆ. ಆದರೆ ರೈಲು ಸಂಚಾರ ಆರಂಭಕ್ಕೆ ಸಂಬಂಧಪಟ್ಟ ರೈಲ್ವೇ ಅಧಿಕಾರಿಗಳು, ಕೊಂಕಣ್ ರೈಲ್ವೇ ಅಧಿಕಾರಿಗಳು ಮೀನಮೇಷ ಎಣಿಸುತ್ತಿರುವ ಬಗ್ಗೆ ಕರಾವಳಿಯಾದ್ಯಂತ ಆಕ್ರೋಶ ಹೆಚ್ಚುತ್ತಿದೆ.
ಸಚಿವರಿಗೆ ಹೆಗ್ಡೆ ಕರೆ
ಇದೇ ವಿಚಾರವಾಗಿ ರೈಲ್ವೇ ಸಚಿವ ಸುರೇಶ್ ಅಂಗಡಿ ಅವರಿಗೆ ಗುರುವಾರ ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ಕೊಂಕಣ ರೈಲ್ವೇ ಅಧಿಕಾರಿಗಳ ನಿರ್ಲಕ್ಷ್ಯದ ಕುರಿತು, ರೈಲ್ವೇ ವಿಳಂಬದಿಂದಾಗಿ ಕರಾವಳಿ ಭಾಗದಲ್ಲಿ ವ್ಯಕ್ತವಾಗುತ್ತಿರುವ ಜನರ ಆಕ್ರೋಶವನ್ನು ಸಚಿವರ ಗಮನಕ್ಕೆ ತಂದಿದ್ದಾರೆ. ಸಚಿವರು ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಜಯಪ್ರಕಾಶ ಹೆಗ್ಡೆ ಉದಯವಾಣಿಗೆ ತಿಳಿಸಿದ್ದಾರೆ.
ಬೆಂಗಳೂರು – ವಾಸ್ಕೋ ರೈಲು ಸಂಚಾರ ರದ್ದಾಗಿದೆ ಎಂದು ಅಧಿಕೃತವಾಗಿ ಗೊತ್ತಿರುವವರು ನನಗೂ ಬಂದು ಹೇಳಲಿ. ನಾನು ಕರಾವಳಿ ಭಾಗದ ಜನತೆಯ ಅನುಕೂಲಕ್ಕಾಗಿ ರೈಲ್ವೇ ಸಚಿವರಿಗೆ ಮನವಿ ಸಲ್ಲಿಸಿದ್ದು, ಇದಕ್ಕೆ ಸ್ಪಂದಿಸಿದ ಸುರೇಶ್ ಅಂಗಡಿಯವರು, ಹೊಸ ರೈಲು ನೀಡಿದ್ದಾರೆ. ಶೀಘ್ರ ಆರಂಭಿಸುವುದಾಗಿಯೂ ಭರವಸೆ ನೀಡಿದ್ದಾರೆ.
– ಶೋಭಾ ಕರಂದ್ಲಾಜೆ, ಸಂಸದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್
Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ
Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ
Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್
Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ