ಬೆಂಗಳೂರು – ವಾಸ್ಕೋ ರೈಲು: ಇಂದು ಸಿಎಂ ಯಡಿಯೂರಪ್ಪ ಚಾಲನೆ
Team Udayavani, Mar 7, 2020, 6:17 AM IST
ಕುಂದಾಪುರ/ ಉಡುಪಿ: ಕರಾವಳಿಗರ ಬಹುದಿನಗಳ ಕನಸು ಶನಿವಾರ ನನಸಾಗಲಿದ್ದು, ರಾಜಧಾನಿ ಬೆಂಗಳೂರನ್ನು ಸಂಪರ್ಕಿಸುವ ವಾಸ್ಕೋ – ಬೆಂಗಳೂರು ರೈಲು ಸಂಚಾರ ಆರಂಭಿಸಲಿದೆ. ಮಾ. 7ರಂದು ಬೆಳಗ್ಗೆ 9 ಗಂಟೆಗೆ ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಲ್ಲಿ ಮುಖ್ಯ ಮಂತ್ರಿ ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ.
ಮಾ. 7ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ಯಶವಂತಪುರದಿಂದ ಸಂಚಾರ ಆರಂಭಿಸಲಿದೆ.
ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅಧ್ಯಕ್ಷತೆ ವಹಿಸಲಿದ್ದು, ಸಚಿವರಾದ ಸದಾನಂದ ಗೌಡ,ನಿರ್ಮಲಾ ಸೀತಾರಾಮನ್, ಸಂಸದರಾದ ನಳಿನ್ ಕುಮಾರ್ ಕಟೀಲು, ಶೋಭಾ ಕರಂದ್ಲಾಜೆ, ಕುಂದಾಪುರ ಹಿತರಕ್ಷಣ ಸಮಿತಿ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ವೇಳಾಪಟ್ಟಿ
ಪ್ರತೀ ದಿನ ಸಂಜೆ 6ಕ್ಕೆ ಯಶವಂತಪುರದಿಂದ 14 ಬೋಗಿಗಳ ಈ ರೈಲು ಹೊರಡಲಿದ್ದು, ಕುಣಿಗಲ್ ಮೂಲಕವಾಗಿ ಹಾಸನಕ್ಕೆ ರಾತ್ರಿ 9.15ಕ್ಕೆ,ಪಡೀಲ್ಬೆಳಗ್ಗಿನ ಜಾವ 3ಕ್ಕೆ, ಉಡುಪಿಗೆ ಬೆಳಗ್ಗೆ 5ಕ್ಕೆ, ಕುಂದಾಪುರ 5.30ಕ್ಕೆ, ಕಾರವಾರಕ್ಕೆ ಬೆಳಗ್ಗೆ 8.30 ಮತ್ತು ವಾಸ್ಕೋಗೆ ಬೆಳಗ್ಗೆ 10.30ಕ್ಕೆ ತಲುಪಲಿದೆ. ಮತ್ತೆ ವಾಪಾಸು ವಾಸ್ಕೋದಿಂದ ಸಂಜೆ 5.20ಕ್ಕೆ ಹೊರಡಲಿದ್ದು, ಸಂಜೆ 7.25ಕ್ಕೆ ಕಾರವಾರ, 9.30ಕ್ಕೆ ಕುಂದಾಪುರ, 10ಕ್ಕೆ ಉಡುಪಿ, ಬೆಳಗ್ಗೆ 8ಕ್ಕೆ ಯಶವಂತಪುರ ತಲುಪಲಿದೆ.
ಎಲ್ಲೆಲ್ಲ ನಿಲುಗಡೆ?
ಯಶವಂತಪುರ, ಚಿಕ್ಕಬಾಣಾವರ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಾಣಿಯೂರು, ಕಬಕ – ಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾಕೂìರು, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರಸ್ತೆ, ಅಂಕೋಲಾ, ಕಾರವಾರ, ವಾಸ್ಕೋಗಳಲ್ಲಿ ನಿಲುಗಡೆಯಾಗಲಿದೆ.
ಬಂಟ್ವಾಳ – ಮೂಲ್ಕಿ: ನಿಲುಗಡೆ
ಈ ಮೊದಲಿನ ವೇಳಾಪಟ್ಟಿಯಲ್ಲಿ ಬಂಟ್ವಾಳ, ಮೂಲ್ಕಿ, ಕಾಣಿಯೂರಿನಲ್ಲಿ ಈ ರೈಲಿಗೆ ನಿಲುಗಡೆಗೆ ಅವಕಾಶವಿರಲಿಲ್ಲ. ಆದರೆ ಆ ಬಳಿಕ ಇಲ್ಲಿನ ರೈಲು ಪ್ರಯಾಣಿಕರು, ಜನಪ್ರತಿನಿಧಿಗಳು, ಸಮಿತಿಗಳ ಮನವಿಗೆ ಅಧಿಕಾರಿಗಳು ಸ್ಪಂದಿಸಿ ದ್ದಾರೆ. ಪರಿಷ್ಕೃತ ವೇಳಾಪಟ್ಟಿಯಲ್ಲಿ ಹೆಚ್ಚುವರಿಯಾಗಿ ಕಾಣಿಯೂರು, ಬಂಟ್ವಾಳ, ಮೂಲ್ಕಿ ಹಾಗೂ ಹೊನ್ನಾವರದಲ್ಲಿಯೂ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
ಕಾರವಾರ ರೈಲು ರದ್ದು
ಇದುವರೆಗೆ ಬೆಂಗಳೂರು- ಕಾರವಾರ ನಡುವೆ ವಾರದಲ್ಲಿ ಮೂರು ದಿನ ಮೈಸೂರು ಮೂಲಕ ಸಂಚರಿಸುತ್ತಿದ್ದ ರಾತ್ರಿ ರೈಲು (16523-16524) ಮತ್ತು ಮೂರು ದಿನ ಶ್ರವಣಬೆಳಗೊಳ ಮೂಲಕ ಸಂಚರಿಸುತ್ತಿದ್ದ ರೈಲು (16513/16514) ಸೇವೆಯನ್ನು ರದ್ದುಗೊಳಿಸಲಾಗಿದೆ. ಪೆರ್ನಮ್- ಕಾರವಾರ ನಡುವೆ ಓಡಾಡುತ್ತಿದ್ದ ಡೆಮು ರೈಲು (70103/104) ಆಂಶಿಕವಾಗಿ ರದ್ದಾಗಿದೆ. ಈ ರೈಲು ಇನ್ನು ಮುಂದೆ ಕಾರವಾರದಿಂದ ಮಡಗಾಂವ್ ವರೆಗೆ ಸಂಚರಿಸದೆ ಮಡಗಾಂವ್ ನಿಂದ ಪೆರ್ನಮ್ ನಡುವೆ ಸಂಚರಿಸಲಿದೆ. ಈ ಸಂಚಾರ ಮಾ. 7ರಿಂದ ಆರಂಭವಾಗಲಿದೆ ಎಂದು ರೈಲ್ವೇ ಮಂಡಳಿ ಪ್ರಕಟನೆ ತಿಳಿಸಿದೆ.
ರೈಲು ರದ್ದು: ವಿರೋಧ
ಮಂಗಳೂರು: ಬೆಂಗಳೂರು -ಕಾರವಾರ ರಾತ್ರಿ ರೈಲ್ನ್ನು ಶನಿವಾರದಿಂದ ರದ್ದುಪಡಿಸುವ ರೈಲ್ವೆ ಸಚಿವಾಲಯದ ನಿರ್ಧಾರಕ್ಕೆ ರೈಲು ಬಳಕೆದಾರರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಇನ್ನು ಮುಂದಕ್ಕೆ ಈ ರೈಲು ಕಾರವಾರದ ಭಾಗವನ್ನು ಬಿಟ್ಟು ಬೆಂಗಳೂರಿನಿಂದ ಮಂಗಳೂರು ಸೆಂಟ್ರಲ್ ಮೂಲಕ ಕಣ್ಣೂರಿಗೆ ಚಲಿಸಲಿದೆ.
ಬೆಂಗಳೂರು-ಕಾರವಾರ ರೈಲು ಕಾರವಾರ, ಕುಂದಾಪುರ, ಉಡುಪಿ ಭಾಗದ ಜನರಿಗೆ ಮೈಸೂರು ಸಂಚಾರಕ್ಕೆ ಉಪಯುಕ್ತವಾಗಿತ್ತು. ಕಾರವಾರಕ್ಕೆ ಹೊಸ ರೈಲು ಪ್ರಾರಂಭದ ನಂತರವೂ ಬೆಂಗಳೂರು-ಕಾರವಾರ ಭಾಗದಲ್ಲಿ ಮೈಸೂರು, ಬೆಂಗಳೂರು ರೈಲು ಸಂಚಾರಕ್ಕೆ ಉತ್ತಮ ಬೇಡಿಕೆ ಇರುತ್ತದೆ. ಇದೀಗ ರೈಲು ಸಂಚಾರ ರದ್ದುಗೊಳಿಸಿರುವುದರಿಂದ ಈ ಭಾಗದ ಜನರಿಗೆ ಅನಾನುಕೂಲವಾಗಲಿದ್ದು ಈ ರೈಲನ್ನು ಮುಂದುವರಿಸಬೇಕು ಎಂದು ಪಶ್ಚಿಮ ಕರಾವಳಿ ರೈಲ್ವೇ ಯಾತ್ರಿಕರ ಅಭಿವೃದ್ದಿ ಸಂಘದ ಸಲಹೆಗಾರ ಅನಿಲ್ ಹೆಗೆzಯವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ