ಬ್ಯಾಂಕ್ ಆಫ್ ಬರೋಡ: ಸಂಸ್ಥಾಪನ ದಿನಾಚರಣೆ
Team Udayavani, Jul 22, 2019, 5:40 AM IST
ಉಡುಪಿ: ಬ್ಯಾಂಕ್ ಆಫ್ ಬರೋಡದ 112ನೇ ಸಂಸ್ಥಾಪನ ದಿನಾಚರಣೆಯು ಬ್ಯಾಂಕಿನ ಪ್ರಾದೇಶಿಕ ಕಚೇರಿ ಉಡುಪಿ ಆಶ್ರಯದಲ್ಲಿ ಅಂಬಲಪಾಡಿ ಶ್ಯಾಮಿಲಿ ಸಭಾಂಗಣದ ಪ್ರಥಮ ಮಹಡಿಯಲ್ಲಿ ಶನಿವಾರ ನಡೆಯಿತು.
ಹಿಂದಿನ ವಿಜಯ ಬ್ಯಾಂಕಿನ ನಿವೃತ್ತ ಕಾರ್ಯನಿರ್ವಾಹಕ ನಿರ್ದೇಶಕ ಕೆ.ಆರ್. ಶೆಣೈ ಅವರು ದಿಕ್ಸೂಚಿ ಭಾಷಣಗೈದು, ಗುಜರಾತ್ನಲ್ಲಿ 1908ರಲ್ಲಿ ಸ್ಥಾಪನೆಗೊಂಡ ಬ್ಯಾಂಕ್ ಆಫ್ ಬರೋಡ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ, ಬ್ಯಾಂಕ್ ಆಫ್ ಬರೋಡದೊಂದಿಗೆ ದೇನಾ ಬ್ಯಾಂಕ್, ವಿಜಯ ಬ್ಯಾಂಕ್ ವಿಲೀನಗೊಂಡಿದ್ದು, ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿದೆ ಎಂದರು.
ಮಣಿಪಾಲ ಮಾಹೆಯ ಸಹಕುಲಾ ಧಿಪತಿ ಡಾ| ಎಚ್.ಎಸ್. ಬಲ್ಲಾಳ್ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಬ್ಯಾಂಕಿಂಗ್ ಕ್ಷೇತ್ರದ ಕೊಡುಗೆ ಅಪಾರ. ಹೆತ್ತವರು ತಮ್ಮ ಮಕ್ಕಳಿಗೆ ಜೀವನಕ್ಕೆ ಬೇಕಾದಷ್ಟು ಹಣ ಗಳಿಸುವ ಉದ್ಯೋಗಕ್ಕೆ ಅವರನ್ನು ತಯಾರುಗೊಳಿಸು ವುದಲ್ಲದೆ, ಜೀವನದಲ್ಲಿ ಶಿಸ್ತು ಮತ್ತು ಸ್ವಚ್ಛತೆಯ ಬಗ್ಗೆಯೂ ತಿಳಿಹೇಳಬೇಕಾಗಿದೆ ಎಂದರು.
ಬ್ಯಾಂಕಿನ ವತಿಯಿಂದ ಡಾ| ಎಚ್.ಎಸ್. ಬಲ್ಲಾಳ್, ಇಂದಿರಾ ಬಲ್ಲಾಳ್ ದಂಪತಿ, ಕೆ.ಆರ್. ಶೆಣೈ, ಪದ್ಮಾ ಆರ್. ಶೆಣೈ ದಂಪತಿ ಮತ್ತು ಡಾ| ಜಿ. ಶಂಕರ್ ಅವರನ್ನು ಸಮ್ಮಾನಿಸಲಾಯಿತು. ಎಸೆಸೆಲ್ಸಿ, ಪಿಯುಸಿಯಲ್ಲಿ ಶೇ. 90ಕ್ಕಿಂತ ಅಧಿಕ ಅಂಕ ಗಳಿಸಿದ 6 ಮಂದಿ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಮೂರೂ ಬ್ಯಾಂಕುಗಳ ಸಂಸ್ಥಾಪಕರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಲಾಯಿತು.
ಬ್ಯಾಂಕಿನ ಪ್ರಾದೇಶಿಕ ಕಚೇರಿ ಉಡುಪಿಯ ಮುಖ್ಯಸ್ಥ ರವೀಂದ್ರ ರೈ ಎಂ. ಸ್ವಾಗತಿಸಿ, ಬ್ಯಾಂಕ್ ಬೆಳೆದು ಬಂದ ದಾರಿ ಮತ್ತು ಸಾಧನೆಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸವಿನ್, ಸಹನಾ ನಿರೂಪಿಸಿದರು. ಸಹಾಯಕ ಪ್ರಾದೇಶಿಕ ಮುಖ್ಯಸ್ಥ ಗೋಪ ಕುಮಾರ್ ಜಿ. ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್