ಬ್ಯಾಂಕ್‌ ಆಫ್ ಬರೋಡ: ಸಂಸ್ಥಾಪನ ದಿನಾಚರಣೆ


Team Udayavani, Jul 22, 2019, 5:40 AM IST

200719ASTRO58

ಉಡುಪಿ: ಬ್ಯಾಂಕ್‌ ಆಫ್ ಬರೋಡದ 112ನೇ ಸಂಸ್ಥಾಪನ ದಿನಾಚರಣೆಯು ಬ್ಯಾಂಕಿನ ಪ್ರಾದೇಶಿಕ ಕಚೇರಿ ಉಡುಪಿ ಆಶ್ರಯದಲ್ಲಿ ಅಂಬಲಪಾಡಿ ಶ್ಯಾಮಿಲಿ ಸಭಾಂಗಣದ ಪ್ರಥಮ ಮಹಡಿಯಲ್ಲಿ ಶನಿವಾರ ನಡೆಯಿತು.

ಹಿಂದಿನ ವಿಜಯ ಬ್ಯಾಂಕಿನ ನಿವೃತ್ತ ಕಾರ್ಯನಿರ್ವಾಹಕ ನಿರ್ದೇಶಕ ಕೆ.ಆರ್‌. ಶೆಣೈ ಅವರು ದಿಕ್ಸೂಚಿ ಭಾಷಣಗೈದು, ಗುಜರಾತ್‌ನಲ್ಲಿ 1908ರಲ್ಲಿ ಸ್ಥಾಪನೆಗೊಂಡ ಬ್ಯಾಂಕ್‌ ಆಫ್ ಬರೋಡ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ, ಬ್ಯಾಂಕ್‌ ಆಫ್ ಬರೋಡದೊಂದಿಗೆ ದೇನಾ ಬ್ಯಾಂಕ್‌, ವಿಜಯ ಬ್ಯಾಂಕ್‌ ವಿಲೀನಗೊಂಡಿದ್ದು, ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿದೆ ಎಂದರು.

ಮಣಿಪಾಲ ಮಾಹೆಯ ಸಹಕುಲಾ ಧಿಪತಿ ಡಾ| ಎಚ್.ಎಸ್‌. ಬಲ್ಲಾಳ್‌ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಬ್ಯಾಂಕಿಂಗ್‌ ಕ್ಷೇತ್ರದ ಕೊಡುಗೆ ಅಪಾರ. ಹೆತ್ತವರು ತಮ್ಮ ಮಕ್ಕಳಿಗೆ ಜೀವನಕ್ಕೆ ಬೇಕಾದಷ್ಟು ಹಣ ಗಳಿಸುವ ಉದ್ಯೋಗಕ್ಕೆ ಅವರನ್ನು ತಯಾರುಗೊಳಿಸು ವುದಲ್ಲದೆ, ಜೀವನದಲ್ಲಿ ಶಿಸ್ತು ಮತ್ತು ಸ್ವಚ್ಛತೆಯ ಬಗ್ಗೆಯೂ ತಿಳಿಹೇಳಬೇಕಾಗಿದೆ ಎಂದರು.

ಬ್ಯಾಂಕಿನ ವತಿಯಿಂದ ಡಾ| ಎಚ್.ಎಸ್‌. ಬಲ್ಲಾಳ್‌, ಇಂದಿರಾ ಬಲ್ಲಾಳ್‌ ದಂಪತಿ, ಕೆ.ಆರ್‌. ಶೆಣೈ, ಪದ್ಮಾ ಆರ್‌. ಶೆಣೈ ದಂಪತಿ ಮತ್ತು ಡಾ| ಜಿ. ಶಂಕರ್‌ ಅವರನ್ನು ಸಮ್ಮಾನಿಸಲಾಯಿತು. ಎಸೆಸೆಲ್ಸಿ, ಪಿಯುಸಿಯಲ್ಲಿ ಶೇ. 90ಕ್ಕಿಂತ ಅಧಿಕ ಅಂಕ ಗಳಿಸಿದ 6 ಮಂದಿ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಮೂರೂ ಬ್ಯಾಂಕುಗಳ ಸಂಸ್ಥಾಪಕರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಲಾಯಿತು.

ಬ್ಯಾಂಕಿನ ಪ್ರಾದೇಶಿಕ ಕಚೇರಿ ಉಡುಪಿಯ ಮುಖ್ಯಸ್ಥ ರವೀಂದ್ರ ರೈ ಎಂ. ಸ್ವಾಗತಿಸಿ, ಬ್ಯಾಂಕ್‌ ಬೆಳೆದು ಬಂದ ದಾರಿ ಮತ್ತು ಸಾಧನೆಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸವಿನ್‌, ಸಹನಾ ನಿರೂಪಿಸಿದರು. ಸಹಾಯಕ ಪ್ರಾದೇಶಿಕ ಮುಖ್ಯಸ್ಥ ಗೋಪ ಕುಮಾರ್‌ ಜಿ. ವಂದಿಸಿದರು.

ಬಡವರಿಗೆ ಸಾಲ ನೀಡಿ

ಉದ್ಯಮಿ ಡಾ| ಜಿ. ಶಂಕರ್‌ ಮಾತನಾಡಿ, ವಿಜಯ ಬ್ಯಾಂಕ್‌ ಪ್ರಸ್ತುತ ಬ್ಯಾಂಕ್‌ ಆಫ್ ಬರೋಡದೊಂದಿಗೆ ವಿಲೀನಗೊಂಡಿದ್ದರೂ ಕರಾವಳಿ ಭಾಗದವರಿಗೆ ಇಂದಿಗೂ ವಿಜಯ ಬ್ಯಾಂಕ್‌ ಆಗಿಯೇ ಉಳಿದಿದೆ. ಮೂಲ್ಕಿ ಸುಂದರರಾಮ್‌ ಶೆಟ್ಟಿ ಅವರಿಂದ ಸ್ಥಾಪನೆಗೊಂಡ ವಿಜಯ ಬ್ಯಾಂಕ್‌ ಅವರ ಕನಸಿನಂತೆ ಬಡವರಿಗೆ ಸಹಾಯ ಮಾಡುವ ಕೆಲಸ ನಿರಂತರವಾಗಿ ನಡೆಯಬೇಕಾಗಿದೆ. ಕಡು ಬಡವರು, ಮಹಿಳೆಯರಿಗೆ ಸಾಲ ನೀಡಿದಾಗ ಅವರು ಪಡೆದ ಸಾಲವನ್ನು ಪ್ರಾಮಾಣಿಕವಾಗಿ ಮರುಪಾವತಿ ಮಾಡುತ್ತಾರೆ. ಈ ನೆಲೆಯಲ್ಲಿ ಬ್ಯಾಂಕ್‌ ಬಡವರಿಗೆ ಸಾಲ ನೀಡಬೇಕಾಗಿದೆ ಎಂದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.