ಎಚ್1ಎನ್1ಬ್ಯಾಂಕ್ ಅಧಿಕಾರಿ ಸಾವು
Team Udayavani, Feb 12, 2017, 3:45 AM IST
ಪಡುಬಿದ್ರಿ: ಭಾರತ್ ಬ್ಯಾಂಕ್ನ ಮೂಲ್ಕಿ ಶಾಖಾ ಪ್ರಬಂಧಕ ಲಕ್ಷ್ಮೀನಾರಾಯಣ ಸಿ. ಸಾಲ್ಯಾನ್ (43) ಎಚ್1 ಎನ್1 ಜ್ವರಬಾಧೆ ಯಿಂದಾಗಿ ಶನಿವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾದರು. ಮೃತರು ಪತ್ನಿ, ಈರ್ವರು ಪುತ್ರಿಯರನ್ನು ಅಗಲಿದ್ದಾರೆ.
10 ದಿನಗಳಿಂದ ಜ್ವರ ಬಾಧೆಗೊಳಗಾಗಿದ್ದ ಅವರನ್ನು ಚಿಕಿತ್ಸೆಗಾಗಿ ಉಡುಪಿ ಬಳಿಧಿಕ ಮಂಗಳೂರಿನ ಆಸ್ಪತ್ರೆಗಳಿಗೆ ಒಯ್ಯಲಾಗಿತ್ತು. ಅಲ್ಲಿ ಜ್ವರ ಉಲ್ಬಣಿಸಿ ಸಾವಿಗೀಡಾದರು.
ಹೆಜಮಾಡಿಯ ಪ್ರಸಿದ್ಧ ಜಾರಂದಾಯ ದೈವಪಾತ್ರಿ ದಿ| ಚೆನ್ನಪ್ಪ ಪೂಜಾರಿಯವರ ಪುತ್ರ ಲಕ್ಷ್ಮೀನಾರಾಯಣ ಸಾಲ್ಯಾನ್ ಅವರು ಭಾರತ್ ಬ್ಯಾಂಕ್ನಲ್ಲಿ ಸುಮಾರು 16 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಮುಂಬಯಿಯಲ್ಲಿ ವೃತ್ತಿ ಜೀವನ ಆರಂಭಿಸಿದ ಅವರು ಮಂಗಳೂರು, ಉಡುಪಿ ಶಾಖೆಗಳ ಬಳಿಕ ಮೂಲ್ಕಿಯಲ್ಲಿ ಸೇವಾ ನಿರತರಾಗಿದ್ದರು.
ಅಲ್ಪಾವಧಿಯಲ್ಲಿಯೇ ಮೂಲ್ಕಿಯಲ್ಲಿ ಭಾರತ್ ಬ್ಯಾಂಕ್ನ ವ್ಯವಹಾರವನ್ನು ಗುರಿ ಮೀರಿದ ಸಾಧನೆಗಳೊಂದಿಗೆ ಉತ್ತುಂಗಕ್ಕೇರಿಸಿದ್ದರು. ಹೆಜಮಾಡಿ ಬಿಲ್ಲವ ಸಮಾಜ ಸೇವಾ ಸಂಘದ ಉಪಾಧ್ಯಕ್ಷರಾಗಿದ್ದ ಅವರು ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ