ಮರ ಉಳಿಸಲು ಕಸರತ್ತು: ಪಕ್ಕದಲ್ಲೇ ಗಿಡ ನೆಡಲು ನಿರ್ಧಾರ


Team Udayavani, Sep 21, 2018, 1:55 AM IST

bannanje-bus-stand-20-9.jpg

ಉಡುಪಿ: ಬಹುಕಾಲದ ಬೇಡಿಕೆಯಾದ ಉಡುಪಿಯ ಸುಸಜ್ಜಿತ ಕೆ.ಎಸ್‌.ಆರ್‌.ಟಿ.ಸಿ. ಬಸ್‌ ನಿಲ್ದಾಣ ಕಾಮಗಾರಿ ಬನ್ನಂಜೆಯಲ್ಲಿ ಆರಂಭಗೊಂಡಿದ್ದರೂ ಮರಗಳನ್ನು ಕಡಿಯದೆ ಇರುವುದರಿಂದ ಕಾಮಗಾರಿ ವೇಗ ಪಡೆದಿಲ್ಲ. ಇಲ್ಲಿರುವ 25ಕ್ಕೂ ಅಧಿಕ ಮರಗಳಲ್ಲಿ ಕೆಲವು ಮರಗಳನ್ನಾದರೂ ಉಳಿಸಬೇಕೆಂಬುದು ಪರಿಸರ ವಾದಿಗಳ ಬೇಡಿಕೆ. ಇದಕ್ಕೆ ಪೂರಕವಾಗಿ ಅರಣ್ಯ ಇಲಾಖೆ ಕೂಡ ಸಾಧ್ಯವಿರುವಷ್ಟು ಮರ ಉಳಿಸಲು ಕೆಎಸ್‌ಆರ್‌ಟಿಸಿ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದೆ. ಮರ  ಕಡಿಯಲು ಅನುಮತಿ ನೀಡುವ ಪ್ರಕ್ರಿಯೆ ಪೂರ್ಣಗೊಂಡಿಲ್ಲದಿರುವುದರಿಂದ ಮರಗಳ ನಡುವೆ ಇರುವ ಜಾಗವನ್ನು ಸಮತಟ್ಟು ಮಾಡುವ ಕಾಮಗಾರಿ ಮಾತ್ರ ನಡೆಯುತ್ತಿದೆ.

ಸದ್ಯ 8 ಮರಗಳು ಮಾತ್ರ
‘ಒಟ್ಟು 25 ಮರಗಳ ತೆರವಿಗೆ ಅನುಮತಿಗಾಗಿ ಅರಣ್ಯ ಇಲಾಖೆಗೆ ಪತ್ರ ಬರೆದಿದ್ದೇವೆ. ಅದರಲ್ಲೂ ಕಟ್ಟಡ ನಿರ್ಮಾಣಗೊಳ್ಳುವ ಸ್ಥಳದಲ್ಲೇ ಇರುವ 8 ಮರಗಳನ್ನು ಈಗ ಕಡಿಯುವುದು ತೀರಾ ಅನಿವಾರ್ಯವಾಗಿದೆ. ಇರುವ ಎರಡೂವರೆ ಎಕರೆ ಕೂಡ ಬಸ್‌ ನಿಲ್ದಾಣಕ್ಕೆ ಅಗತ್ಯವಿದೆ. ಬಸ್‌ ನಿಲ್ದಾಣ ಪ್ರವೇಶ ದ್ವಾರ ಬರುವಲ್ಲಿಯೇ ಮೂರು ಮರಗಳಿವೆ. ಅವುಗಳನ್ನು ತೆಗೆಯಲೇಬೇಕು. ಸದ್ಯಕ್ಕೆ ಮಧ್ಯದ ಜಾಗವನ್ನು ಹೊರತುಪಡಿಸಿ ಪಕ್ಕದಲ್ಲಿರುವ ಗಿಡಗಳನ್ನು ಹಾಗೆಯೇ ಉಳಿಸಿಕೊಂಡು ಕಾಮಗಾರಿ ನಡೆಸಿ ಅನಂತರ ಅಗತ್ಯ ಬಿದ್ದಾಗ ಕೆಲವು ಮರಗಳನ್ನು ತೆಗೆಯುತ್ತೇವೆ. 25 ಮರಗಳನ್ನು ತೆಗೆದರೆ ಇಲ್ಲಿಯೇ ಪಕ್ಕದಲ್ಲಿ ಬಸ್‌ ನಿಲ್ದಾಣದ ಪಶ್ಚಿಮ ಭಾಗದಲ್ಲಿ 50 ಗಿಡಗಳನ್ನು ನೆಡುವ ಯೋಜನೆ ಇದೆ. ಗಿಡ ನೆಡಲು ಈಗಾಗಲೇ ಅರಣ್ಯ ಇಲಾಖೆಗೆ ಹಣ ಪಾವತಿ ಮಾಡಲಾಗಿದೆ. ಕಾಮಗಾರಿ ಒಂದು ವರ್ಷದೊಳಗೆ ಪೂರ್ಣಗೊಳ್ಳಬೇಕಿದೆ’ ಎಂದು ಕೆ.ಎಸ್‌.ಆರ್‌.ಟಿ.ಸಿ. ಅಧಿಕಾರಿಗಳು ಮತ್ತು ಗುತ್ತಿಗೆದಾರರು ಪ್ರತಿಕ್ರಿಯಿಸಿದ್ದಾರೆ.

ಸಾಧ್ಯವಿರುವಷ್ಟು ಮರ ಉಳಿಸಲು ಸೂಚನೆ
25 ಮರಗಳನ್ನುಕಡಿಯಲು ಅನುಮತಿ ಕೇಳಿದ್ದಾರೆ. ಸಾಧ್ಯವಾದಷ್ಟು ಮರಗಳನ್ನು ಉಳಿಸಲು ಸೂಚಿಸಿದ್ದೇವೆ. ಅನುಮತಿ ಪ್ರಕ್ರಿಯೆ ಪೂರ್ಣಗೊಳ್ಳಲು ಸಹಜವಾಗಿಯೇ ಇನ್ನೂ ಕೆಲವು ದಿನಗಳ ಅಗತ್ಯವಿದೆ. ಷರತ್ತಿನ ಅನ್ವಯ ಅನುಮತಿ ನೀಡಲಾಗುತ್ತದೆ. ಒಂದೆಡೆ ಪ್ರಯಾಣಿಕರ ಸುರಕ್ಷತೆ ಮತ್ತೂಂದೆಡೆ ಮರಗಳನ್ನು ಉಳಿಸುವ ಜವಾಬ್ದಾರಿ ಎರಡನ್ನೂ ನಿಭಾಯಿಸುವ ಪ್ರಯತ್ನ ನಮ್ಮದಾಗಿದೆ. ಸಸಿಗಳನ್ನು ನೆಟ್ಟು ಬೆಳೆಸುವುದಕ್ಕಾಗಿ ಒಂದು ಮರಕ್ಕೆ 1,900 ರೂ.ಗಳನ್ನು ಕೆ.ಎಸ್‌.ಆರ್‌.ಟಿ.ಸಿ.ಯಿಂದ ಪಡೆದುಕೊಳ್ಳಲಾಗುತ್ತದೆ ಎಂದು ಉಡುಪಿ ವಲಯ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.