ಅಮ್ಮನೊಂದಿಗೆ ದಿನ ಕಳೆದ ಬನ್ನಂಜೆ ರಾಜಾ


Team Udayavani, Jul 10, 2018, 12:24 PM IST

raja.jpg

ಮಲ್ಪೆ: ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿರುವ ಭೂಗತ ಪಾತಕಿ ಬನ್ನಂಜೆ ರಾಜಾ (ರಾಜೇಂದ್ರ ) ಸೋಮವಾರ ಮಲ್ಪೆಗೆ ಬಂದು ಅನಾರೋಗ್ಯದಲ್ಲಿರುವ ತನ್ನ ಅಮ್ಮನನ್ನು ಭೇಟಿಯಾಗಿ ತಾಯಿಯ ಆರೋಗ್ಯವಿಚಾರಿಸಿದ್ದಾನೆ.

ಮಲ್ಪೆ ಸಸಿತೋಟದಲ್ಲಿರುವ ಸ್ವಗೃಹಕ್ಕೆ ಆತನನ್ನು ಪೊಲೀಸರು ಬಿಗು ಭದ್ರತೆಯಲ್ಲಿ ಕರೆತಂದಿದ್ದರು. ಅನಾರೋಗ್ಯದಿಂದಿರುವ ತಾಯಿಯನ್ನು ನೋಡಲು ಅವಕಾಶ ಕಲ್ಪಿಸಬೇಕು ಎಂಬ ಆತನ ಮನವಿಗೆ ಸ್ಪಂದಿಸಿ ನ್ಯಾಯಾಲಯವು ಮಾನವೀಯ ನೆಲೆಯಲ್ಲಿ ಅನುಮತಿ ನೀಡಿದೆ. ಬೆಳಗ್ಗೆ 9ರಿಂದ ಸಂಜೆ 6 ಗಂಟೆ ವರೆಗೆ ತಾಯಿ ಜತೆ ಇರಲು ವ್ಯವಸ್ಥೆ ಮಾಡಲಾಗಿತ್ತು.

ಮನೆಮಂದಿ ಜತೆಯಲ್ಲಿ…
ಫಿಶರೀಸ್‌ ಶಾಲಾ ಸಭಾಭವನದ ಮುಂಭಾಗದ ರಸ್ತೆಯ ಮೂಲಕ ಬೆಳಗ್ಗೆ 9 ಗಂಟೆಗೆ ಬಿಗು ಭದ್ರತೆಯಲ್ಲಿ ರಾಜಾನನ್ನು ಮನೆಗೆ ಕರೆತರಲಾಯಿತು. ರಾಜಾ ವಾಹನದಿಂದ ಇಳಿದವನೇ ನೇರ ತಾಯಿ ಬಳಿಸಾರಿ ನಮಸ್ಕರಿಸಿ ಆರೋಗ್ಯ ವಿಚಾರಿಸಿದ. ಬಳಿಕ ಹೊರಗೆ ಇರುವ ಕುಟುಂಬದ ದೈವದ ಗುಡಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ. ಬೆಳಗ್ಗಿನ ಉಪಾಹಾರವನ್ನು ಪೊಲೀಸರೇ ತರಿಸಿದ್ದು ಅದನ್ನು ಪರೀಕ್ಷೆಗೊಳಪಡಿಸಿ ನೀಡಲಾಯಿತು.

ಮಧ್ಯಾಹ್ನ ಮನೆಯಲ್ಲೇ ತಯಾರಿಸಿದ ಕೋಳಿ ರೊಟ್ಟಿ, ಮೀನಿನ ಊಟವನ್ನು ಕುಟುಂಬದವರ ಜತೆಯಲ್ಲಿ ಕುಳಿತು ಸವಿದ. ಮನೆಯಲ್ಲಿ ತಂದೆ ಸುಂದರ ಶೆಟ್ಟಿಗಾರ್‌, ತಾಯಿ ನಿವೃತ್ತ ಶಿಕ್ಷಕಿ ವಿಲಾಸಿನಿ, ಒಬ್ಬ ಸಹೋದರ, ಇಬ್ಬರು ಅತ್ತಿಗೆಯರು ಮತ್ತವರ ಮಕ್ಕಳು ಹಾಗೂ ಬೆಳಗ್ಗೆಯಷ್ಟೇ ಬೆಂಗಳೂರಿನಿಂದ ಬಂದಿದ್ದ ರಾಜನ ಪತ್ನಿ ಮತ್ತು ಇಬ್ಬರು ಮಕ್ಕಳು ಜತೆಯಲ್ಲಿದ್ದರು.

ಎಸ್ಪಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಕುಮಾರಚಂದ್ರ ಮನೆಗೆ ಭೇಟಿ ನೀಡಿದ್ದಾರೆ. ಸಂಜೆ 6ರ ಬಳಿಕ ಭದ್ರತೆಯಲ್ಲಿ ಉಡುಪಿ ನಗರ ಠಾಣೆಗೆ ಕರೆದೊಯ್ಯಲಾಯಿತು. ರಾತ್ರಿ ಠಾಣೆಯಲ್ಲೇ ಇಟ್ಟುಕೊಂಡು ಮಂಗಳವಾರ ಬೆಳಗ್ಗೆ ವೈದಕೀಯ ಪರೀಕ್ಷೆ ನಡೆಸಿ ಅಲ್ಲಿಂದ ಬೆಳಗಾವಿ ಜೈಲಿಗೆ ಕರೆದೊಯ್ಯಲಾಗುವುದು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

1995ರ ಅನಂತರ, 2015ರ ಫೆಬ್ರವರಿಯಲ್ಲಿ ಸೌತ್‌ ಆಫ್ರಿಕಾದ ಮೊರಕ್ಕೋದಲ್ಲಿ ಬಂಧನಕ್ಕೊಳಗಾದ ಸಂದರ್ಭ ವಿಚಾರಣೆಯ ಸಲುವಾಗಿ ಪೊಲೀಸರ ಜತೆ ಒಂದು ಸಲ ಮನೆಗೆ ಬಂದ  ವೇಳೆ  ತಾಯಿಯನ್ನು ನೋಡಿದ್ದು ಬಿಟ್ಟರೆ ಬಳಿಕ ತಾಯಿ – ಮಗನ ಭೇಟಿ ಇದೇ ಮೊದಲು ಎನ್ನಲಾಗಿದೆ.

ಸಹಪಾಠಿಗಳಿಗೆ ನಿರಾಸೆ
ಬನ್ನಂಜೆ ರಾಜಾ ಪ್ರೌಢಶಿಕ್ಷಣವನ್ನು ಮನೆ ಸಮೀಪದ ಫಿಶರೀಸ್‌ ಶಾಲೆಯಲ್ಲಿ ಪೂರೈಸಿದ್ದು, ಅಪಾರ ಸ್ನೇಹಿತರನ್ನು ಹೊಂದಿದ್ದ. ಆತನನ್ನು ನೋಡಲು ಸಹಪಾಠಿಗಳು, ನೆರೆಹೊರೆಯವರು, ಗೆಳೆಯರು ಬೆಳಗ್ಗಿನಿಂದಲೇ ಮನೆಯತ್ತ ಬರುತ್ತಿದ್ದರು. ಒಂದಿಬ್ಬರು ಹತ್ತಿರದ ಸಂಬಂಧಿಗಳಿಗೆ ಮಾತ್ರ ಗೇಟಿನ ಹೊರಗೆ ನಿಂತು ರಾಜಾನೊಂದಿಗೆ ಮಾತನಾಡಲು ಅವಕಾಶ ನೀಡಿದರು.

ಮನೆಯಲ್ಲಿ ಬಿಗಿ ಭದ್ರತೆ
ರಾಜನ ಆಗಮನದ ಹಿನ್ನೆಲೆಯಲ್ಲಿ ಮನೆಯ ಒಳಗೂ ಸೇರಿದಂತೆ ಸುತ್ತಮುತ್ತ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. ಸುತ್ತ ಸಿಸಿ ಕೆಮರಾ ಅಳವಡಿಸಲಾಗಿತ್ತು. 50 ಮೀ. ದೂರದಲ್ಲಿ ಬ್ಯಾರಿಕೇಡ್‌ ಅಳವಡಿಸಿ ಪೊಲೀಸರ ಹೊರತು ಮಾಧ್ಯಮ ಸಹಿತ ಯಾರಿಗೂ ಪ್ರವೇಶ ಇರಲಿಲ್ಲ. ವೃತ್ತ ನಿರೀಕ್ಷಕ ಮಂಜನಾಥ್‌ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದ್ದು, ಜಿಲ್ಲಾ ಶಸಸ್ತ್ರ ಮೀಸಲು ಪಡೆ, ಕೆಎಸ್‌ಆರ್‌ಪಿ, ಸಿವಿಲ್‌ ಪೊಲೀಸರನ್ನು ನಿಯೋಜಿಸಲಾಗಿತ್ತು.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.