ಬನ್ನಂಜೆ ದೇಗುಲ ಕೆರೆ: ಹೂಳೆತ್ತುವ ಕಾಮಗಾರಿ
Team Udayavani, May 22, 2019, 6:10 AM IST
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುರಾತನ ಕೆರೆಯ ಹೂಳೆತ್ತಿ ಸ್ವತ್ಛಗೊಳಿಸುವ ಕಾಮಗಾರಿ ಪ್ರಗತಿಯಲ್ಲಿದೆ. ಕಳೆದ 4 ದಿನಗಳಿಂದ ಕ್ರೇನ್ ಮತ್ತು ಮಾನವ ಶ್ರಮದಿಂದ ಹೂಳೆತ್ತಲಾಗುತ್ತಿದೆ.
ಕೆರೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಸಂದರ್ಭ ಗಣಪತಿ ಮೂರ್ತಿ, ನವರಾತ್ರಿ ಸಂದರ್ಭ ದುರ್ಗೆಯರ ಮೂರ್ತಿಯನ್ನು ವಿಸರ್ಜಿಸಲಾಗುತ್ತಿತ್ತು. ಮರಗಳ ಎಲೆಗಳು ಕೂಡ ಬಿದ್ದು ನೀರು ಮಲಿನಗೊಂಡು ವಾಸನೆ ಬರುತ್ತಿತ್ತು. ನೀರಿನ ಮಟ್ಟವೂ ಭಾರೀ ಕಡಿಮೆಯಾಗಿತ್ತು. ಹಾಗಾಗಿ ತುರ್ತಾಗಿ ಹೂಳೆತ್ತುವ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ.
“ಅಂದಾಜು 75ರಿಂದ 80 ಸಾವಿರ ರೂ.ವೆಚ್ಚದಲ್ಲಿ ಕೆಲಸ ಮಾಡಿಸುತ್ತಿದ್ದೇವೆ. ನಗರಾಭಿವೃದ್ಧಿ ಪ್ರಾಧಿಕಾರದಿಂದ 30 ಲ.ರೂ. ಅನುದಾನ ಮಂಜೂರಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆ ಬಂದುದರಿಂದ, ಅಧ್ಯಕ್ಷರ ಅವಧಿ ಮುಕ್ತಾಯವಾದುದರಿಂದ ಆ ಅನುದಾನ ಸದ್ಯ ಬಳಕೆಗೆ ಸಿಗುತ್ತಿಲ್ಲ. ಮುಂದೆ ಅದೇ ಮೊತ್ತದಲ್ಲಿ ಕೆರೆಯನ್ನು ಸಂಪೂರ್ಣವಾಗಿ ಪುನರುಜ್ಜೀವನಗೊಳಿಸಿ ಅಭಿವೃದ್ಧಿಪಡಿಸಲಾಗುವುದು. ಈಗ ದೇವಸ್ಥಾನಕ್ಕೆ ಬರುವ ಭಕ್ತರು ಕೈಕಾಲು ಶುಚಿಗೊಳಿಸುವುದಕ್ಕೂ ನೀರಿನ ಕೊರತೆ ಉಂಟಾಗಿದೆ. ಟ್ಯಾಂಕರ್ ಮೂಲಕ ನೀರು ತರಿಸುತ್ತಿದ್ದೇವೆ. ಆದ್ದರಿಂದ ತುರ್ತಾಗಿ ಹೂಳೆತ್ತಬೇಕಾಯಿತು.
ಕೆರೆಯನ್ನು ಪೂರ್ಣವಾಗಿ ಸ್ವತ್ಛಗೊಳಿಸಲಾಗುವುದು. ಮುಂದೆ ಈ ಕೆರೆಯಲ್ಲಿ ಮೂರ್ತಿ ವಿಸರ್ಜನೆಗೆ ಅವಕಾಶ ನೀಡುವುದಿಲ್ಲ’ ಎಂದು ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಾಧವ ಬನ್ನಂಜೆ ತಿಳಿಸಿದ್ದಾರೆ.
9 ವರ್ಷಗಳ ಹಿಂದೆ ಈ ಕೆರೆಯ ಹೂಳೆತ್ತಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ