ಬಂಟ್ವಾಳ: ನಗರದಲ್ಲಿ ನೀರು ಪೂರೈಕೆಯದೇ ಸಮಸ್ಯೆ


Team Udayavani, Jan 28, 2019, 12:50 AM IST

bangtwal.jpg

ಬಂಟ್ವಾಳ: ಬಂಟ್ವಾಳ ತಾಲೂಕಿನ ಗ್ರಾಮೀಣ ಭಾಗದಲ್ಲಿ ನೀರಿನ ತೊಂದರೆ ಸದ್ಯಕ್ಕಿಲ್ಲ; ಆದರೆ ನಗರ ಭಾಗದಲ್ಲಿ ಕೊಂಚ ಸಮಸ್ಯೆ ಇದೆ ಎಂದು ಹೇಳುತ್ತಾರೆ ಅಧಿಕಾರಿಗಳು. ನಗರದಲ್ಲಿ ಸಾಕಷ್ಟು ನೀರು ಲಭ್ಯವಿದ್ದರೂ ಕಾಮಗಾರಿ ಪೂರ್ಣವಾಗದೇ ಇರುವುದು ಅಲ್ಲಲ್ಲಿ ತೊಂದರೆ  ಎದುರಾಗಲು ಕಾರಣ.

ಗ್ರಾಮೀಣ ಭಾಗದಲ್ಲಿ ಕೊಳವೆಬಾವಿ ಹಾಗೂ ತೆರೆದ ಬಾವಿಗಳೇ ಜಲಮೂಲವಾದರೂ ತಾಲೂಕಿನಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಂಡರೆ  ಇಡೀ ತಾಲೂಕಿನ ಗ್ರಾಮೀಣ ಭಾಗಗಳ ನೀರಿನ ಬವಣೆ ನೀಗಲಿದೆ.

ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗಾಗಿ ಕಳೆದ ಸರಕಾರದ ಅವಧಿಯಲ್ಲಿ ಜಕ್ರಿಬೆಟ್ಟಿನಲ್ಲಿ ಉದ್ಘಾಟನೆಗೊಂಡ ನೀರು ಪೂರೈಕೆ ಘಟಕ ಹಾಗೂ ಬಂಟ್ವಾಳದಲ್ಲಿರುವ ಹಿಂದಿನ ಘಟಕದಿಂದ ನೀರು ಪೂರೈಕೆ ಮಾಡಲಾಗುತ್ತಿದ್ದು, ಕೆಯುಡಬುÉ Â ಯವರ ಕಾಮಗಾರಿ ಪೂರ್ಣಗೊಳ್ಳದೇ ಇರುವುದರಿಂದ ಪೂರೈಕೆಯಲ್ಲಿ 
ವ್ಯತ್ಯಯ ವಾಗುತ್ತದೆ. ಒಂದು ಕಡೆ ಪೈಪ್‌ ಒಡೆದು ಹೋದರೆ ದುರಸ್ತಿಗೆ ಮೂರ್‍ನಾಲ್ಕು ದಿನಗಳೇ ಬೇಕಾಗುತ್ತವೆ ಎಂದು ಪುರಸಭಾ ಮುಖ್ಯಾಧಿಕಾರಿ ರೇಖಾ ಶೆಟ್ಟಿ ಅವರು ಹೇಳುತ್ತಾರೆ.

ಐದು ಶಾಶ್ವತ ಯೋಜನೆಗಳು
ಹಿಂದೆ ಬಿ. ರಮಾನಾಥ ರೈ ಅವರು ಸಚಿವರಾಗಿದ್ದ ಸಂದರ್ಭ ಬಂಟ್ವಾಳ ತಾಲೂಕಿಗೆ ಒಟ್ಟು 5 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಮಂಜೂರಾಗಿದ್ದವು. ಅವುಗಳ ಎರಡು ಯೋಜನೆಗಳು ಪೂರ್ಣಗೊಂಡಿದ್ದು, ಮೂರರ ಕಾಮಗಾರಿ ಪ್ರಗತಿಯಲ್ಲಿದೆ.

ಕರೋಪಾಡಿಯಲ್ಲಿ 27.93 ಕೋಟಿ ರೂ.ಗಳಲ್ಲಿ ಅನುಷ್ಠಾನಗೊಂಡ ಯೋಜನೆಯಿಂದ ಕರೋಪಾಡಿ ಸೇರಿದಂತೆ 79 ಜನವಸತಿ ಪ್ರದೇಶಗಳಿಗೆ ನೀರು ಪೂರೈಕೆಯಾಗುತ್ತಿದೆ. ಸಂಗಬೆಟ್ಟಿನಲ್ಲಿ 36.07 ಕೋಟಿ ರೂ.ಗಳಲ್ಲಿ ಅನುಷ್ಠಾನಗೊಂಡ ಯೋಜನೆಯಲ್ಲಿ ಸಂಗಬೆಟ್ಟು ಸೇರಿದಂತೆ 65 ಜನವಸತಿ ಪ್ರದೇಶಗಳಿಗೆ ನೀರು ಪೂರೈಕೆಯಾಗುತ್ತಿದೆ.

ಕೊರತೆಗೆ ಕಾರಣ
ಬೇಸಗೆಯ ಅವಧಿಯಲ್ಲಿ ಕೊಳವೆಬಾವಿಗಳಲ್ಲಿ ನೀರಿನ ಕೊರತೆ, ತೆರೆದ ಬಾವಿಗಳಲ್ಲೂ ನೀರಿನ ಕೊರತೆ, ಹೊಸ ಕೊಳವೆಬಾವಿಗಳಲ್ಲಿ ನೀರು ಇಲ್ಲದೇ ಇರುವುದು, ಮುಖ್ಯ ಪೈಪ್‌ ಒಡೆದು ಹೋಗುವ ಸಮಸ್ಯೆ, ವಿದ್ಯುತ್‌ ಕಡಿತ, ಮಳೆಕೊçಲು, ಜಲ ಮರುಪೂರಣಕ್ಕೆ ಗಂಭೀರ ಪ್ರಯತ್ನ ನಡೆದಿಲ್ಲ.

25 ಲಕ್ಷ ರೂ. ಅನುದಾನ
ಪ್ರಸ್ತುತ ದಿನಗಳಲ್ಲಿ ನೀರಿನ ಕೊರತೆಯ ಗಂಭೀರ ಸಮಸ್ಯೆಯಿಲ್ಲ. ಕೊಳವೆಬಾವಿಗಳಿಗೆ ಬೇಡಿಕೆ ಬಂದಿದ್ದು, ಅವುಗಳನ್ನು ಕೊರೆಯುವ ಕೆಲಸಗಳು ಆರಂಭಗೊಂಡಿವೆ. ಕುಡಿಯುವ ನೀರು ಪೂರೈಕೆಗಾಗಿ ಟಾಸ್ಕ್
ಪೋರ್ಸ್‌ನಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ 25 ಲಕ್ಷ ರೂ.ಬಂದಿದ್ದು, ಅದನ್ನು ಸಂಬಂಧಪಟ್ಟವರ ನಿರ್ದೇಶನದಂತೆ ಹಂಚಿಕೆ ಮಾಡುವ ಕೆಲಸ ಮಾಡಲಾಗುತ್ತದೆ. ನೀರಿನ ಗಂಭೀರ ಸಮಸ್ಯೆಗಳು ಕಂಡುಬಂದಲ್ಲಿ ಅವುಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ತಾಲೂಕು ಪಂಚಾಯತ್‌ ಕಾರ್ಯನಿರ್ವಹಿಸಲಿದೆ.
- ರಾಜಣ್ಣ, ಇಒ, ಬಂಟ್ವಾಳ ತಾ.ಪಂ

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.