3 ತಿಂಗಳುಗಳಿಂದ ಕತ್ತಲಲ್ಲಿ ಮುಳುಗಿದ ಮಲ್ಪೆ ಬಾಪುತೋಟ ಬಂದರು ಪ್ರದೇಶ

ಉರಿಯದ ದೀಪಗಳು: ಕೋಟ್ಯಂತರ ರೂಪಾಯಿ ಮೌಲ್ಯದ ಬೋಟುಗಳು ಅಸುರಕ್ಷಿತ

Team Udayavani, Aug 28, 2021, 5:45 AM IST

3 ತಿಂಗಳುಗಳಿಂದ ಕತ್ತಲಲ್ಲಿ ಮುಳುಗಿದ ಮಲ್ಪೆ ಬಾಪುತೋಟ ಬಂದರು ಪ್ರದೇಶ

ಮೀನುಗಾರಿಕೆ ಇಲಾಖೆ ಬಂದರಿನ ಶುಚಿತ್ವ, ಬೀದಿ ದೀಪಗಳ ನಿರ್ವಹಣೆಯನ್ನು ಗುತ್ತಿಗೆದಾರ ಸಂಸ್ಥೆಗೆ ಟೆಂಡರ್‌ ನೀಡಲಾಗಿದೆ. ಬಂದರಿನ ನಿರ್ವಹಣೆಯ ಟೆಂಡರ್‌ ಪಡೆದ ಗುತ್ತಿಗೆದಾರರು ನಿಯಮಿತವಾಗಿ ಬೀದಿ ದೀಪವನ್ನು ಪರಿಶೀಲಿಸಿ ಸರಿಪಡಿಸಿಕೊಳ್ಳಬೇಕಾಗಿದೆ. ಆದರೆ ಇಲ್ಲಿ ಯಾವುದೇ ನಿರ್ವಹಣೆ ಕೆಲಸಗಳು ನಡೆಯುತ್ತಿಲ್ಲ ಎಂಬುದು ಮೀನುಗಾರರ ಆರೋಪ.

ಮಲ್ಪೆ: ಮಲ್ಪೆ ಮೀನುಗಾರಿಕೆ ಮೂರನೇ ಹಂತದ ಬಾಪುತೋಟದ ಭಾಗದ ಬಂದರಿನ ರಸ್ತೆ ಬದಿಯಲ್ಲಿ ಆಳವಡಿಸಲಾದ ದಾರಿದೀಪಗಳು ಕಳೆದ ಮೂರು ತಿಂಗಳುಗಳಿಂದ ಉರಿಯದ ಪರಿಣಾಮ ರಾತ್ರಿ ಹಾಗೂ ನಸುಕಿನ ವೇಳೆ ಮೀನುಗಾರಿಕೆ ಚಟುವಟಿಕೆಗಳನ್ನು ನಡೆಸಲು ಮೀನುಗಾರರು ತೊಂದರೆಯನ್ನು ಅನುಭವಿಸುವಂತಾಗಿದೆ.

ಬಂದರಿನ ಈ ಭಾಗದಲ್ಲಿ ಸುಮಾರು 400ಕ್ಕೂ ಅಧಿಕ ಬೋಟುಗಳನ್ನು ನಿಲ್ಲಿಸಲಾಗುತ್ತಿದ್ದು, ಕೋಟ್ಯಂತರ ರೂ. ಮೌಲ್ಯದ ಸೊತ್ತುಗಳಿವೆ. ಕತ್ತಲಾದ್ದರಿಂದ ಕಳ್ಳರಿಗೆ ಬೋಟಿನ ಬಿಡಿ ಭಾಗಗಳನ್ನು ಕದ್ದೊಯ್ಯುಲು ಅನುಕೂಲ ಮಾಡಿಕೊಟ್ಟಂತಾಗಿದೆ.

ಬಂದರಿನ ಸ್ಲಿಪ್‌ವೇಯಿಂದ ಪಡುಕರೆ ಸೇತುವೆ ಸಂಪರ್ಕದವರೆಗೆ ಸುಮಾರು 32 ಮೆಟಲ್‌ ಲೈಟ್‌, ಸ್ಲಿಪ್‌ವೇ ಬಳಿ ಒಂದು ಹೈಮಾಸ್ಟ್‌ ದೀಪವನ್ನು ಅಳವಡಿಸಲಾಗಿದೆ. ದೀಪಗಳು ಉರಿಯದ ಕಾರಣ ರಾತ್ರಿ ವೇಳೆ ಮೀನುಗಾರಿಕೆ ಬೋಟನ್ನು ದಕ್ಕೆಯಲ್ಲಿ ಲಂಗರು ಹಾಕಲು ಅಥವಾ ತೆರವು ಗೊಳಿಸಲು ಮೀನುಗಾರರಿಗೆ ತೊಂದರೆಯಾಗುತ್ತಿದೆ. ಮಾತ್ರವಲ್ಲದೆ ಕತ್ತಲಲ್ಲಿ ದಕ್ಕೆಯಲ್ಲಿ ನಡೆದಾಡುವುದು ಕಷ್ಟ. ಆಯ ತಪ್ಪಿದರೆ ಹೊಳೆಗೆ ಬೀಳುವ ಪರಿಸ್ಥಿತಿ, ವಾಹನ ಸವಾರರು ಅಪಾಯವನ್ನು ಎದುರಿಸುವಂತಾಗಿದೆ.

ಪಡುಕರೆಗೂ ಪ್ರಮುಖ ರಸ್ತೆ
ಪಡುಕರೆ ಭಾಗವನ್ನು ಸಂಪರ್ಕಿಸುವ ಪ್ರಮುಖ ರಸ್ತೆಯೂ ಇದಾಗಿದ್ದು, ರಾತ್ರಿ ಮತ್ತು ನಸುಕಿನ ವೇಳೆ ಮೀನುಗಾರಿಕೆ ಕೆಲಸಕ್ಕೆ ಬರುವ ಮಹಿಳೆಯರು ಭಯದ ವಾತಾವರಣದಲ್ಲಿ ನಡೆದುಕೊಂಡು ಬರುವ ಪರಿಸ್ಥಿತಿ ಇದೆ. ಮಾತ್ರವಲ್ಲದೆ ವಾಹನ ಸವಾರರೂ ಇಲ್ಲಿ ತೀವ್ರ ತೊಂದರೆಯನ್ನು ಅನುಭವಿಸುವಂತಾಗಿದೆ. ಈ ಬಗ್ಗೆ ಗಮನಹರಿಸಿ ದಾರಿದೀಪದ ಸಮಸ್ಯೆಯನ್ನು ತತ್‌ಕ್ಷಣ ಬಗೆಹರಿಸುವಂತೆ ನಾಗರಿಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ನಡುರಸ್ತೆಯಲ್ಲಿ ದಂಡ ವಸೂಲಿ ಮಾಡುತ್ತಿದ್ದ ಪೊಲೀಸರಿಗೆ ಚಳಿ ಬಿಡಿಸಿದ ರಮೇಶ್ ಕುಮಾರ್

ಇತರ ಸಮಸ್ಯೆಗಳೇನು?
ರಸ್ತೆ ಉದ್ದಕ್ಕೂ ಬೆಳೆದು ನಿಂತ ಗಿಡಗಂಟಿಗಳು

3ನೇ ಹಂತದ ಬಂದರು ಪ್ರದೇಶದ ರಸ್ತೆ ಉದ್ದಕ್ಕೂ ಗಿಡಗಂಟಿಗಳು ಎತ್ತರಕ್ಕೆ ಬೆಳೆದು ನಿಂತಿದ್ದು, ಈ ರಸ್ತೆಯ ತಿರುವಿನಲ್ಲಿ ಸಂಚರಿಸುವ ವಾಹನಗಳಿಗೆ ಎದುರು ಬದಿಯಿಂದ ಬರುವ ವಾಹನಗಳು ಕಾಣದೆ ಅಪಘಾತಗಳು ಸಂಭವಿಸುತ್ತಿವೆ. ಮಲ್ಪೆ ಮುಖ್ಯ ವೃತ್ತದಿಂದ 3ನೇ ಹಂತದ ಬಂದರು ಮತ್ತು ಪಡುಕರೆ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದ್ದು, ಪ್ರತಿನಿತ್ಯ ಇಲ್ಲಿ ಮೀನುಗಾರಿಕೆ ಸಂಬಂಧಿಸಿದಂತೆ ಸಾವಿರಾರು ಜನ ಈ ರಸ್ತೆಯಲ್ಲಿ ಸಂಚರಿಸುತ್ತಾರೆ. ಇನ್ನು ರಾತ್ರಿ ವೇಳೆ ಈ ರಸ್ತೆಯಲ್ಲಿ ವಾಹನ ಚಲಾಯಿಸುವುದು ಇನ್ನೂ ದುಸ್ತರವಾಗಿದೆ.

ಸಮಸ್ಯೆ ಪರಿಹರಿಸಿ
ಪಡುಕರೆ ಭಾಗದಿಂದ ಮಲ್ಪೆಗೆ ಮೀನಿನ ಕೆಲಸಕ್ಕೆ ಪ್ರತಿನಿತ್ಯ ಸಾವಿರಾರು ಮಹಿಳೆಯರು ಮುಂಜಾನೆ 4ಗಂಟೆಗೆ ನಡೆದುಕೊಂಡು ಬರುತ್ತಾರೆ. ದಾರಿದೀಪ ಇಲ್ಲದ್ದರಿಂದ ಭಯದಿಂದಲೇ ನಡೆದಾಡುವಂತಾಗಿದೆ. ಬೋಟಿನಿಂದ ಮೀನು ಖಾಲಿ ಮಾಡಲು ಸಮಸ್ಯೆಯಾಗುತ್ತದೆ. ಸಂಬಂಧಪಟ್ಟವರು ತತ್‌ಕ್ಷಣ ಗಮನ ಹರಿಸಿ ಸಮಸ್ಯೆ ಪರಿಹರಿಸಬೇಕಾಗಿದೆ.
– ದಯಾಕರ ವಿ. ಸುವರ್ಣ, ಅಧ್ಯಕ್ಷರು, ಕನ್ನಿ ಮೀನುಗಾರರ ಸಂಘ, ಮಲ್ಪೆ

ಶೀಘ್ರ ಕ್ರಮ
ಬಂದರಿನ ನಿರ್ವಹಣೆಯನ್ನು ಖಾಸಗಿ ಸಂಸ್ಥೆಗೆ ಗುತ್ತಿಗೆ ನೀಡಲಾಗಿದೆ. ಶುಚಿತ್ವ, ದಾರಿದೀಪವನ್ನು ಆವರೇ ನಿರ್ವಹಿಸಬೇಕಾಗಿದೆ. ಈಗಾಗಲೇ ಉಂಟಾಗಿರುವ ಸಮಸ್ಯೆಯ ಬಗ್ಗೆ ಗುತ್ತಿಗೆದಾರರ ಗಮನಕ್ಕೆ ತಂದು ಆದಷ್ಟು ಬೇಗ ಸರಿಪಡಿಸುವಂತೆ ಸೂಚನೆ ನೀಡಲಾಗುವುದು.
– ಚಂದನ್‌, ಸಹಾಯಕ ನಿರ್ದೇಶಕರು, (ಪ್ರಭಾರ )ಮೀನುಗಾರಿಕೆ ಇಲಾಖೆ

-ನಟರಾಜ್‌ ಮಲ್ಪೆ

ಟಾಪ್ ನ್ಯೂಸ್

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.