ಬಾರಕೂರು ಹಾಲೆಕೊಡಿ: ಸೀತಾನದಿ ಪಾಲಾದ ಸಂಬಂಧಿಕರ ಮನೆಗೆ ಬಂದಿದ್ದ ಇಬ್ಬರು ಯುವಕರು
Team Udayavani, Jul 3, 2020, 11:48 AM IST
ಬ್ರಹ್ಮಾವರ: ಸೀತಾನದಿ ನೀರಿಗೆ ಇಳಿದಿದ್ದ ಇಬ್ಬರು ಯುವಕರು ನೀರಿನ ಸೆಳೆತಕ್ಕೆ ಸಿಲುಕಿ ನೀರುಪಾಲಾದ ಘಟನೆ ಬಾರಕೂರಿನ ಹಾಲೆಕೊಡಿ ಎಂಬಲ್ಲಿ ಶುಕ್ರವಾರ ನಡೆದಿದೆ.
ಕಾರ್ತಿಕ್ (20) ಮತ್ತು ಹರ್ಷ (20) ಎನ್ನುವ ಯುವಕರು ನೀರಿನ ಸೆಳೆತಕ್ಕೆ ಸಿಲುಕಿ ಸೀತಾ ನದಿ ಪಾಲಾದವರು.
ಇವರಿಬ್ಬರೂ ನೆರೆಯ ಹೇರಾಡಿ ಗ್ರಾಮದವರಾಗಿದ್ದು, ಸಂಬಂಧಿಕರ ಮನೆಗೆಂದು ಹಾಲೆಕೊಡಿಗೆ ಬಂದಿದ್ದರು. ಇನ್ನೊಬ್ಬ ಯುವಕನೊಂದಿಗೆ ಸೇರಿ ಇಂದು ಮುಂಜಾನೆ ಸೀತಾನದಿಗೆ ಇಳಿದಿದ್ದರು ಎನ್ನಲಾಗಿದೆ. ಈ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಬದಿಯಲ್ಲಿ ನೀರಿನ ಹರಿವು ಹೆಚ್ಚಿದೆ. ಈ ಇಬ್ಬರು ನೀರಿನ ಸೆಳೆತಕ್ಕೆ ಸಿಲುಕಿ ನೀರು ಪಾಲಾಗಿದ್ದಾರೆ.
ಸ್ಥಳೀಯ ಈಜುಗಾರರು ನೀರಿಗೆ ಧುಮುಕಿ ಓರ್ವನ ಶವವನ್ನು ಹೊರತೆಗೆದಿದ್ದಾರೆ. ಮತ್ತೋರ್ವನಿಗಾಗಿ ಕಾರ್ಯಾಚರಣೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್