ಬಾರ್ಕೂರು ಚೌಳಿಕೆರೆ ಕಾರು ಅಪಘಾತ: ಅಪಾಯವನ್ನೂ ಲೆಕ್ಕಿಸದೇ ಕೆರೆಗೆ ಧುಮುಕಿದ ಅವಳಿ ವೀರರು!


Team Udayavani, Jun 23, 2020, 7:59 PM IST

ಬಾರ್ಕೂರು ಚೌಳಿಕೆರೆ ಕಾರು ಅಪಘಾತ: ಅಪಾಯವನ್ನೂ ಲೆಕ್ಕಿಸದೇ ಕೆರೆಗೆ ಧುಮುಕಿದ ಅವಳಿ ವೀರರು!

ಬ್ರಹ್ಮಾವರ: ಯಾವುದೇ ಒಂದು ಅಪಘಾತ ನಡೆದ ಸಂದರ್ಭದಲ್ಲಿ ತಕ್ಷಣಕ್ಕೆ ಸ್ಪಂದಿಸುವವರೇ ಆಪದ್ಬಾಂಧವರಾಗುತ್ತಾರೆ.

ಮತ್ತು ಇಂತಹ ಆಪದ್ಬಾಂಧವರ ಕಾರಣದಿಂದಲೇ ಅಪಘಾತದ ಸಂದರ್ಭದಲ್ಲಿ ಹಲವಾರು ಜೀವಗಳು ಉಳಿದಿರುವ ಪ್ರಕರಣಗಳು ನಮ್ಮ ಕಣ್ಣಮುಂದಿವೆ.

ಇದೇ ರೀತಿಯಲ್ಲಿ ಮೊನ್ನೆ ರವಿವಾರದಂದು ಬಾರಕೂರಿನ ಸಮೀಪ ಚೌಳಿಕೆರೆಗೆ ಕಾರು ಉರುಳಿದ ಪ್ರಕರಣದಲ್ಲೂ ಹಲವರು ಆಪದ್ಬಾಂಧವರ ಸಕಾಲಿಕ ಪ್ರಯತ್ನದಿಂದ ಒಂದು ಜೀವ ಉಳಿದದೆ.

ಅದರಲ್ಲೂ ಹೂಳು ತುಂಬಿದ್ದ ಆ ಕೆರೆಗೆ ಉರುಳಿ ತಲೆಕೆಳಗಾಗಿದ್ದ ಕಾರಿನಿಂದ ಇಬ್ಬರನ್ನು ಹೊರಗೆಳೆದ ಯುವಕರಿಬ್ಬರ ಶೌರ್ಯ ಇದೀಗ ಸ್ಥಳೀಯವಾಗಿ ಭಾರೀ ಪ್ರಸಂಶೆಗೆ ಪಾತ್ರವಾಗುತ್ತಿದೆ.

ಬಾರ್ಕೂರಿನವರೇ ಆಗಿರುವ ಪ್ರವೀಣ್ ಪೂಜಾರಿ ಹಾಗೂ ಪ್ರದೀಪ್ ದೇವಾಡಿಗ ಎಂಬ ಇಬ್ಬರು ಯುವಕರೇ ಸಕಾಲಿಕ ಸಮಯಪ್ರಜ್ಞೆ ಮೆರೆದು ಅಮೂಲ್ಯ ಜೀವದ ಉಳಿವಿಗೆ ಕಾರಣರಾದವರು.

ಇದನ್ನೂ ಓದಿ: ಬಾರಕೂರು ಚೌಳಿಕೆರೆಗೆ ಬಿದ್ದ ಕಾರು ಓರ್ವ ಸಾವು, ಇನ್ನೋರ್ವ ಮಹಿಳೆ ಗಂಭೀರ

ಏನಿದು ಘಟನೆ:
ಜೂನ್ 21ರ ರವಿವಾರದಂದು ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಇಲ್ಲಿನ ಮುಖ್ಯ ರಸ್ತೆಯಲ್ಲಿ ಕಡಿದಾದ ತಿರುವಿನಂದ ಕೂಡಿರುವ ಜಾಗದಲ್ಲಿ ಅಪಾಯಕಾರಿ ಚೌಳಿಕೆರೆಗೆ ಉರುಳಿ ಬಿದ್ದಿತ್ತು. ಈ ಕಾರಿನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದರು.

ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಕೆರೆಗೆ ಉರುಳಿದ ತಕ್ಷಣವೇ ದೊಡ್ಡದಾದ ಶಬ್ದ ಉಂಟಾಗಿದೆ. ಕೂಡಲೇ ಅಲ್ಲಿದ್ದ ಕೆಲವರು ಘಟನಾ ಸ್ಥಳಕ್ಕೆ ಧಾವಿಸಿ ಬಂದಿದ್ದಾರೆ. ಈ ಸಂದರ್ಭದಲ್ಲಿ ನೀರಿಗೆ ಉರುಳಿದ್ದ ಕಾರು ತಲೆಕೆಳಗಾಗಿ ಅರ್ಧ ಮುಳುಗಿದ ಸ್ಥಿತಿಯಲ್ಲಿತ್ತು.

ತಕ್ಷಣವೇ ಅಪಾಯವನ್ನು ಲೆಕ್ಕಿಸದೇ ಕೆರೆಗೆ ಧುಮುಕಿದ ಪ್ರವೀಣ್ ಹಾಗೂ ಪ್ರದೀಪ್ ಕಾರಿನ ಡೋರನ್ನು ಒಡೆಯುವ ಸಾಹಸವನ್ನು ಮಾಡಿದ್ದಾರೆ.

ಮಾತ್ರವಲ್ಲದೇ ಅದರ ಒಳಗಿದ್ದವರನ್ನು ಹೊರಗೆಳೆಯುವ ಸಾಹಸಕ್ಕೂ ಕೈ ಹಾಕಿದ್ದಾರೆ. ನೀರು ಕುಡಿದು ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯುವತಿಯನ್ನು ಹೊರಗೆಳೆದ ಈ ಇಬ್ಬರು ಯುವಕರು ಆಕೆಯನ್ನು ಇನ್ನೊಬ್ಬ ಯುವಕನ ಮೂಲಕ ಕೆರೆಯ ದಡಕ್ಕೆ ಸಾಗಿಸಿದ್ದಾರೆ.

ಅಲ್ಲಿ ಈ ಯುವತಿಗೆ ನಮನಾ ಎಂಬ ವಿದ್ಯಾರ್ಥಿನಿ ಸಹಿತ ಉಳಿದವರು ಪ್ರಥಮ ಚಿಕಿತ್ಸೆ ಮಾಡಿ ಆಕೆಯ ಹೊಟ್ಟೆಯಲ್ಲಿದ್ದ ನೀರನ್ನು ಹೊರ ಹಾಕಿ, ಮೈಯನ್ನು ಬೆಚ್ಚಗಾಗಿಸುವ ಮೂಲಕ ಆಕೆಯ ಜೀವವನ್ನು ಉಳಿಸುವ ಪ್ರಾಥಮಿಕ ಕೆಲಸವನ್ನು ಮಾಡಿದ್ದಾರೆ.

ಇದನ್ನೂ ಓದಿ: ಯುವತಿಗೆ ಬಾಲಕಿಯಿಂದ ಜೀವದಾನ

ಬಳಿಕ ಕಾರಿನಲ್ಲಿದ್ದ ವಕ್ವಾಡಿಯ ಉದ್ಯಮಿ ಸಂತೋಷ್ ಶೆಟ್ಟಿ ಅವರನ್ನೂ ಸಹ ಈ ಯುವಕರು ಕಷ್ಟಪಟ್ಟು ಕಾರಿನಿಂದ ಹೊರಗೆಳೆದರಾದರೂ ಸಂತೋಷ್ ಅವರು ಆಗಲೇ ತೀವ್ರ ಅಸ್ವಸ್ಥಗೊಂಡಿದ್ದರು ಮತ್ತು ಅವರನ್ನು ಉಳಿಸಿಕೊಳ್ಳುವ ಪ್ರಯತ್ನಗಳು ಫಲನೀಡಿಲ್ಲ.

ಪ್ರವೀಣ್ ಹಾಗೂ ಪ್ರದೀಪ್ ಅವರು ಅಪಾಯವನ್ನೂ ಲೆಕ್ಕಿಸದೇ ಮೇಲಕ್ಕೆತ್ತಿದ ಯುವತಿಗೆ ಬಳಿಕ ಹತ್ತನೇ ತರಗತಿ ವಿದ್ಯಾರ್ಥಿನಿ ನೀಡಿದ ಪ್ರಥಮ ಚಿಕಿತ್ಸೆಯ ವಿವರ ಮಾಧ್ಯಮಗಳಲ್ಲಿ ಪ್ರಕಟಗೊಂಡು ಭಾರೀ ಪ್ರಶಂಸೆ ವ್ಯಕ್ತವಾಗಿತ್ತು. ಈ ಸಂದರ್ಭದಲ್ಲಿ ನಮನಾ ಅವರಿಗೆ ಅಲ್ಲಿದ್ದ ಇನ್ನೂ ಕೆಲವರು ಪ್ರಥಮ ಚಿಕಿತ್ಸೆಗೆ ಸಹಕಾರ ನೀಡಿದ್ದು ವಿಡಿಯೋದಲ್ಲಿ ದಾಖಲಾಗಿದೆ.

ಆದರೆ ಕೆಸರು ತುಂಬಿದ ಕೆರೆಗೆ ಧುಮುಕಿ ಕಾರಿನಲ್ಲಿದ್ದವರನ್ನು ಸಾಹಸದಿಂದ ಹೊರಗೆಳೆದ ಈ ಇಬ್ಬರು ಯುವಕರ ಕುರಿತಾದ ಮಾಹಿತಿ ಇಂದು ತಡವಾಗಿ ಬೆಳಕಿಗೆ ಬಂದಿದೆ ಮತ್ತು ಈ ಇಬ್ಬರು ಯುವಕರ ಸಮಯಪ್ರಜ್ಞೆ ಹಾಗೂ ಸಾಹಸ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ಲಭಿಸುತ್ತಿದೆ.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.