ಆಳುಪೋತ್ಸವ ಕಂಡ ಬಾರಕೂರು ಕೋಟೆ ಮತ್ತೆ ಕೊಂಪೆ..!

ಪ್ರವಾಸೋದ್ಯಮದ ಉತ್ತೇಜನಕ್ಕೆ ಯಾವುದೇ ಕ್ರಮವಿಲ್ಲ

Team Udayavani, Jan 27, 2020, 5:54 AM IST

2401BVRE1

ಬ್ರಹ್ಮಾವರ: ಕಳೆದ ವರ್ಷ ಜನವರಿಯಲ್ಲಿ ಅದ್ಧೂರಿ ಆಳುಪೋತ್ಸವ ಕಂಡ ಬಾರಕೂರು ಕೋಟೆ ಮತ್ತೆ ಹಾಳು ಕೊಂಪೆಯಾಗಿ ಮಾರ್ಪಾಡಾಗಿದೆ.

ಹತ್ತು ಹಲವು ವೈಶಿಷ್ಟ್ಯತೆ, ಆಕರ್ಷಣೆಗಳಿರುವ ಬಾರಕೂರು ಪಾರಂಪರಿಕ ನಗರಿಯಾಗಿ ಗುರುತಿಸಿಕೊಳ್ಳುವ ಅರ್ಹತೆ ಹೊಂದಿದ್ದು, ಆದರೆ ಇಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ.

ಉತ್ಸವಕ್ಕೆ ಸೀಮಿತ
ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬಾರಕೂರಿನಲ್ಲಿ ಆಳುಪೋತ್ಸವ ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಗತ ವೈಭವ ಕಂಡ ಬಾರಕೂರಿನ ಪುನರುಜ್ಜೀವನಕ್ಕೆ ಇದು ಚಾಲನೆಯಂತಿತ್ತು. ಆದರೆ. ಇದು ಉತ್ಸವಕ್ಕೆ ಮಾತ್ರ ಸೀಮಿತವಾಗಿದೆ.

ವೈಶಿಷ್ಟ್ಯಗಳು
ಬಾರಕೂರು ಐತಿಹಾಸಿಕ, ಚಾರಿತ್ರಿಕ ಹಿನ್ನೆಲೆ ಇರುವ ಊರು. 365 ದೇವಸ್ಥಾನ, ಹತ್ತು ಕೇರಿ, ಬೃಹತ್‌ ಕೆರೆ ಹಾಗೂ ಮದಗಗಳನ್ನು ಹೊಂದಿದೆ. ಕೋಟೆ, ಸಿಂಹಾಸನಗುಡ್ಡೆ, ಕತ್ತಲೆ ಬಸದಿ ಆಕರ್ಷಣೀಯ ಸ್ಥಳಗಳಾಗಿವೆ.

ಮಾಹಿತಿ ಅಗತ್ಯ
ಬಾರಕೂರಿನ ಪ್ರೇಕ್ಷಣೀಯ ಸ್ಥಳಗಳನ್ನು ಅಭಿವೃದ್ಧಿಪಡಿಸುವ ಜತೆಗೆ ಪ್ರವಾಸಿಗರಿಗೆ ಮಾಹಿತಿ ನೀಡುವ ಅಗತ್ಯವಿದೆ. ಈ ಕುರಿತು ಫಲಕಗಳು, ಹಿನ್ನಲೆ ಒಳಗೊಂಡ ಬರಹ, ಮಾರ್ಗಸೂಚಿ ಅನಿವಾರ್ಯ. ಐತಿಹಾಸಿಕ ಸ್ಥಳಗಳ ಮಾಹಿತಿ ನೀಡುವ ಓರ್ವ ನುರಿತ ಗೈಡ್‌ ನೇಮಕವಾಗಬೇಕಿದೆ.

ವಿಸ್ತರಣೆ ಅಗತ್ಯ
ಪ್ರವಾಸೋದ್ಯಮ ಇಲಾಖೆಯಿಂದ ಹೆರಿಟೇಜ್‌ ವಾಕ್‌(ಪಾರಂಪರಿಕ ನಡಿಗೆ) ವಿಶಿಷ್ಟ ಯೋಜನೆ ಜಾರಿಗೊಳಿಸಲಾಗಿತ್ತು. ಪ್ರಮುಖ 17 ಕೇಂದ್ರಗಳನ್ನು ಗುರುತಿಸಿ ಪ್ರವಾಸಿಗರಿಗೆ ಅಲ್ಲಿನ ಮಾಹಿತಿ ಒದಗಿಸುವ ಆ್ಯಪ್‌ ರಚನೆಗೊಂಡಿತ್ತು. ಈ ತಂತ್ರಾಂಶವನ್ನು ಮೇಲ್ದರ್ಜೆಗೇರಿಸಿ, ಇನ್ನಷ್ಟು ಕೇಂದ್ರಗಳನ್ನು ಸೇರಿಸುವ ಅಗತ್ಯವಿದೆ.

ಪ್ರಸ್ತಾವನೆ ಸಲ್ಲಿಸಿದ್ದೇವೆ
ಬಾರಕೂರನ್ನು ಕೋಸ್ಟಲ್‌ ಮಾಸ್ಟರ್‌ ಯೋಜನೆಯಡಿ ಗುರುತಿಸಿ ಪ್ರಸ್ತಾವನೆ ಸಲ್ಲಿಸಿದ್ದೇವೆ. ಆಯ್ಕೆಯಾದಲ್ಲಿ ಸಮಗ್ರ ಅಭಿವೃದ್ಧಿಯ ವಿಸ್ತೃತ ಯೋಜನಾ ವರದಿ ರಚಿಸಿ ಕಾರ್ಯರೂಪಗೊಳಿಸಲಾಗುತ್ತದೆ ಎಂದು ಉಡುಪಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಚಂದ್ರಶೇಖರ್‌ ಅವರು ಹೇಳಿದರು.

ವಸ್ತು ಸಂಗ್ರಹಾಲಯ ಅಗತ್ಯ
ದೇವಸ್ಥಾನ, ಬೀಚ್‌ ಪ್ರವಾಸೋದ್ಯಮದ ಜತೆಗೆ ಐತಿಹಾಸಿಕ ಪ್ರವಾಸೋದ್ಯಮ ಬೆಳೆಯಬೇಕು. ಬಾರಕೂರಿನ ಶಾಸನಗಳ ರಕ್ಷಣೆಗಾಗಿ ವಸ್ತು ಸಂಗ್ರಹಾಲಯ ಅತೀ ಅವಶ್ಯ. ಯುವ ಪೀಳಿಗೆಗೆ ಭವ್ಯ ಇತಿಹಾಸ ತಿಳಿಸುವ ಅಗತ್ಯವಿದೆ ಎಂದು ನಿವೃತ್ತ ಪ್ರಾಂಶುಪಾಲ, ಇತಿಹಾಸ ಸಂಶೋಧಕರಾದ ಡಾ| ಜಗದೀಶ ಶೆಟ್ಟಿ ಅವರು ಹೇಳಿದರು.

ಮೂಲಭೂತ ವ್ಯವಸ್ಥೆ ಕಲ್ಪಿಸಿ
ಕಲೆ, ಸಂಸ್ಕೃತಿಯ ಉಳಿವಿಗೆ ಪ್ರತಿವರ್ಷ ಉತ್ಸವ ಅಗತ್ಯ. ಇದರ ಪೂರಕವಾಗಿ ರಸ್ತೆ ಅಭಿವೃದ್ಧಿ, ಒಳಚರಂಡಿ, ವಿದ್ಯುದೀಕರಣ, ಶೌಚಾಲಯ ಇತ್ಯಾದಿ ವ್ಯವಸ್ಥೆಗಳೂ ಆಗಬೇಕು ಎಂದು ಬಾರಕೂರು ಶ್ರೀ ಮಾಸ್ತಿ ಅಮ್ಮನವರ ದೇಗುಲದ ಅರ್ಚಕರಾದ ಅನಂತಪದ್ಮನಾಭ ಭಟ್‌ ಅವರು ಹೇಳಿದರು.

ಆಗಬೇಕಿರುವುದು
ಬಾರಕೂರು ಪೇಟೆಯಲ್ಲಿ ಮುಖ್ಯವಾಗಿ ಒಳಚರಂಡಿ, ತ್ಯಾಜ್ಯ ವಿಲೇವಾರಿ, ರಸ್ತೆ ವಿಸ್ತರಣೆ, ಬೀದಿ ದೀಪ, ಕುಡಿಯುವ ನೀರಿನ ವ್ಯವಸ್ಥೆ ಆಗಬೇಕಾಗಿದೆ. ಶೌಚಾಲಯ ಅತ್ಯಂತ ದುಸ್ಥಿತಿಯಲ್ಲಿದೆ.

ಬಾರಕೂರಿನ 365 ದೇವಸ್ಥಾನಗಳಲ್ಲಿ ಇಂದು ಬಹಳಷ್ಟು ದೇವಸ್ಥಾನಗಳು ನಶಿಸಿ ಹೋಗಿವೆ. ಇವುಗಳ ವಿವರಗಳನ್ನು ಕ್ರೋಡೀಕರಿಸುವ ಕೆಲಸ ಧಾರ್ಮಿಕ ದತ್ತಿ ಇಲಾಖೆಯಿಂದ ಆಗಬೇಕಾಗಿದೆ. ಇಲ್ಲಿನ ಐತಿಹಾಸಿಕ ಸ್ಥಳಗಳು, ಶಿಲಾ ಶಾಸನ, ಕೆರೆಗಳ ಅಭಿವೃದ್ಧಿಯೂ ಆವಶ್ಯಕ .

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.