ಬಸ್ರೂರು-ಕಂಡ್ಲೂರು: ಸಮಯ ಮೀರಿ ಓಡುವ ಬಸ್ಗಳ ಪೈಪೋಟಿ
Team Udayavani, Oct 17, 2019, 10:50 PM IST
ಬಸ್ರೂರು: ಕುಂದಾಪುರ- ಬಸ್ರೂರು-ಕಂಡ್ಲೂರು ಮಾರ್ಗದಲ್ಲಿ ಕರ್ನಾಟಕ ರಾಜ್ಯ ಸಾರಿಗೆ ನಿಗಮದ ಬಸ್ಗಳಿಗಿಂತ ಖಾಸಗಿ ಬಸ್ಗಳದ್ದೇ ಹೆಚ್ಚು ಅಬ್ಬರವಾಗಿದೆ.
ಕೆ.ಎಸ್.ಆರ್.ಟಿ.ಸಿ. ಬಸ್ ಖಾಸಗಿ ಬಸ್ಗಿಂತ ತುಸು ಮುಂದಿದ್ದರೆ ಖಾಸಗಿ ಬಸ್ ಗಳನ್ನು ಅತಿ ವೇಗದಲ್ಲಿ ಚಲಾಯಿಸಿ ನಿಲ್ದಾಣದಲ್ಲಿ ತುಸು ಮುಂದೆ ಅಡ್ಡವಿರಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲಾಗುತ್ತದೆ. ಇಂತಹ ಸಂದರ್ಭದಲ್ಲಿ ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಯಾರೂ ಕಾಳಜಿ ವಹಿಸುವುದಿಲ್ಲ.
ಈ ಅವ್ಯವಸ್ಥೆಯಿಂದಾಗಿ ಮಹಿಳೆಯರು ಮಕ್ಕಳು ಹೆಚ್ಚಿನ ತೊಂದರೆಗೆ ಒಳಗಾಗುತ್ತಿದ್ದು, ಈ ಬಗ್ಗೆ ಪ್ರಯಾಣಿಕರು ದೂರಿಕೊಂಡಿದ್ದಾರೆ. ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಈ ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್ಗಳು ಸಮಯ ಪಾಲನೆ ಮಾಡುತ್ತಿಲ್ಲವಾಗಿದ್ದು, ಸಾರ್ವಜನಿಕರು ಪರದಾಡುವ ಸ್ಥಿತಿ ಇದೆ.
ಈ ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್ಗಳು ಬಸ್ರೂರು-ಕಂಡ್ಲೂರಿನಲ್ಲಿ ನಿಲ್ಲುವುದಿಲ್ಲ. ಆದರೆ ಮುಖ್ಯವಾಗಿ ಕುಂದಾಪುರ – ಬಸ್ರೂರು – ಕಂಡ್ಲೂರು – ಸಿದ್ಧಾಪುರ ಮಾರ್ಗವಾಗಿ ಸಾಗುವ ಬಸ್ಗಳು ಅನಿಯಮಿತವಾಗಿ ಸಂಚಾರ ನಡೆಸುತ್ತಿದ್ದು ಇದು ಪ್ರಯಾಣಿಕರಿಗೆ ಅಪಾಯದ ಮುನ್ಸೂಚನೆಯಾಗಿದೆ.
ಸಂಬಂಧಪಟ್ಟ ಇಲಾಖೆಯವರು ತತ್ಕ್ಷಣ ಕ್ರಮ ಜರಗಿಸಬೇಕೆಂದು ಪ್ರಯಾಣಿಕರು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ
Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್: ಮತ್ತೆ ನಕ್ಸಲರ ಸದ್ದು?
Siddapura ಹೆಂಗವಳ್ಳಿ: ಮರದಿಂದ ಬಿದ್ದು ಆಸ್ಪತ್ರೆ ಸೇರಿದ್ದ ಕೃಷಿಕ ಚಿಕಿತ್ಸೆ ಫಲಿಸದೆ ಸಾವು
Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ