ಬಸ್ರೂರು-ಕಂಡ್ಲೂರು: ಸಮಯ ಮೀರಿ ಓಡುವ ಬಸ್ಗಳ ಪೈಪೋಟಿ
Team Udayavani, Oct 17, 2019, 10:50 PM IST
ಬಸ್ರೂರು: ಕುಂದಾಪುರ- ಬಸ್ರೂರು-ಕಂಡ್ಲೂರು ಮಾರ್ಗದಲ್ಲಿ ಕರ್ನಾಟಕ ರಾಜ್ಯ ಸಾರಿಗೆ ನಿಗಮದ ಬಸ್ಗಳಿಗಿಂತ ಖಾಸಗಿ ಬಸ್ಗಳದ್ದೇ ಹೆಚ್ಚು ಅಬ್ಬರವಾಗಿದೆ.
ಕೆ.ಎಸ್.ಆರ್.ಟಿ.ಸಿ. ಬಸ್ ಖಾಸಗಿ ಬಸ್ಗಿಂತ ತುಸು ಮುಂದಿದ್ದರೆ ಖಾಸಗಿ ಬಸ್ ಗಳನ್ನು ಅತಿ ವೇಗದಲ್ಲಿ ಚಲಾಯಿಸಿ ನಿಲ್ದಾಣದಲ್ಲಿ ತುಸು ಮುಂದೆ ಅಡ್ಡವಿರಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲಾಗುತ್ತದೆ. ಇಂತಹ ಸಂದರ್ಭದಲ್ಲಿ ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಯಾರೂ ಕಾಳಜಿ ವಹಿಸುವುದಿಲ್ಲ.
ಈ ಅವ್ಯವಸ್ಥೆಯಿಂದಾಗಿ ಮಹಿಳೆಯರು ಮಕ್ಕಳು ಹೆಚ್ಚಿನ ತೊಂದರೆಗೆ ಒಳಗಾಗುತ್ತಿದ್ದು, ಈ ಬಗ್ಗೆ ಪ್ರಯಾಣಿಕರು ದೂರಿಕೊಂಡಿದ್ದಾರೆ. ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಈ ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್ಗಳು ಸಮಯ ಪಾಲನೆ ಮಾಡುತ್ತಿಲ್ಲವಾಗಿದ್ದು, ಸಾರ್ವಜನಿಕರು ಪರದಾಡುವ ಸ್ಥಿತಿ ಇದೆ.
ಈ ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್ಗಳು ಬಸ್ರೂರು-ಕಂಡ್ಲೂರಿನಲ್ಲಿ ನಿಲ್ಲುವುದಿಲ್ಲ. ಆದರೆ ಮುಖ್ಯವಾಗಿ ಕುಂದಾಪುರ – ಬಸ್ರೂರು – ಕಂಡ್ಲೂರು – ಸಿದ್ಧಾಪುರ ಮಾರ್ಗವಾಗಿ ಸಾಗುವ ಬಸ್ಗಳು ಅನಿಯಮಿತವಾಗಿ ಸಂಚಾರ ನಡೆಸುತ್ತಿದ್ದು ಇದು ಪ್ರಯಾಣಿಕರಿಗೆ ಅಪಾಯದ ಮುನ್ಸೂಚನೆಯಾಗಿದೆ.
ಸಂಬಂಧಪಟ್ಟ ಇಲಾಖೆಯವರು ತತ್ಕ್ಷಣ ಕ್ರಮ ಜರಗಿಸಬೇಕೆಂದು ಪ್ರಯಾಣಿಕರು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
MUST WATCH
ಹೊಸ ಸೇರ್ಪಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?