ಹಾಸ್ಟೆಲ್‌ ಮಲಿನ ನೀರು ರಸ್ತೆ ಬದಿಗೆ; ವ್ಯಾಪಿಸಿದ ದುರ್ನಾತ

ಮೂಗು ಮುಚ್ಚಿ ಬನ್ನಿ; ಇಲ್ಲಿ ಬಿಸಿಎಂ ಹಾಸ್ಟೆಲ್‌ ಇದೆ!

Team Udayavani, Jan 25, 2020, 6:01 AM IST

2401KDLM11PH2

ಕುಂದಾಪುರ: ನಗರದಲ್ಲಿ ಬಿಸಿಎಂ ಹಾಸ್ಟೆಲ್‌ ಎಲ್ಲಿದೆ ಎಂದು ಕೇಳಿದರೆ ಸಿಗುವ ಉತ್ತರ ಬಹಳ ಸುಲಭದ್ದು. ಇಲ್ಲಿನ ತಾಲೂಕು ಪಂಚಾಯತ್‌ ಬಳಿಯ ರಸ್ತೆಯಲ್ಲಿ ಹೋಗುವಾಗ ಹೊಚ್ಚಹೊಸ ದೊಡ್ಡ ಕಟ್ಟಡ ಕಾಣುತ್ತದೆ. ಅಲ್ಲಿಂದ ಮುಂದೆ ಸಾಗಿದಾಗ ವಾಸನೆ ಮೂಗಿಗೆ ಅಡರುತ್ತದೆ. ಹಾಗೆ ಮೂಗು ಮುಚ್ಚಿಕೊಂಡು ಹೋದರೆ ಸಿಗುವುದೇ ಬಿಸಿಎಂ ಹಾಸ್ಟೆಲ್‌!

ಅವ್ಯವಸ್ಥೆ
ಇದು ಹಾಸ್ಟೆಲ್‌ ಮಕ್ಕಳ ತಪ್ಪಲ್ಲ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಡೆಸಲ್ಪಡುತ್ತಿರುವ ಹಾಸ್ಟೆಲ್‌ನಲ್ಲಿ ಮಿತಿಗಿಂತ ಹೆಚ್ಚಿನ ಸಂಖ್ಯೆ ವಿದ್ಯಾರ್ಥಿಗಳು. ಹಳೆ ಹಾಸ್ಟೆಲ್‌ ಕಟ್ಟಡದಲ್ಲಿ 100 ಮಕ್ಕಳ ಸಾಮರ್ಥ್ಯ ಇದ್ದು ಅಲ್ಲಿ ಈಗ 200 ಮಕ್ಕಳನ್ನು ತುಂಬಿಸಲಾಗಿದೆ. ಅಷ್ಟೂ ಮಂದಿ ಇರುವ ಜಾಗದಲ್ಲೇ ಅದೇ ಶೌಚಾಲಯ, ಸ್ನಾನದ ಕೋಣೆ, ಬಟ್ಟೆ ಒಗೆಯುವ ಸ್ಥಳವನ್ನು ಬಳಸಿಕೊಂಡು ಉಳಕೊಳ್ಳಬೇಕಾಗಿದೆ.

ವಾಸನೆ
ಸ್ನಾನಗೃಹದ, ಬಟ್ಟೆ ಒಗೆದ ನೀರು ರಸ್ತೆ ಬದಿಯ ಚರಂಡಿ ಸೇರುತ್ತದೆ. ಇದು ಅಸಾಧ್ಯ ವಾತಾವರಣ ಉಂಟು ಮಾಡುತ್ತದೆ. ಇಲ್ಲೇ ಸನಿಹದಲ್ಲಿ ಮಹಿಳಾ ಮಂಡಳಗಳ ಒಕ್ಕೂಟ, ಸಾಂತ್ವನ ಕೇಂದ್ರ, ರೋಟರಿ ಸಭಾಂಗಣ, ಅಂಬೇಡ್ಕರ್‌ ಸಭಾಭವನ ಇದ್ದು ಸಾರ್ವಜನಿಕರು ಬರುತ್ತಾರೆ. ಇಲ್ಲಿಗೆ ಬರುವವರೆಲ್ಲ ನೀರು ಹರಿವಾಗ ವಾಸನೆ ಸಹಿಸಿಕೊಳ್ಳಬೇಕಾದ್ದು ಅನಿವಾರ್ಯವಾಗಿದೆ.

ಭೇಟಿ
ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಅವರು ಇಲ್ಲಿಗೆ ಎರಡು ಬಾರಿ ಭೇಟಿ ನೀಡಿದ್ದು ಸ್ವಚ್ಛ ತೆಗೆ ಆದ್ಯತೆ ನೀಡಲು ಸೂಚನೆ ನೀಡಿದ್ದಾರೆ. ಕೊಳಕು ನೀರು ರ‌ಸ್ತೆ ಬದಿಯ ಚರಂಡಿ ಸೇರುವುದನ್ನು ಮನಗಂಡು ಜಿ.ಪಂ. ವತಿಯಿಂದ ಅನುದಾನ ನೀಡಿ ಶೌಚಾಲಯ ನಿರ್ಮಾಣಕ್ಕೆ ಆದೇಶಿಸಿದ್ದಾರೆ. ಪುರಸಭೆಯೂ ಅನುದಾನ ಕಾಯ್ದಿರಿಸಿದೆ. ಆದರೆ ಅದಾಗಿ ವರ್ಷಗಳಾಗುತ್ತಾ ಬಂದರೂ ಬಿಸಿಎಂ ಇಲಾಖೆ ತುಟಿಪಿಟಕ್‌ ಎನ್ನಲಿಲ್ಲ. ಶೌಚಾಲಯಗಳನ್ನು ಕಟ್ಟಿಸಲಿಲ್ಲ. ನೀರು ರಸ್ತೆ ಬದಿ ಚರಂಡಿ ಸೇರದಂತೆ ಮಾಡಲೇ ಇಲ್ಲ.

ಹೊಸ ಕಟ್ಟಡ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೂಲಕ ಡಿ. ದೇವರಾಜ ಅರಸು ಬಿಸಿಎಂ ಮೆಟ್ರಿಕ್‌ ಅನಂತರದ ಬಾಲಕಿಯರ ಹಾಸ್ಟೆಲ್‌2001ರಲ್ಲಿ ಮಂಜೂರಾಗಿದೆ. ಪ್ರಸ್ತುತ ಇರುವ ಕಟ್ಟಡದಲ್ಲಿ 100 ವಿದ್ಯಾರ್ಥಿನಿಯರ ಸಾಮರ್ಥ್ಯ ಎಂದಾದರೂ 200 ವಿದ್ಯಾರ್ಥಿನಿಯರಿದ್ದಾರೆ. ಈ ನಿಟ್ಟಿನಲ್ಲಿ ಹೊಸ ಕಟ್ಟಡ ಮಂಜೂರಾಗಿತ್ತು. ಹಳೆ ಕಟ್ಟಡದ ಪಕ್ಕದಲ್ಲೇ 34 ಸೆಂಟ್ಸ್‌ ಜಾಗವಿದ್ದು 3.37 ಕೋ.ರೂ. ವೆಚ್ಚದಲ್ಲಿ ಹಾಸ್ಟೆಲ್‌ನ ಹೊಸ ಕಟ್ಟಡ ನಿರ್ಮಾಣವಾಗಿದೆ. ಇದರಲ್ಲಿ 100 ವಿದ್ಯಾರ್ಥಿನಿಯರಿಗೆ ತಂಗಲು ಅನುವಾಗುವಂತೆ 10 ಕೊಠಡಿಗಳಿವೆ.

ಎಷ್ಟು ಶೀಘ್ರ ಸಾಧ್ಯವೋ ಅಷ್ಟು ಶೀಘ್ರ ಹೊಸ ಕಟ್ಟಡ ಬಳಕೆಗೆ ದೊರೆತರೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ಪುರಸಭೆಗೆ ಕಪ್ಪುಚುಕ್ಕಿ
ಸ್ವಚ್ಛ ಕುಂದಾಪುರ, ಸುಂದರ ಕುಂದಾಪುರ ಎಂದು ಘೋಷಣೆ ಹಾಕುವ ಕುಂದಾಪುರ ಪುರಸಭೆಗೆ ಈ ಕೊಳಚೆಯಿಂದಾಗಿ ಕಪ್ಪುಚುಕ್ಕಿ ಇಟ್ಟಂತಾಗಿದೆ. ತಾಲೂಕು ಪಂಚಾಯತ್‌ ಸನಿಹ ದಾಟಿ ಬಂದವರಿಗೆಲ್ಲ ಈ ದುರ್ನಾತವೇ ಮೊದಲ ಸ್ವಾಗತವಾಗಿದೆ ಬಿಸಿಎಂ ಇಲಾಖೆ ಕೂಡಾ ಮಕ್ಕಳ ಆರೋಗ್ಯದ ದೃಷ್ಟಿಯಿಂದ, ಸಾರ್ವಜನಿಕ ಹಿತದೃಷ್ಟಿಯಿಂದ ಯೋಚಿಸಬೇಕಿದೆ.

ಶೀಘ್ರ ಕಾಮಗಾರಿ
ಈ ಕುರಿತು ಸಾಕಷ್ಟು ದೂರುಗಳು ಬಂದಿವೆ. ಜಿ.ಪಂ. ಸೂಚನೆಯಂತೆ ಅನುದಾನ ಮೀಸಲಿಡಲಾಗಿದೆ. ಅದಕ್ಕೂ ಮೊದಲು ಕಾಂಕ್ರೀಟ್‌ ಚರಂಡಿ ನಿರ್ಮಿಸಿ ಅದಕ್ಕೆ ಸ್ಲಾéಬ್‌ ಮುಚ್ಚಲು 8.5 ಲಕ್ಷ ರೂ. ಅಂದಾಜುಪಟ್ಟಿ ತಯಾರಿಸಲಾಗಿದೆ. ಏಕಕಾಲದಲ್ಲಿ ಅಷ್ಟು ಅನುದಾನ ಅಲಭ್ಯವಾದ ಕಾರಣ 3.5 ಲಕ್ಷ ರೂ.ಗಳ ಕಾಮಗಾರಿ ನಡೆಸಲಾಗುವುದು.
-ಗೋಪಾಲಕೃಷ್ಣ ಶೆಟ್ಟಿ, ಮುಖ್ಯಾಧಿಕಾರಿ, ಪುರಸಭೆ

– ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.