Udupi; ಬೇಸಗೆಯಲ್ಲಿ ನೀರಿನ ಕೊರತೆ ಆಗದಂತೆ ಎಚ್ಚರ ವಹಿಸಿ

ಉಸ್ತುವಾರಿ ಕಾರ್ಯದರ್ಶಿ ಡಾ| ಎಂ.ಟಿ. ರೆಜು ಸೂಚನೆ

Team Udayavani, Feb 28, 2024, 12:46 AM IST

ಬೇಸಗೆಯಲ್ಲಿ ನೀರಿನ ಕೊರತೆ ಆಗದಂತೆ ಎಚ್ಚರ ವಹಿಸಿ

ಮಣಿಪಾಲ: ಜಿಲ್ಲೆಯಲ್ಲಿ ಬೇಸಗೆ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗಬಹುದಾದ ಗ್ರಾಮಗಳನ್ನು ಗುರುತಿಸಿ, ನೀರಿನ ಸಮಸ್ಯೆ ಉಂಟಾದಲ್ಲಿ ಸ್ಥಳೀಯ ನೀರಿನ ಮೂಲಗಳಿಂದ ಕುಡಿಯುವ ನೀರು ಒದಗಿಸಲು ಯೋಜನೆ ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ| ಎಂ.ಟಿ. ರೆಜು ಅಧಿಕಾರಿಗಳಿಗೆ ನಿರ್ದೇಶಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲೆಯ ಮಾಸಿಕ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ಜಲಜೀವನ್‌ ಮಿಷನ್‌ ಅಡಿಯಲ್ಲಿ ಬಾಕಿ ಇರುವ ಕಾಮಗಾರಿಗಳನ್ನು ಆದ್ಯತೆ ಮೇಲೆ ಶೀಘ್ರ ಪೂರ್ಣಗೊಳಿಸಬೇಕು. ಉಡುಪಿ ನಗರಕ್ಕೆ ವಾರಾಹಿ ಯೋಜನೆಯ ಕುಡಿಯುವ ನೀರಿನ ಕಾಮಗಾರಿಯನ್ನು ಅರಣ್ಯ ಇಲಾಖೆಯ ಪೂರ್ವಾನುಮತಿ ಪಡೆದು ಹಾಗೂ ಕೆಲವೊಂದು ಭಾಗದಲ್ಲಿ ತಾತ್ಕಾಲಿಕ ಕಾಮಗಾರಿಯನ್ನು ಕೈಗೊಂಡು ನಗರಕ್ಕೆ ನೀರು ಒದಗಿಸಬೇಕು ಎಂದು ಸೂಚಿಸಿದರು.

19 ವಾರಕ್ಕೆ ಬೇಕಾದ
ಮೇವು ದಾಸ್ತಾನು
ಜಿಲ್ಲೆಯಲ್ಲಿ ಮುಂದಿನ 19 ವಾರಗಳಿಗಾಗುವಷ್ಟು ಜಾನುವಾರುಗಳ ಮೇವು ಲಭ್ಯವಿದೆ. ಜಾನುವಾರುಗಳಿಗೆ ಅಗತ್ಯವಿರುವ ಮೇವಿನ ಕಿಟ್‌ಗಳನ್ನು ರೈತರಿಗೆ ವಿತರಿಸುವುದರೊಂದಿಗೆ ಮೇವು ಬೆಳೆಯಲು ಪ್ರೋತ್ಸಾಹಿಸಬೇಕು. ಸಾಧ್ಯವಾದಲ್ಲಿ ನರೇಗಾಡದಡಿ ಮೇವು ಬೆಳೆಯಲು ಮುಂದಾಗಬೇಕು ಎಂದರು.

ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಂದ ಜಿಲ್ಲೆಯಲ್ಲಿ ಅಡಿಕೆ ಹಳದಿ ರೋಗ ನಿಯಂತ್ರಣ, ಪ್ರಧಾನ ಮಂತ್ರಿ ಸಿಂಚಾಯ ಯೋಜನೆಯ ಅನುಷ್ಠಾನ ಮಾಹಿತಿ ಪಡೆದು, ತೋಟಗಾರಿಕೆ ಬೆಳೆಗಳ ಮೌಲ್ಯವರ್ಧನೆಗೆ ಒತ್ತು ನೀಡಬೇಕು. ಆಹಾರ ಸಂಸ್ಕರಣ ಘಟಕ ತೆರೆಯಲು ಹಾಗೂ ಮಹಿಳಾ ಸ್ವಸಹಾಯ ಸಂಘಗಳ ಮೂಲಕ ಸಿದ್ಧ ಆಹಾರ ಪದಾರ್ಥಗಳ ಉತ್ಪಾದನೆಗೆ ತೊಡಗಿಸಿಕೊಳ್ಳಲು ಉತ್ತೇಜಿಸಬೇಕು ಎಂದರು.

ವಿವೇಕ ಯೋಜನೆಯಡಿ ಹೊಸದಾಗಿ 200 ಶಾಲಾ ತರಗತಿಗಳ ನಿರ್ಮಾಣಕ್ಕೆ ಸಾಕಷ್ಟು ಅನುದಾನ ನೀಡಿದ್ದು, ಅವುಗಳಲ್ಲಿ 160 ಪೂರ್ಣಗೊಂಡಿದ್ದು, ಬಾಕಿ ಉಳಿದ 40 ಕಾಮಗಾರಿಗಳು ನಿರ್ಮಾಣ ಹಂತದಲ್ಲಿವೆ. ಇವುಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಎಸೆಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಯು ಪ್ರಥಮ ಸ್ಥಾನ ಪಡೆಯುವಂತೆ ಕ್ರಮಕೈಗೊಳ್ಳಬೇಕು ಅಧಿಕಾರಿಗೆ ನಿರ್ದೇಶಿಸಿದರು.

ಮೀನುಗಾರಿಕೆ ವೇಳೆ ಮರಣ ಹೊಂದಿದ ಸಂದರ್ಭದಲ್ಲಿ ಪರಿಹಾರ ಪಡೆಯಲು ಅನುಕೂಲವಾಗುವಂತೆ ಮೀನುಗಾರರ ಸೊಸೈಟಿಯಲ್ಲಿ ಸದಸ್ಯತ್ವ ಹೊಂದಿದ ಮೀನುಗಾರರಿಗೆ ವಿಮೆಯ ಪ್ರೀಮಿಯಂ ಮೊತ್ತವನ್ನು ಸರಕಾರ ತುಂಬುತ್ತಿದೆ. 5 ಲಕ್ಷ ರೂ. ವರೆಗೆ ಪರಿಹಾರ ಒದಗಿಸಲಾಗುವುದು. ಕಳೆದ ಹಲವು ದಿನಗಳ ಹಿಂದೆ ಗಂಗೊಳ್ಳಿಯ ಬಂದರಿನಲ್ಲಿ ಬೆಂಕಿ ಅಪಘಾತದಿಂದ ಸುಟ್ಟು ಹೋದ ಬೋಟ್‌ ಮಾಲಕರಿಗೆ ಶೀಘ್ರದಲ್ಲಿಯೇ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳ ಪಡಿತರ ಚೀಟಿಯಲ್ಲಿ ಸಣ್ಣ ಪುಟ್ಟ ತಪ್ಪುಗಳಿಂದಾಗಿ ಸರಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ವಂಚಿತರಾಗುತ್ತಿದ್ದಾರೆ. ಸರಕಾರ ತಿದ್ದುಪಡಿಗೆ ಕಾಲಾವಕಾಶ ನೀಡಿದ ಸಂದರ್ಭದಲ್ಲಿ ಅವುಗಳನ್ನು ಸರಿಪಡಿಸುವ ಕಾರ್ಯ ಆಹಾರ ಇಲಾಖೆಯವರು ಮಾಡಬೇಕು ಎಂದರು.
ಗ್ಯಾರಂಟಿ ಯೋಜನೆಯ ಸರ್ವೇ ಕಾರ್ಯವನ್ನು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಿಬಂದಿ, ಅಂಗನವಾಡಿ ಕಾರ್ಯಕರ್ತೆಯರು ಕೈಗೊಳ್ಳುತ್ತಿದ್ದು, ಸರ್ವೇಕಾರ್ಯದಲ್ಲಿ ಯಾವುದೇ ರೀತಿಯ ಲೋಪದೋಷಗಳು ಆಗದಂತೆ ಹಾಗೂ ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ತಿಳಿಸಿದರು.ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಜಿಪಂ ಸಿಇಒ ಪ್ರತೀಕ್‌ ಬಯಾಲ್‌, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.