ಕುತ್ಪಾಡಿ ಪಡುಕರೆಯಲ್ಲಿ ಕಡಲಕೊರೆತ


Team Udayavani, Jun 26, 2017, 3:45 AM IST

padukere.jpg

ಮಲ್ಪೆ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆ – ಗಾಳಿಗೆ ಸಮುದ್ರ ಪ್ರಕ್ಷುಬ್ಧಗೊಂಡಿದ್ದು ಅಲೆಗಳ ಅಬ್ಬರಕ್ಕೆ ಕುತ್ಪಾಡಿ ಪಡುಕರೆ, ಉದ್ಯಾವರ ಕನಕೋಡಗಳಲ್ಲಿ ಕಡಲ್ಕೊರೆತ ಕಾಣಿಸಿಕೊಂಡಿದೆ.

ಸುಮಾರು 5-6 ವರ್ಷಗಳ ಹಿಂದೆ ಈ ಭಾಗದಲ್ಲಿ ಕೊರೆತ ತಡೆಯಲು ಹಾಕಲಾದ ಕಲ್ಲುಗಳು ಅಲೆಯ ಹೊಡೆತಕ್ಕೆ ಈಗಾಗಲೇ ಸಮುದ್ರ ಸೇರಿವೆ. ಕಾಂಕ್ರೀಟ್‌ ರಸ್ತೆಯ ಸಮೀಪದ ವರೆಗೆ ಕೊರೆಯುತ್ತ ಬಂದಿದ್ದು ಮೀನುಗಾರಿಕಾ ರಸ್ತೆ ಅಪಾಯದ ಭೀತಿ ಎದುರಿಸುತ್ತಿದೆ.

ಕುತ್ಪಾಡಿ ಪಡುಕರೆಯಿಂದ ಕನಕೋಡ ಪಂಢರೀನಾಥ ಭಜನಾ ಮಂದಿರದ ಮುಂದಕ್ಕೆ ಹಲವಾರು ಕಡೆಗಳಲ್ಲಿ ತಡೆಗೋಡೆ ಮೇಲೇರಿ ಬರುತ್ತಿರುವ ಅಲೆಗಳು ಕಾಂಕ್ರೀಟ್‌ ರಸ್ತೆಗೆ ಅಪ್ಪಳಿಸುತ್ತಿವೆ. ಅಲೆಯ ಹೊಡೆತಕ್ಕೆ ತಡೆಗೋಡೆ ಕುಸಿಯಲಾರಂಭಿಸಿದೆ.

ಕುತ್ಪಾಡಿ ಉದ್ಯಾವರ ಗಡಿ ಪ್ರದೇಶವಾದ ಈ ಭಾಗದಲ್ಲಿ ಕಳೆದ 5-6 ವರ್ಷಗಳಿಂದ ಯಾವುದೇ ಕೊರೆತ ಉಂಟಾಗಿಲ್ಲ. ಸಮುದ್ರದಲ್ಲಿ ಕೆಲವೊಂದು ಭಾಗದಲ್ಲಿ ಸುಳಿ ಏಳುತ್ತದೆ. ಸುಳಿ ಬಂದ ಜಾಗದಲ್ಲಿ ಕೊರೆತ ಉಂಟಾಗುತ್ತದೆ. ಇದು ಮರಳನ್ನು ಕೊರೆಯುತ್ತಾ ಹೋಗುತ್ತದೆ ಎನ್ನುತ್ತಾರೆ ಸ್ಥಳೀಯರಾದ ಶಿವರಾಮ ಪುತ್ರನ್‌ ಅವರು.

ಸಂಭಾವ್ಯ ಅಪಾಯದ ಬಗ್ಗೆ ಸ್ಥಳೀಯರು ಜನಪ್ರತಿನಿಧಿಗಳ ಗಮನ ಸೆಳೆದಿದ್ದಾರೆ. ಸಚಿವ ಪ್ರಮೋದ್‌ ಮಧ್ವರಾಜ್‌ ಹಾಗೂ ಕಾಪು ಶಾಸಕ ವಿನಯ ಕುಮಾರ ಸೊರಕೆ ಅವರು ಅತೀ ಅಪಾಯ ಉಂಟಾಗುವ ಕಡೆಗಳಲ್ಲಿ ತಾತ್ಕಾಲಿಕ ಕಲ್ಲು ಹಾಕಿ ಭದ್ರಪಡಿಸಲು ಬಂದರು ಇಲಾಖೆಯ ಎಂಜಿನಿಯರ್‌ ನಾಗರಾಜ್‌ ಅವರಿಗೆ ಸೂಚನೆ ನೀಡಿದ್ದಾರೆ. ಕೊರೆತ ತೀವ್ರಗೊಂಡ ಪ್ರದೇಶಕ್ಕೆ ಕಲ್ಲು ಹಾಕುವ ಕಾರ್ಯ ಆರಂಭಗೊಂಡಿದೆ. ಎಂಜಿನಿಯರ್‌ ನಾಗರಾಜ್‌ ಅವರು ಬೆಳಗ್ಗಿನಿಂದ ರಾತ್ರಿವರೆಗೂ ಪಡುಕರೆಯಲ್ಲಿ ಮೊಕ್ಕಾಂ ಹೂಡಿದ್ದಾರೆ.

ಚಿತ್ರ: ನಟರಾಜ್‌ ಮಲ್ಪೆ

ಟಾಪ್ ನ್ಯೂಸ್

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.