ಬ್ಯೂಟಿ ಪಾರ್ಲರ್‌ಗಳಿನ್ನು ಬ್ಯೂಟಿ ಕ್ಲಿನಿಕ್‌!


Team Udayavani, Dec 18, 2018, 3:00 AM IST

beuty-18-12.jpg

ವಿಶೇಷ ವರದಿ : ಕುಂದಾಪುರ: ಕೈಗೆ ಮದುರಂಗಿ ಹಾಕಿಸಲು, ಕೂದಲಿಗೆ ಬಣ್ಣ ಹಾಕಿಸಲು, ಮುಖದ ಅಂದ ಹೆಚ್ಚಿಸಲು ಬ್ಯೂಟಿಪಾರ್ಲರ್‌ಗೆ ಬರುವವರಿಗೆ ಇನ್ನು ಆರೋಗ್ಯ ಮಾಹಿತಿಯೂ ದೊರೆಯಲಿದೆ. ತಾಲೂಕಿನ ಬ್ಯೂಟಿ ಪಾರ್ಲರ್‌ಗಳು ಇನ್ನು ಬ್ಯೂಟಿ ಕ್ಲಿನಿಕ್‌ಗಳಾಗಲಿವೆ.

ಅಂದದ ನಂಟು
ಬ್ಯೂಟಿ ಪಾರ್ಲರ್‌ಗಳಿಗೆ ಭೇಟಿ ನೀಡದ ಮಹಿಳೆಯರು ಕಡಿಮೆ. ಯಾವುದಾದರೊಂದು ಕಾರಣಕ್ಕೆ ಬ್ಯೂಟಿಪಾರ್ಲರ್‌ಗೆ ಬರುತ್ತಾರೆ. ಅವು ನೂರಾರು ಜನರಿಗೆ ಉದ್ಯೋಗ ಕಲ್ಪಿಸಿವೆ. ಜನರಲ್ಲಿ ಸೌಂದರ್ಯ ಪ್ರಜ್ಞೆಯನ್ನು ಹೆಚ್ಚಿಸಿವೆ. ಪಾರ್ಲರ್‌ಗಳು ಬದುಕಿನ ಭಾಗವೇ ಆಗಿವೆ. ಅವಿನಾಭಾವ ಅಂಗವಾಗುತ್ತಿವೆ.

ಏನಿದು ಕ್ಲಿನಿಕ್‌
ಬ್ಯೂಟಿಪಾರ್ಲರ್‌ಗಳಿಗೆ ಬರುವ ಮಹಿಳೆಯರಿಗೆ ಆರೋಗ್ಯದ ಕುರಿತು ಮಾಹಿತಿ ನೀಡುವುದೇ ಬ್ಯೂಟಿ ಕ್ಲಿನಿಕ್‌. ಚರ್ಮರೋಗ, ಚರ್ಮದ ಆರೋಗ್ಯ, ವೈಯಕ್ತಿಕ ಸ್ವಚ್ಛತೆ, ಮಹಿಳಾ ಆರೋಗ್ಯ, ದೇಹದ ವಿವಿಧ ಭಾಗಗಳಲ್ಲಿ ಬರುವ ಕ್ಯಾನ್ಸರ್‌ (ಹೆಚ್ಚಾಗಿ ಮಹಿಳೆಯರಲ್ಲಿ ಬರುವ ಸ್ತನ ಕ್ಯಾನ್ಸರ್‌, ಗರ್ಭಕೋಶ ಕ್ಯಾನ್ಸರ್‌) ಮೊದಲಾದವುಗಳ ಕುರಿತು ಸ್ಥೂಲ ಮಾಹಿತಿ ನೀಡಲಾಗುತ್ತದೆ. ಯಾವುದೇ ಆರೋಗ್ಯ ಸಂಬಂಧಿ ಮಾಹಿತಿ, ಚಿಕಿತ್ಸೆ ಅವಶ್ಯವಿದ್ದಲ್ಲಿ ಅದೇ ಬ್ಯೂಟಿ ಪಾರ್ಲರ್‌ನಲ್ಲಿ ನೀಡುವ (ಪಿಂಕ್‌ ಸ್ಲಿಪ್‌) ಗುಲಾಬಿ ಬಣ್ಣದ ಚೀಟಿಯನ್ನು ಸರಕಾರಿ ಆಸ್ಪತ್ರೆಗೆ ಕೊಂಡೊಯ್ದರೆ ಅಲ್ಲಿ ಸೂಕ್ತ ಚಿಕಿತ್ಸೆ, ಸಲಹೆ ನೀಡುತ್ತಾರೆ. ಬ್ಯೂಟಿಪಾರ್ಲರ್‌ ಮೂಲಕ ಬಂದವರು ಎಂದು ವೈದ್ಯರಿಗೂ ಸುಲಭದಲ್ಲಿ ಅರಿವಾಗುತ್ತದೆ.

ತರಬೇತಿ
ಬ್ಯೂಟಿಪಾರ್ಲರ್‌ಗಳಲ್ಲಿ ಸೇವೆ ಸಲ್ಲಿಸುವವರಿಗೆ ಆರೋಗ್ಯದ ಕುರಿತಾಗಿ, ಯಾವ ವಿಚಾರದ ಕುರಿತು  ಹೇಗೆ ಮಾಹಿತಿ ನೀಡಬೇಕೆಂದು ಆರೋಗ್ಯ ಇಲಾಖೆ ವತಿಯಿಂದ ವಿಶೇಷ ತರಬೇತಿ, ಮಾಹಿತಿ ನೀಡಲಾಗುತ್ತದೆ. ಕರಪತ್ರಗಳನ್ನು, ಪೋಸ್ಟರ್‌ಗಳನ್ನು ನೀಡಲಾಗುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರನ್ನು ಆಸ್ಪತ್ರೆಗೆ ಕಳುಹಿಸುವ ಬ್ಯೂಟಿಪಾರ್ಲರ್‌ಗಳನ್ನು ಮೂರು ತಿಂಗಳಿಗೊಮ್ಮೆ ಆರೋಗ್ಯ ಇಲಾಖೆಯಿಂದ ಗುರುತಿಸಿ ಪ್ರಶಂಸಾ ಪತ್ರ ನೀಡಲಾಗುತ್ತದೆ. 

ಎಲ್ಲೆಡೆ ಯತ್ನ
ಕುಂದಾಪುರ, ಬೈಂದೂರಿನಲ್ಲಿ ಸುಮಾರು 100 ಬ್ಯೂಟಿ ಪಾರ್ಲರ್‌ಗಳಿವೆ. 23 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 1 ಸಮುದಾಯ ಆರೋಗ್ಯ ಕೇಂದ್ರ, 1 ತಾಲೂಕು ಆಸ್ಪತ್ರೆಯಿದೆ. 356 ಆಶಾ ಕಾರ್ಯಕರ್ತೆಯರಿದ್ದಾರೆ. 8 ಮಂದಿ ಪುರಸಭೆ ವ್ಯಾಪ್ತಿಯಲ್ಲಿ ಆಶಾ ಕಾರ್ಯಕರ್ತೆಯರಿದ್ದಾರೆ. ಇವರೆಲ್ಲರೂ ಇಲಾಖೆಯ ಎಷ್ಟೇ ಮಾಹಿತಿಯನ್ನೂ ಕೊಟ್ಟರೂ ಸಾಲುತ್ತಿಲ್ಲ. ಇಲಾಖೆಯ ಬೇರೆ ಬೇರೆ ಕೆಲಸಗಳೂ ಇವರ ಪಾಲಿಗಿವೆ. ಆದ್ದರಿಂದ ಬ್ಯೂಟಿಪಾರ್ಲರ್‌ ಮೂಲಕ ಹೆಚ್ಚುವರಿಯಾಗಿ ಮಾಹಿತಿ, ಜಾಗೃತಿ ನೀಡುವ ಕೆಲಸವನ್ನು ಕೈಗೆತ್ತಿಕೊಳ್ಳಲು ಇಲಾಖೆ ನಿರ್ಧರಿಸಿದೆ. 

ಯೋಜನೆಯಿದೆ
ಬಹುತೇಕ ಮಹಿಳೆಯರು ಈಗ ಬ್ಯೂಟಿಪಾರ್ಲರ್‌ಗಳಿಗೆ ಹೋಗುವ ಕಾರಣ ಅವರಲ್ಲಿ ಆರೋಗ್ಯದ ಕುರಿತು ಅರಿವು ಮೂಡಿಸಲು ಬ್ಯೂಟೀಶಿಯನ್‌ಗಳ ಮೂಲಕ ಯತ್ನಿಸಬೇಕೆಂದು ಇಂತಹ ಯೋಜನೆ ಹಾಕಿಕೊಳ್ಳಲಾಗಿದೆ. ಜನವರಿಯಲ್ಲಿ ಈ ಕುರಿತು ಕಾರ್ಯಾಗಾರ ನಡೆಸಿ ತರಬೇತಿ ನೀಡಿ ಯೋಜನೆಗೆ ಚಾಲನೆ ನೀಡಲಾಗುವುದು. 
– ಡಾ| ನಾಗಭೂಷಣ್‌ ಉಡುಪ, ತಾಲೂಕು ಆರೋಗ್ಯಾಧಿಕಾರಿ, ಕುಂದಾಪುರ

ಟಾಪ್ ನ್ಯೂಸ್

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.