ಹೊಸ ಜನಾಂಗಕ್ಕೆ ಕೃಷಿ ಸಂಸ್ಕೃತಿಯ ಪರಿಚಯವಾಗಲಿ

ಅಲೆವೂರಿನಲ್ಲಿ ಗಣೇಶೋತ್ಸವ ಸಮಿತಿಯಿಂದ "ಕೆಸರ್‌ಡೊಂಜಿ ದಿನ' ಉದ್ಘಾಟಿಸಿ ದಿನಕರ ಬಾಬು

Team Udayavani, Jul 8, 2019, 5:34 AM IST

070719Astro01

ಉಡುಪಿ: ಈಗಿನ ಹೊಸ ತಲೆಮಾರಿನವರಿಗೆ ನಮ್ಮ ಕೃಷಿ ಸಂಸ್ಕೃತಿ, ಪರಂಪರೆಯ ಪರಿಚಯವಾಗಬೇಕು. ಅದು ಅವರ ಅನುಭವಕ್ಕೂ ಬರಬೇಕು ಎಂದು ಉಡುಪಿ ಜಿ.ಪಂ. ಅಧ್ಯಕ್ಷ ದಿನಕರ ಬಾಬು ಅಭಿಪ್ರಾಯಪಟ್ಟರು.ಜು.7ರಂದು ಅಲೆವೂರು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಅಲೆವೂರಿನ ವಿ4 ಗ್ರೀನ್ಸ್‌ ಗದ್ದೆ ಯಲ್ಲಿ ನಡೆದ 15ನೇ ವರ್ಷದ “ಕೆಸರ್‌ಡೊಂಜಿ ದಿನ’ ಗ್ರಾಮೀಣ ಕ್ರೀಡಾಕೂಟ -2019ನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಕೆಸರ್‌ಡೊಂಜಿ ದಿನ ಕಾರ್ಯಕ್ರಮವನ್ನು ಅವಿಭಜಿತ ದ.ಕ ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ಆಯೋಜಿಸಿದ ಹೆಗ್ಗಳಿಕೆ ಅಲೆವೂರು ಗಣೇಶೋತ್ಸವ ಸಮಿತಿಯದ್ದು. ಇದು ಕೇವಲ ಒಂದು ದಿನದ ಮೋಜಿಗೆ ಸೀಮಿತವಾಗದೆ ಯುವಕರಲ್ಲಿ ಕೃಷಿ ಚಟುವಟಿಕೆ ಕುರಿತು ಆಸಕ್ತಿ ಮೂಡಿಸುವಂತಾಗಬೇಕು ಎಂದು ದಿನಕರ ಬಾಬು ಹೇಳಿದರು.

ಅಲೆವೂರು ಗ್ರಾ.ಪಂ. ಅಧ್ಯಕ್ಷ ಶ್ರೀಕಾಂತ ನಾಯಕ್‌, ಉಪಾಧ್ಯಕ್ಷೆ ಜಯಲಕ್ಷ್ಮೀ ಹಂಸರಾಜ್‌, ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಶೇಖರ್‌ ಕಲ್ಮಾಡಿ, ಅಧ್ಯಕ್ಷ ರೂಪೇಶ್‌ ಆಚಾರ್ಯ, ಪ್ರಗತಿಪರ ಕೃಷಿಕ ಶ್ರೀಧರ್‌ ಶೆಟ್ಟಿ, ಉದ್ಯಮಿ ಹರೀಶ್‌ ಶೆಟ್ಟಿ ತೆಂಕುಮನೆ, ಚಿತ್ರ ನಿರ್ದೇಶಕ ಸಂದೇಶ್‌ ಶೆಟ್ಟಿ ಆಜ್ರಿ ಉಪಸ್ಥಿತರಿದ್ದರು. ಮಂಜೇಶ್‌ ಕುಮಾರ್‌ ಸ್ವಾಗತಿಸಿದರು. ಸುಖೇಶ್‌ ನಾಯಕ್‌ ಕಾರ್ಯಕ್ರಮ ನಿರ್ವಹಿಸಿದರು.

ಕೆಸರು ತುಂಬಿದ ಗದ್ದೆ ಆಟೋಟ ಮೈದಾನ

ಕೆಸರು ತುಂಬಿದ ಗದ್ದೆಯೇ ವಿವಿಧ ರೀತಿಯ ಆಟೋಟಗಳಿಗೆ
ಮೈದಾನವಾಯಿತು.

ಮಕ್ಕಳು, ಮಹಿಳೆಯರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ತಾತ್ಕಾಲಿಕವಾಗಿ ರಚಿಸಲಾಗಿದ್ದ ಏತದಿಂದ ಗದ್ದೆಗೆ ನೀರು ಹಾಯಿಸುವ ಮೂಲಕ ಕ್ರೀಡಾಕೂಟಕ್ಕೆ ಸಾಂಪ್ರದಾಯಿಕ ಚಾಲನೆ ನೀಡಲಾಯಿತು.

ಓಟ, ಗೋಣಿಚೀಲ ಓಟ, ಹಗ್ಗ ಜಗ್ಗಾಟ, ಪಿರಮಿಡ್‌ನ‌ಲ್ಲಿ ಮೊಸರು ಕುಡಿಕೆ,ವಾಲಿಬಾಲ್‌, ತ್ರೋಬಾಲ್‌, ಹಿಮ್ಮುಖ ಓಟ, ನಿಧಿ ಶೋಧ, ಮ್ಯೂಸಿಕಲ್‌ ಚೇರ್‌ ಹೀಗೆ ವಿವಿಧ ರೀತಿಯ ಆಟೋಟಗಳನ್ನು ಆಯೋಜಿಸಲಾಗಿತ್ತು.

ಕೆಸರಿನಲ್ಲಿ ಓಡುವುದು, ಆಡುವುದು ಮಾತ್ರವಲ್ಲದೆ ಕೆಸರಿನಲ್ಲಿ ಬೀಳುವುದಕ್ಕೆ ಎಂದೇ ಒಂದಷ್ಟು ಮಂದಿ ಗದ್ದೆಗಿಳಿದರು. ಇನ್ನು ಕೆಲವು ಮಂದಿ ಗದ್ದೆ

ಬದುವಿನಲ್ಲಿ ನಿಂತು ಮೈ ಮೇಲೆ ಕೆಸರು ಚಿಮ್ಮಿಸಿಕೊಂಡು ಸಂಭ್ರಮಿಸಿದರು !.

ಮಧ್ಯಾಹ್ನ ಗಂಜಿ ಸಹಿತವಾಗಿ ತುಳುನಾಡಿನ ಆಟಿಯ ಪದಾರ್ಥಗಳನ್ನು ಒಳಗೊಂಡ ಊಟೋಪಚಾರವಿತ್ತು.

ಟಾಪ್ ನ್ಯೂಸ್

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.