ಬೀಡಿನಮನೆ ಕಂಬಳ ಸಂಪನ್ನ
Team Udayavani, Dec 4, 2018, 2:00 AM IST
ಕೊಲ್ಲೂರು: ಕೆರಾಡಿ ಬೀಡಿನಮನೆ ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ಬೀಡಿನಮನೆ ಕಂಬಳವು ಇಲ್ಲಿನ ಕಂಬಳಗದ್ದೆಯಲ್ಲಿ ಡಿ. 2ರಂದು ನಡೆಯಿತು. ಕಂಬಳಕ್ಕೆ ಆಗಮಿಸಿದ ಕೋಣಗಳು ಹಾಗೂ ಯಜಮಾನರನ್ನು ಸಂಘಟಕರು ವಾದ್ಯ ಹಾಗೂ ಸಾಂಪ್ರದಾಯಿಕವಾಗಿ ವೀಳ್ಯ ನೀಡುವುದರ ಮೂಲಕ ಸ್ವಾಗತಿಸಿದರು. ಕಂಬಳವು ಹಲಗೆ, ಹಗ್ಗ ವಿಭಾಗಗಳಲ್ಲಿ ನಡೆದರೆ, ಸ್ಥಳೀಯ ಯುವಕರಿಗೆ ಕೆಸರುಗದ್ದೆ ಓಟ ಹಾಗೂ ಹಗ್ಗಜಗ್ಗಾಟ ಸ್ಪರ್ಧೆ ನಡೆಯಿತು.
ಖ್ಯಾತ ಚಿತ್ರ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಪ್ರಗತಿ ರಿಷಬ್ ಶೆಟ್ಟಿ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ್ದರು. ಬೀಡಿನಮನೆ ಕುಟುಂಬದ ಅಶ್ವತ್ಥ್ ಮಾತನಾಡಿದರು. ಈ ಸಂದರ್ಭ ನ್ಯಾಯವಾದಿ ಪ್ರಸನ್ನ ಕುಮಾರ ಶೆಟ್ಟಿ ಕೆರಾಡಿ, ಬೀಡಿನಮನೆ ನರಸಿಂಹ ಶೆಟ್ಟಿ, ಭುಜಂಗ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಪ್ರಭಾಕರ ಶೆಟ್ಟಿ ಉಪಸ್ಥಿತರಿದ್ದರು.
30 ಕ್ಕೂ ಹೆಚ್ಚು ಕೋಣಗಳನ್ನು ಕಂಬಳದ ಸ್ಪರ್ಧೆಯಲ್ಲಿ ಆಯ್ಕೆಗೊಳಿಸಲಾಗಿದ್ದು ಸ್ಪರ್ಧೆಯಲ್ಲಿ ಗೆದ್ದ ಕೋಣಗಳಿಗೆ ನಗದು ಹಾಗೂ ಶಾಶ್ವತ ಫಲಕ ನೀಡಿ ಗೌರವಿಸಲಾಯಿತು. ಸ್ಥಳೀಯ ಯುವಕರಿಗೆ ನಡೆದ ಕೆಸರುಗದ್ದೆ ಕ್ರೀಡಾಸ್ಪರ್ಧೆಯ ವಿಜೇತರಿಗೆ ನಗದು ಬಹುಮಾನ ಹಾಗೂ ಶಾಶ್ವತ ಫಲಕ ನೀಡಿ ಗೌರವಿಸಲಾಯಿತು. ಶಿಕ್ಷಕರಾದ ಭಾಸ್ಕರ ಶೆಟ್ಟಿ ಹಾಗೂ ವಿಜಯ ಕುಮಾರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ