ಬಳ್ಕೂರು, ಗುಲ್ವಾಡಿ, ಕಂಡಲೂರು ಭಾಗದಲ್ಲಿ ಮರಳುಗಾರಿಕೆ ಆರಂಭ


Team Udayavani, Oct 30, 2019, 5:33 AM IST

maralugarike

ಬಸ್ರೂರು : ಕಳೆದ ಮೂರು ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ಮರಳು ಗಾರಿಕೆಗೆ ಈಗ ಮರು ಜೀವ ಬಂದಿದೆ. ಈಗ ಬಳ್ಕೂರು-ಗುಲ್ವಾಡಿ-ಕಂಡೂÉರು ಬ್ಲಾಕ್‌ ಮತ್ತು ಹಳ್ನಾಡು-ಜಪ್ತಿ ಬ್ಲಾಕ್‌ನಲ್ಲಿ ಕಂಡೂÉರು ಸೇತುವೆ ಪೂರ್ವಭಾಗದಲ್ಲಿ ನಾನ್‌ ಸಿಆರ್‌ಝಡ್‌ ಪ್ರದೇಶದಲ್ಲಿ ಮಾತ್ರ ಇಬ್ಬರಿಗೆ ಮರಳುಗಾರಿಕೆಗೆ ಅನುಮತಿ ನೀಡಿದ್ದು ಸಾಂಪ್ರದಾಯಿಕ ಮರಳುಗಾರಿಕೆ ಆರಂಭಗೊಂಡಿದೆ.

ಕಟ್ಟಡ ಕಾರ್ಮಿಕರ, ಕಟ್ಟಡ ನಿರ್ಮಾಣಕಾರರ ಬಹುದಿನಗಳ ಕನಸು ಈಗ ನನಸಾಗಿದೆ. ಬಹುತೇಕ ಕಾರ್ಮಿಕರಿಗೆ ಉದ್ಯೋಗ ಲಭಿಸಿದಂತಾಗಿದೆ. ಮುಂದಿನ ಐದು ವರ್ಷಗಳ ಅವಧಿಗೆ ಈ ಬ್ಲಾಕ್‌ಗಳಲ್ಲಿ ಮರಳುಗಾರಿಕೆಗೆ ಸರಕಾರ ಅನುಮತಿ ನೀಡಿದೆ. ಜೂ.5 ರಿಂದ ಅ.5 ರವರೆಗೆ ಮರಳುಗಾರಿಕೆಗೆ ಅವಕಾಶವಿರುವುದಿಲ್ಲ.

ಮರಳುಗಾರಿಕೆಯಲ್ಲಿ ಸಾಂಪ್ರದಾಯಿಕ ಮರಳು ಕಾರ್ಮಿಕರಿಗೆ ಉದ್ಯೋಗ ಕಲ್ಪಿಸಲಾಗಿದೆ. ಇವರಿಗೆ ದೋಣಿ ಲೆಕ್ಕದಲ್ಲೊ, ಲಾರಿ ಲೋಡ್‌ ಲೆಕ್ಕದಲ್ಲೊ ಸಂಬಳ ನೀಡುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಎಂದು ತಿಳಿದು ಬಂದಿದೆ.
ಬಸ್ರೂರು ಆಸುಪಾಸಿನ ಕಾರ್ಮಿಕರ ಜತೆ ಉತ್ತರ ಭಾರತದಿಂದ ಕೆಲಸಕ್ಕಾಗಿ ಆಗಮಿಸಿರುವ ಮರಳು ಕಾರ್ಮಿಕರು ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮೇಲೆ ಹೇಳಿದ ಎರಡು ಬ್ಲಾಕ್‌ಗಳಲ್ಲಿ ಎಂಬತ್ತಾರು ಸಾವಿರ ಮೆಟ್ರಿಕ್‌ ಟನ್‌ ಮರಳನ್ನು ಇಲ್ಲಿ ತೆಗೆಯಲಾಗುತ್ತದೆ.

ಮರಳನ್ನು ಲಾರಿಗೆ ಸಾಗಿಸುವಾಗ ಯುನಿಟ್‌ ಲೆಕ್ಕದಲ್ಲಿ ಲೋಡ್‌ ಮಾಡಲಾಗುತ್ತದೆ. ಒಂದು ಲಾರಿ ಮರಳು ಎಂದರೆ ಹತ್ತು ಟನ್‌ ಅಥವಾ ಮೂರು ಯೂನಿಟ್‌ಗಳನ್ನು ಹಾಕಬಹುದಾಗಿದೆ.

ಒಂದು ಲೋಡ್‌ಗೆ ಒಂದೂವರೆ ದೋಣಿ ಮರಳು ಎಂಬ ಲೆಕ್ಕದಲ್ಲಿ ಮರಳನ್ನು ಸಾಗಿಸುತ್ತಿದ್ದಾರೆ. ಒಟ್ಟಿನಲ್ಲಿ ಹೇಳಬೇಕೆಂದರೆ ಕುಂದಾಪುರ ತಾಲೂಕಿನ ಬಸ್ರೂರು ಸಮೀಪದ ಬಳ್ಕೂರು-ಗುಲ್ವಾಡಿ-ಕಂಡೂÉರು ಮತ್ತು ಹಳ್ನಾಡು-ಜಪ್ತಿಯನ್ನು ಬ್ಲಾಕ್‌ಗಳೆಂದು ಗುರುತಿಸಿ ನಾನ್‌ ಸಿ.ಆರ್‌ಝಡ್‌. ಪ್ರದೇಶದಲ್ಲಿ ಸಾಂಪ್ರದಾಯಕ ಮರಳುಗಾರಿಕೆ ಆರಂಭವಾಗಿದೆ. ಈ ಪರಿಸರದ ಅಂಗಡಿ-ಹೋಟೆಲ್‌ನಲ್ಲೂ ಉತ್ತರ ಪ್ರದೇಶದ ಮರಳು ಕಾರ್ಮಿಕರ ಸದ್ದುª ಕೇಳಿ ಬರುತ್ತಿದೆ.

ಕೆಲವರಿಗೆ ಅನುಮತಿ
ನಮ್ಮ ಮನೆ ಸಮೀಪ ಉಡುಪಿ ಜಿಲ್ಲಾಧಿಕಾರಿ ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ದಾಳಿ ನಡೆಸುವ ಮುನ್ನ ರಾತ್ರಿ-ಹಗಲು ಅಕ್ರಮ ಮರಳು ತುಂಬಿದ ಲಾರಿಗಳ ಆರ್ಭಟ ಜೋರಾಗಿ ಇತ್ತು. ಆಗ ಯಾರಿಗೂ ಈ ಪ್ರದೇಶದಲ್ಲಿ ಮರಳು ತೆಗೆಯಲು ಅನುಮತಿ ಇರಲಿಲ್ಲ. ಈಗ ಅಂದಿನ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಕೆಲವರಿಗಷ್ಟೇ ಅನುಮತಿ ನೀಡಲಾಗಿದೆ.
-ರಾಮ ಪೂಜಾರಿ, ಬಳ್ಕೂರು ನಿವಾಸಿ.

-  ದಯಾನಂದ ಬಳ್ಕೂರು

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.