ಬೇಳಂಜೆ ಕಿಂಡಿ ಅಣೆಕಟ್ಟು ಪ್ರದೇಶ: ತಹಸೀಲ್ದಾರ್ ಭೇಟಿ, ಪರಿಶೀಲನೆ
Team Udayavani, Jan 23, 2020, 5:41 AM IST
ಹೆಬ್ರಿ: ಬೇಳಂಜೆ ಕೆಳಬಾದ್ಲು ಸೀತಾನದಿಗೆ ಸುಮಾರು 2ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಕಿಂಡಿ ಅಣೆಕಟ್ಟು ಪ್ರದೇಶಕ್ಕೆ ಜ.21ರ ಸಂಜೆ ಹೆಬ್ರಿ ತಹಶೀಲ್ದಾರ್ ಮಹೇಶ್ಚಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಣ್ಣ ನೀರಾವರಿ ಇಲಾಖೆ ಅನು ದಾನದಡಿಯಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣಗೊಂಡಿದ್ದು, ಕಾರ್ಯರೂಪಕ್ಕೆ ಬರುವ ಮೊದಲೇ ಕಳಪೆ ಕಾಮಗಾರಿ ಎದ್ದು ತೋರುತ್ತಿದೆ. ಹಲಗೆ ಅಳವಡಿಕೆ ಸರಿಯಾಗಿಲ್ಲದ ಕಾರಣ ನೀರು ಹೊರಬರುತ್ತಿದೆ. ಅಣೆಕಟ್ಟಿನಲ್ಲಿ ಕೆಲವು ಕಡೆ ಕಾಂಕ್ರೀಟ್ ಹಾಗೂ ಕಬ್ಬಿಣ ಕೆಲವು ಎದ್ದು ಹೋಗಿ ನೀರು ಹೊರಬರುತ್ತಿದೆ. ಡ್ಯಾಮ್ ಮೇಲುಗಡೆ ಅಳವಡಿಸಿದ ತಡೆಗೋಡೆಗಳು ಎದ್ದು ಹೋಗಿವೆ ಎಂದು ಸ್ಥಳೀಯರಾದ ಪಾಂಡುರಂಗ ಪೂಜಾರಿ ಅವರು ತಹಸೀಲ್ದಾರ್ ಅವರ ಗಮನಕ್ಕೆ ತಂದರು. ಅಲ್ಲದೆ ಈ ಪ್ರದೇಶಕ್ಕೆ ಬರಲು ಸರಿಯದ ದಾರಿಯಿಲ್ಲ, ಈ ಬಗ್ಗೆ ಪರಿಶೀಲಿಸಬೇಕು ಎಂದು ಅಧಿಕಾರಿಗಳ ಗಮನಕ್ಕೆ ತಂದರು.
ಈ ಬಗ್ಗೆ ಪ್ರತಿಕ್ರಿಯಿಸಿದ ತಹಸೀಲ್ದಾರ್, ಶೀಘ್ರ ಸಂಬಂಧಪಟ್ಟವರ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲಾಗುವುದು. ದಾರಿ ಸಮಸ್ಯೆ ಬಗ್ಗೆ ಗ್ರಾಮ ಪಂಚಾಯತ್ ಗಮನಕ್ಕೆ ತರಲಾಗುವುದು ಎಂದರು.
ತಾ.ಪಂ. ಸದಸ್ಯ ಅಮೃತಕುಮಾರ್ ಶೆಟ್ಟಿ, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪಾಲಣ್ಣ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್