ಬೆಳ್ಮಣ್‌-ಬೋಳದಲ್ಲಿ ಮಂಗಗಳ ಹಾವಳಿ ವ್ಯಾಪಕ 


Team Udayavani, Feb 22, 2019, 12:30 AM IST

bola.jpg

ಬೆಳ್ಮಣ್‌: ಮಂಗನ ಕಾಯಿಲೆಯಿಂದ ಕಾಡಂಚಿನ ಜನರು ಭೀತಿಗೊಳಗಾಗಿದ್ದರೆ, ಇತ್ತ ಬೆಳ್ಮಣ್‌ ಹಾಗೂ ಬೋಳ ಪರಿಸರಗಳಲ್ಲಿ ವ್ಯಾಪಕ ಮಂಗಗಳ ಹಾವಳಿ ಇದೆ. 
 
ಕಪಿ ಹಾವಳಿಯಿಂದ ಈ ಪ್ರದೇಶದ  ತೆಂಗು, ಕಂಗು, ಬಾಳೆ  ಬೆಳೆಗಾರರು ಹಾಗೂ ವ್ಯಾಪಾರಸ್ಥರು ಕಂಗಾಲಾಗಿದ್ದಾರೆ.  
ಒಂದೆಡೆ ಪ್ರಾಕೃತಿಕ ಏರುಪೇರಿನಿಂದಾಗಿ ಬೆಳೆ ಹಾನಿ ಯಾಗುತ್ತಿದ್ದರೆ ಈಗ ಮಂಗಗಳ ಹಾವಳಿಯಿಂದ ಬೆಳೆಗಳು ಹಾನಿಗೊಳಗಾಗುತ್ತಿವೆ. ಕಾರ್ಕಳ ತಾ. ಬೆಳ್ಮಣ್‌, ನಂದಳಿಕೆ, ಬೋಳ, ಮುಂಡ್ಕೂರು, ಸಚ್ಚೇರಿಪೇಟೆ, ಸಂಕಲಕರಿಯ ಪ್ರದೇಶದ ಕೃಷಿಕರು ವ್ಯಾಪಕ ನಷ್ಟ ಅನುಭವಿಸಿದ್ದಾರೆ. ತೆಂಗಿನ ತೋಟಗಳ ಕೃಷಿಕರು ತಲೆ ಮೇಲೆ ಕೈಹೊತ್ತು ಕೂರುವಂತಾಗಿದೆ.  

ಚಿರತೆ, ಕಾಡುಕೋಣಗಳ ಬಳಿಕ ಮಂಗಗಳು!
ಈ  ಹಿಂದೆ ಬೋಳ ಆಸುಪಾಸು ಕಾಡುಕೋಣ ಹಾಗೂ ಚಿರತೆಗಳ ಹಾವಳಿಯಿಂದ ತತ್ತರಿಸಿ ಹೋಗಿದ್ದ ಕೃಷಿಕರಿಗೆ ಬಳಿಕ ತುಸು ಸಮಯ ನೆಮ್ಮದಿಯಿತ್ತು. ಈಗ ಮಂಗಗಳ ಹಾವಳಿಗೆ ಜನ ದಿಕ್ಕೇ ತೋಚದಾಗಿದ್ದಾರೆ. ಬೆಳಗಾಗುವುದರೊಳಗೆ ತೆಂಗಿನ ತೋಟಕ್ಕೆ ಲಗ್ಗೆ ಇಡುವ ಮಂಗಗಳು ಸಾವಿರಾರು ತೆಂಗಿನಕಾಯಿಯನ್ನು ಹಾಳುಮಾಡುತ್ತಿದೆ. ಮುಂಜಾನೆ ತೋಟಗಳಿಗೆ ಲಗ್ಗೆ ಇಡುವ ಮಂಗಗಳು ಕೆಲವೊಮ್ಮೆ ರಾತ್ರಿವರೆಗೂ ತೋಟದಲ್ಲಿರುತ್ತವೆ.
  
ಅರಣ್ಯ ಇಲಾಖೆಗೆ ಮನವಿ
ನವಿಲು, ಮಂಗಗಳ ಉಪಟಳಗಳ ಬಗ್ಗೆ ಈಗಾಗಲೇ ಅರಣ್ಯ ಇಲಾಖೆಗೆ ದೂರು ನೀಡಲಾಗಿದ್ದು  ಸಮಸ್ಯೆ ಪರಿಹಾರಕ್ಕಾಗಿ ಪ್ರಯತ್ನ ನಡೆಯುತ್ತಿದೆ. ಈ ಹಿಂದೆ ಮಂಗಗಳ ಹಾವಳಿ ಇಷ್ಟೊಂದು ಪ್ರಮಾಣದಲ್ಲಿರಲಿಲ್ಲ. ಅಧಿಕಾರಿಗಳೂ ಸಮಸ್ಯೆ ಪರಿಹಾರಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನವುದು ರೈತರ ಅಳಲು.  

ಬೆಳೆ ನಷ್ಟ ಮಂಗಗಳ ಹಾವಳಿಯಿಂದ ಪ್ರತೀ ನಿತ್ಯ ಈ ಭಾಗದಲ್ಲಿ ಸಾವಿರಾರು ಮೌಲ್ಯದ ತೆಂಗಿನಕಾಯಿಗಳು ಹಾಗೂ ಇತರ ತರಕಾರಿಗಳು ನಷ್ಟವಾಗುತ್ತಿವೆ.  
– ಶರತ್‌ ಶೆಟ್ಟಿ ,ಸಚ್ಚೇರಿಪೇಟೆ

50ಕ್ಕೂ ಮಿಕ್ಕಿ ಮಂಗಗಳು
ನಾವು ಎಷ್ಟೇ ಬೊಬ್ಬೆ ಹೊಡೆದು ಓಡಿಸಿದರೂ ಮಂಗಗಳ  ಹಿಂಡು ಕದಲುತ್ತಿಲ್ಲ, ಒಮ್ಮೆಲೆ ಸುಮಾರು 50ಕ್ಕೂ ಮಿಕ್ಕಿ ಮಂಗಗಳು ಲಗ್ಗೆ ಇಟ್ಟು ಕೃಷಿ ಹಾಳುಗೆಡವುತ್ತಿವೆ.  
– ಸತೀಶ್‌ ಪೂಜಾರಿ,ಬೋಳ ಗ್ರಾಮಸ್ಥ

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.