ಗ್ರಾಮೀಣ ಆರ್ಥಿಕತೆಗೆ ಉತ್ತೇಜನ ನೀಡಿದ ಸಂಘ

ಬೇಳೂರು ಹಾಲು ಉತ್ಪಾದಕರ ಸಹಕಾರ ಸಂಘ ನಿ.

Team Udayavani, Feb 29, 2020, 5:40 AM IST

MILK-min

ಸ್ಥಳೀಯ ಹೈನುಗಾರರು ಉತ್ಪಾದಿಸಿದ ಹಾಲಿಗೆ ಸೂಕ್ತ ಮಾರುಕಟ್ಟೆ ಇಲ್ಲದೆ ಕಷ್ಟ ಪಡುತ್ತಿರುವ ಸಂದರ್ಭದಲ್ಲಿ ಸ್ಥಾಪನೆಯಾಗಿದ್ದು ಬೇಳೂರು ಹಾಲು ಉತ್ಪಾದಕರ ಸಂಘ. ಸಂಘ ಇಂದು ಹೈನುಗಾರರ ಬೆಂಬಲಕ್ಕೆ ನಿಂತಿದ್ದು ಅನೇಕ ಕಾರ್ಯಕ್ರಮಗಳ ಮೂಲಕ ನೆರವು ನೀಡುತ್ತಿದೆ.

ಬೇಳೂರು: ಉತ್ಪಾದನೆಗೊಂಡ ಹಾಲಿಗೆ ಸೂಕ್ತ ಬೆಲೆ ಸಿಗದಿದ್ದಾಗ, ಹೈನುಗಾರಿಕೆಯಿಂದಲೇ ಅಭಿವೃದ್ಧಿ ಹೊಂದುವ ಕನಸನ್ನು ನನಸು ಮಾಡುವ ಉದ್ದೇಶದಿಂದ ಹುಟ್ಟಿಕೊಂಡದ್ದು ಬೇಳೂರು ಹಾಲು ಉತ್ಪಾದಕರ ಸಹಕಾರಿ ಸಂಘ.

ಕುಂದಾಪುರ ತಾಲೂಕಿನ ಕೆದೂರಿನ ಬೆಳಗೋಡು, ಪಡುಮುಂಡು, ಮೊಗೆಬೆಟ್ಟು , ಗುಳ್ಳಾಡಿ ಗ್ರಾಮೀಣ ಭಾಗದ ಸಣ್ಣ ಹೈನುಗಾರರು ಊರಲ್ಲೊಂದು ಹಾಲು ಉತ್ಪಾದಕರ ಸಂಘ ಸ್ಥಾಪನೆಯ ಮಹೋದ್ದೇಶವನ್ನು ಹೊಂದಿದ್ದು, ಅದನ್ನು ಶೀಘ್ರದಲ್ಲೇ ಸಾಧಿಸಿದರು ಕೂಡ. ಇಂತಹ ಸಂಘಕ್ಕೀಗ 34 ವರ್ಷಗಳ ಇತಿಹಾಸವಿದೆ.

1986ರಲ್ಲಿ ಸ್ಥಾಪನೆ
ದಿ| ಶ್ರೀಪತಿ ವೆಂಕಟದಾಸ ಅಡಿಗ (ಅಂದಿನ ಸ್ಥಾಪಕಾಧ್ಯಕ್ಷರು) ವೆಂಕಟರಮಣ ಬಾಯರಿ ಹಾಗೂ ಪ್ರಸ್ತುತ ಬೇಳೂರು ಗ್ರಾ.ಪಂ.ನ ಅಧ್ಯಕ್ಷ ಬಿ.ಕರುಣಾಕರ ಶೆಟ್ಟಿ ಅವರ ದೂರದೃಷ್ಟಿತ್ವದಿಂದಾಗಿ ಸಂಘ ಹುಟ್ಟಿಕೊಂಡಿತು. 1986 ನ.25ರಂದು ಸಂಘ ಸ್ಥಾಪನೆಯಾಗಿತ್ತು. 2004ರಲ್ಲಿ ಸಂಘ ಸ್ವಂತ ಕಟ್ಟಡ ಹೊಂದಿತ್ತು.

2200 ಲೀ. ಹಾಲು ಸಂಗ್ರಹ
ಬೇಳೂರು ಗ್ರಾಮ ಸುಮಾರು 8 ಕಿ.ಮೀ. ವ್ಯಾಪ್ತಿ ಹೊಂದಿರುವುದರಿಂದ ಗ್ರಾಮೀಣ ಭಾಗದ ಹಾಲು ಉತ್ಪಾದಕ ಸದಸ್ಯರಿಗೆ ಅನುಕೂಲಕರವಾಗುವ ನಿಟ್ಟಿನಿಂದ ಗ್ರಾಮದ ದೇಲಟ್ಟು , ಗುಳ್ಳಾಡಿ, ಮೊಗೆಬೆಟ್ಟು, ಬೇಳೂರಿನಲ್ಲಿ ಶಾಖೆ ವಿಸ್ತರಿಸಲಾಗಿದೆ. ಈ ನಾಲ್ಕು ಶಾಖೆಗಳಿಂದ ಸರಿ ಸುಮಾರು 2200 ಲೀ. ಹಾಲು ಸಂಗ್ರಹವಾಗುತ್ತಿದ್ದು ಕೆದೂರು ಬಿಎಂಸಿಗೆ ಸರಬರಾಜು ಮಾಡಲಾಗುತ್ತಿದೆ.

ಗ್ರಾಮೀಣ ಭಾಗದ ಮಹಿಳಾ ಹಾಲು ಉತ್ಪಾದಕ ಸದಸ್ಯರಿಗೆ ಪ್ರೇರಣೆ ನೀಡಿ ಸ್ವಾವಲಂಬಿಗಳನ್ನಾಗಿಸುವ ನಿಟ್ಟಿನಿಂದ ಸಂಘವು ದೇಲಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದಲ್ಲಿಯೇ ದೇಲಟ್ಟು ಮಹಿಳಾ ಹಾಲು ಉತ್ಪಾದಕರ ಸಹಕಾರ ಮಹಿಳಾ ಸಂಘವನ್ನು ಆರಂಭಿಸಿದ್ದು, ಅತ್ಯುತ್ತಮ ಕಾರ್ಯಶೈಲಿಯ ಮೂಲಕ ತಾಲೂಕಿನಲ್ಲಿಯೇ ಗುರುತಿಸಿಕೊಂಡಿದೆ.

ಸದಸ್ಯರಿಗೆ ಬಹುಮಾನ
ಪ್ರತಿ ವರ್ಷ ಸಂಘವು ಸಂಘದ ಸದಸ್ಯರಿಗೆ ಅನಾರೋಗ್ಯವಾದಾಗ ಸಹಾಯಧನ ನೀಡಿ ಸ್ಪಂದಿಸಲಾಗುತ್ತಿದೆ.

ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟ ಮತ್ತು ಸರಕಾರದ ಹಾಗೂ ಇಲಾಖೆಯ ನೆರವಿನಿಂದ ಯಶಸ್ವಿನಿ ರೈತರ ಆರೋಗ್ಯ ವಿಮೆ, ಜಾನುವಾರುಗಳಿಗೆ ಬೇಕಾದ ಪಶು ಆಹಾರ, ಹಸಿರು ಮೇವಿನ ಬೀಜ, ರೋಗ ನಿರೋಧಕ ಚುಚ್ಚು ಮದ್ದು, ಕೃತಕ ಗರ್ಭಧಾರಣೆ, ವೈಜ್ಞಾನಿಕ ಹೈನುಗಾರಿಕೆ ಬಗ್ಗೆ ಮಾಹಿತಿ ನೀಡುತ್ತಾ ಬಂದಿದೆ. ಪಶು ಸಂಗೋಪನ ಇಲಾಖೆಯ ಸಹಕಾರದಿಂದ ಜಾನುವಾರುಗಳಿಗೆ ಕಾಲು ಬಾಯಿ ಲಸಿಕಾ ಕಾರ್ಯವನ್ನು ಮಾಡುತ್ತಿದೆ.

ಸಾಧನೆಯ ಹಾದಿ
ಪ್ರಾರಂಭದ ದಿನಗಳಲ್ಲಿ ಸಂಘ 50 ಮಂದಿ ಸದಸ್ಯರನ್ನು ಹೊಂದಿದ್ದು, 25 ಲೀ. ಹಾಲು ಸಂಗ್ರಹಿಸುತ್ತಿತ್ತು. ಈಗ ಒಟ್ಟು 200 ಮಂದಿ ಸದಸ್ಯರಿದ್ದಾರೆ. ಇವರಲ್ಲಿ 160 ಮಂದಿ ಹಾಲು ಹಾಕುತ್ತಿದ್ದು 750 ಲೀ.ವರೆಗೆ ಹಾಲು ಸಂಗ್ರಹವಾಗುತ್ತಿದೆ. ಹಾಲು ಹಾಕುವ ಸದಸ್ಯರಲ್ಲಿ 138 ಮಂದಿ ಮಹಿಳಾ ಹೈನುಗಾರರೇ ಇರುವುದು ವಿಶೇಷ.

ಹೈನುಗಾರ ಸದಸ್ಯರಿಗೆ ಸರಕಾರ ಹಾಗೂ ಇಲಾಖೆಯಿಂದ ದೊರೆಯುವ ಸವಲತ್ತು ಹಾಗೂ ಅದಕ್ಕೆ ಪೂರಕವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಅವರನ್ನು ಪ್ರೋತ್ಸಾಹಿಸುತ್ತಿದ್ದೇವೆ .
-ಬಿ. ರಾಮಣ್ಣ ಅಡಿಗ ,
ಅಧ್ಯಕ್ಷರು, ಬೇಳೂರು
ಹಾ.ಉ.ಸ.ಸಂಘ

ಅಧ್ಯಕ್ಷರು:
ದಿ| ಶ್ರೀಪತಿ ವೆಂಕಟದಾಸ ಅಡಿಗ, ಬಿ.ಕರುಣಾಕರ ಶೆಟ್ಟಿ, ಬಿ.ರಾಮಣ್ಣ ಅಡಿಗ (ಹಾಲಿ)
ಕಾರ್ಯದರ್ಶಿಗಳು:
ವೆಂಕಟರಮಣ ಬಾಯರಿ, ಉದಯ ಶೆಟ್ಟಿ, ವನಿತಾ ಶೆಟ್ಟಿ, ಜಯಲಕ್ಷ್ಮೀ ಶೆಟ್ಟಿ, ಸತೀಶ್‌ ಶೆಟ್ಟಿ (ಹಾಲಿ)

-ಟಿ.ಲೋಕೇಶ್‌ ಆಚಾರ್ಯ ತೆಕ್ಕಟ್ಟೆ

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.