ಬೆಳ್ವೆ : ಪೆಟ್ರೋಲ್ ಬಂಕ್ನಿಂದ ನಗದು ಕಳವು, ಆರೋಪಿಗಾಗಿ ಪೊಲೀಸರ ಶೋಧ ಕಾರ್ಯ
Team Udayavani, Jun 29, 2022, 12:17 AM IST
ಸಿದ್ದಾಪುರ : ಬೆಳ್ವೆ ತಾರಿಕಟ್ಟೆ ಕ್ರಾಸ್ ಸಮೀಪದ ರಾ.ಹೆ.ಗೆ ತಾಗಿಕೊಂಡಿರುವ ಶ್ರೀ ಗಣೇಶ್ ಫ್ಯೂಯಲ್ಸ್ ಸರ್ವೀಸ್ ಪೆಟ್ರೋಲ್ ಬಂಕ್ನ ಕಚೇರಿಗೆ ನುಗ್ಗಿದ ಕಳ್ಳ 1,89,000 ರೂ. ನಗದು ದೋಚಿಕೊಂಡು ಪರಾರಿಯಾದ ಘಟನೆ ಸೋಮವಾರ ರಾತ್ರಿ ನಡೆದಿದೆ.
ಶ್ರೀ ಗಣೇಶ್ ಫ್ಯೂಯಲ್ಸ್ ಸರ್ವೀಸ್ ಪೆಟ್ರೋಲ್ ಬಂಕ್ ಶೇಡಿಮನೆ ಪ್ರಭಾವತಿ ಪಿ.ಶೆಟ್ಟಿ ಮಾಲಕತ್ವದಾಗಿದ್ದು, ಇದನ್ನು ಪ್ರಕಾಶ ಶೆಟ್ಟಿ ಎನ್ನುವವರು ನಡೆಸುತ್ತಿದ್ದರು. ಬೆಳಗ್ಗಿನ ಪಾಳಿಯಲ್ಲಿ ಕೆಲಸ ಮಾಡುವ ಪ್ರಭಾಕರ ಶೆಟ್ಟಿ ಅವರು ಮಂಗಳವಾರ ಬೆಳಗ್ಗೆ 6.30ರ ಸುಮಾರಿಗೆ ಬಂಕ್ಗೆ ಬಂದು ಕಚೇರಿ ಬಳಿ ಹೋದಾಗ ಕಚೇರಿಯ ಬಾಗಿಲು ತೆರದು ಕೊಂಡಿರುವುದನ್ನು ಗಮನಿಸಿದ್ದಾರೆ. ಕಳ್ಳ ಬಂಕ್ ಹಿಂಭಾಗದ ಮೂಲಕ ಬಂದು ಬಾಗಿಲು ಒಡೆದು ಒಳಪ್ರವೇಶಿಸಿದ್ದಾನೆ. ಒಟ್ಟು ಅಂದಾಜು 1,89,000 ರೂ. ನಗದು ಹಾಗೂ ಚಿಕ್ಕ 10 ಆಯಿಲ್ ಪ್ಯಾಕೆಟ್ಗಳನ್ನು ದೋಚಿಕೊಂಡು ಪರಾರಿಯಾಗಿದ್ದಾನೆ. ಅಕೌಂಟೆಂಟ್ ಪೂರ್ಣಿಮಾ ಅವರು ಘಟನೆಯ ಕುರಿತು ಶಂಕರನಾರಾಯಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಕುಂದಾಪುರ ವೃತ್ತ ನೀರಿಕ್ಷಕ ಗೋಪಿಕೃಷ್ಣ ಕೆ. ಆರ್., ಶಂಕರನಾರಾಯಣ ಪೊಲೀಸ್ ಠಾಣೆ ಉಪನಿರೀಕ್ಷಕ ಶ್ರೀಧರ ನಾಯ್ಕ ಮತ್ತು ಸಿಬಂದಿ ಭೇಟಿ ನೀಡಿದ್ದಾರೆ. ಬೆರಳಚ್ಚು ತಜ್ಞರು ಹಾಗೂ ಶ್ವಾನ ದಳವರು ಬಂದು ಶೋಧ ಕಾರ್ಯ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ