ಬೆಂಗಳೂರು-ಮೈಸೂರು-ಮಂಗಳೂರು ರೈಲು ಕುಂದಾಪುರ-ಕಾರವಾರದ ವರೆಗೆ ವಿಸ್ತರಣೆಗೆ ಹೆಚ್ಚಿದ ಬೇಡಿಕೆ

ಮಂಗಳೂರಿಗೆ ಸೀಮಿತಗೊಳಿಸಿದ್ದಕ್ಕೆ ಭಾರೀ ವಿರೋಧ ಕೇರಳ ಲಾಬಿ ವಿರುದ್ಧ ಆಕ್ರೋಶ

Team Udayavani, Sep 22, 2022, 9:08 AM IST

ಬೆಂಗಳೂರು-ಮೈಸೂರು-ಮಂಗಳೂರು ರೈಲು ಕುಂದಾಪುರ-ಕಾರವಾರದ ವರೆಗೆ ವಿಸ್ತರಣೆಗೆ ಹೆಚ್ಚಿದ ಬೇಡಿಕೆ

ಕುಂದಾಪುರ: ಮಂಗಳೂರಿನಿಂದ ಮೈಸೂರು ಮೂಲಕ ಬೆಂಗಳೂರಿಗೆ ಸಂಚರಿಸುವ ರೈಲನ್ನು ಕಾರವಾರದವರೆಗೆ ವಿಸ್ತರಿಸಬೇಕೆಂಬ ಬೇಡಿಕೆ ಅನೇಕ ದಿನಗಳಿಂದ ಕೇಳಿ ಬರುತ್ತಿದೆ. ಆದರೆ ಈ ಪ್ರಕ್ರಿಯೆ ಕೊನೆಯ ಹಂತದಲ್ಲಿರುವಾಗ ದ.ಕ. ಸಂಸದರು ರೈಲ್ವೇ ಇಲಾಖೆಗೆ ಪತ್ರ ಬರೆದು ಆಕ್ಷೇಪಿಸಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಇದರಿಂದಾಗಿ ಈ ರೈಲು ಕಾರವಾರದವರೆಗೆ ಸಂಚರಿಸಲು ಅಡ್ಡಿಯಾಗಿದೆ.

ಬೆಂಗಳೂರು-ಮೈಸೂರು ರೈಲನ್ನು ಮಂಗಳೂರಿ ನಿಂದ ಕಾರವಾರದ ವರೆಗೆ ವಿಸ್ತರಿಸಬೇಕೆಂಬ ಬೇಡಿಕೆಗೆ ಸ್ಪಂದಿಸಿದ ಮೈಸೂರು ಸಂಸದ ಪ್ರತಾಪ್‌ ಸಿಂಹ ಅವರು ವಾರದ 3 ದಿನ ಇದ್ದ ರೈಲನ್ನು 6 ದಿನ ಸಂಚರಿಸುವಂತೆ ಮಾಡಿದ್ದಲ್ಲದೆ ಹೆಚ್ಚಿನ ಬೋಗಿಯೊಂದಿಗೆ ಕಾರವಾರಕ್ಕೆ ವಿಸ್ತರಿಸಲು ನೈಋತ್ಯ ರೈಲ್ವೇಗೆ ಮನವಿ ಮಾಡಿದ್ದರು. ಕೊಂಕಣ ರೈಲ್ವೇ, ದಕ್ಷಿಣ ರೈಲ್ವೇ ಸಹ ಸಮ್ಮತಿಸಿದ್ದು ಪ್ರಕ್ರಿಯೆ ಕೊನೆಯ ಹಂತದಲ್ಲಿತ್ತು.

ಕೇರಳ ಲಾಬಿ: ಆರೋಪ
ಮೈಸೂರು ರೈಲು ಕಾರವಾರದ ವರೆಗೆ ಸಂಚರಿಸಲಿದೆ ಎನ್ನುವಾಗಲೇ ಮಂಗಳೂರಿನವರಿಗೆ ಹೆಚ್ಚಿನ ಆಸನ ಸಿಗದ ಕಾರಣ ಕಾರವಾರದ ವರೆಗೆ ವಿಸ್ತರಿಸುವುದು ಬೇಡ ಎಂದು ದ.ಕ. ಸಂಸದ ನಳಿನ್‌ ಕುಮಾರ್‌ ಕಟೀಲು ರೈಲ್ವೇ ಇಲಾಖೆಗೆ ಪತ್ರ ಬರೆದಿದ್ದಾರೆ. ಸಂಸದರ ಈ ನಡೆಗೆ ಉಡುಪಿ, ಕುಂದಾಪುರ, ಬೈಂದೂರು, ಕಾರವಾರ ಭಾಗದ ಪ್ರಯಾಣಿಕರು, ರೈಲ್ವೇ ಪ್ರಯಾಣಿಕರ ಸಮಿತಿಗಳಿಂದ ಭಾರೀ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಕೇರಳ ಲಾಬಿಯು ಅಡಗಿದೆ ಎಂಬ ಆರೋಪಗಳು ಕೇಳಿ ಬಂದಿವೆ.

ಪರ – ವಿರೋಧ: ಚರ್ಚೆ
ಮಂಗಳೂರಿಗೆ ವಿಮಾನ ಹಾಗೂ ಹೆಚ್ಚಿನ ರೈಲುಗಳ ಸಂಚಾರ ಇರುವುದರಿಂದ, ಈ ಹೊಸ ರೈಲು ಕಾರವಾರದ ವರೆಗೆ 7 ದಿನ ಹೆಚ್ಚಿನ ಬೋಗಿಯೊಂದಿಗೆ ಸಂಚರಿಸಿದರೆ ಉಡುಪಿ, ಕುಂದಾಪುರ, ಬೈಂದೂರು, ಕಾರವಾರ ಭಾಗದ ಪ್ರಯಾಣಿಕರಿಗೆ ಮೈಸೂರು, ಬೆಂಗಳೂರಿಗೆ ತೆರಳಲು ಅನುಕೂಲವಾಗಲಿದೆ ಎನ್ನುವುದು ಕುಂದಾಪುರ ರೈಲ್ವೇ ಸಮಿತಿಯವರ ವಾದ. ಈ ಮೈಸೂರು ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದೇ ಇರುವುದರಿಂದ ನಮಗೆ ಸಮಸ್ಯೆಯಾಗಲಿದೆ. ಮಾತ್ರವಲ್ಲದೆ ಇಲ್ಲಿನವರಿಗೆ ಟಿಕೆಟ್‌ ಸಹ ಸಿಗುವುದಿಲ್ಲ ಎನ್ನುವುದು ಮಂಗಳೂರು ಭಾಗದ ರೈಲ್ವೇ ಸಮಿತಿಯವರ ವಾದವಾಗಿದೆ. ಆದರೆ ಈ ರೈಲು ಸೆಂಟ್ರಲ್‌ಗೆ ಬಾರದಂತೆ ತಡೆದಿರುವುದು ನಾವಲ್ಲ, ಅದು ಇಲಾಖೆಯ ತಾಂತ್ರಿಕ ತೊಂದರೆಯಿಂದ ಹೀಗಾಗಿದೆ ಎನ್ನುವುದು ಕುಂದಾಪುರದವರ ವಾದ.

ಸಚಿವರಿಗೆ ಮತ್ತೆ ಮನವಿ
ಕೇಂದ್ರ ರೈಲ್ವೇ ಸಚಿವರನ್ನು ಬುಧವಾರ ಮತ್ತೆ ಭೇಟಿ ಮಾಡಿದ ಪ್ರತಾಪ್‌ ಸಿಂಹ, ಹೆಚ್ಚುವರಿ ಬೋಗಿಯೊಂದಿಗೆ ಕಾರವಾರದ ವರೆಗೂ ವಿಸ್ತರಿಸಿ ಎನ್ನುವುದಾಗಿ ಮನವಿ ಮಾಡಿಕೊಂಡಿದ್ದಾರೆ.

ಮೈಸೂರು ರೈಲನ್ನು ಮಂಗಳೂರಿಗೆ ಮಾತ್ರ ಸೀಮಿತಗೊಳಿಸಿದರೆ ಕರಾವಳಿ ಭಾಗಕ್ಕಿಂತ ಕೇರಳದವರಿಗೆ ಹೆಚ್ಚಿನ ಪ್ರಯೋಜನವಾಗಲಿದೆ. ದ.ಕ. ಸಂಸದರ ದಾರಿ ತಪ್ಪಿಸುವ ಕೆಲಸ ಆಗಿದೆಯಾ ಎನ್ನುವ ಸಂಶಯ ಮೂಡಿದೆ. ಈ ರೈಲು ಹೆಚ್ಚಿನ ಬೋಗಿಯೊಂದಿಗೆ ಸಂಚರಿಸಿದರೆ ಮಂಗಳೂರಿಗರಿಗೂ ಅನುಕೂಲವಾಗಲಿದೆ.
– ಗಣೇಶ್‌ ಪುತ್ರನ್‌, ಅಧ್ಯಕ್ಷರು, ಕುಂದಾಪುರ ರೈಲ್ವೇ ಪ್ರಯಾಣಿಕರ ಸಮಿತಿ

ಇದನ್ನೂ ಓದಿ :ಗಂಗಾವತಿ: ವೈಭವಯುತವಾಗಿ 5 ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ

ಟಾಪ್ ನ್ಯೂಸ್

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.