ಬೆಂಗಳೂರು-ವಾಸ್ಕೋ ರೈಲಿಗೆ ಹಸಿರು ನಿಶಾನೆ

ಮಾ. 7ರಂದು ಬೆಂಗಳೂರಿನಲ್ಲಿ ಚಾಲನೆ

Team Udayavani, Feb 29, 2020, 7:00 AM IST

train

ಸಾಂದರ್ಭಿಕ ಚಿತ್ರ

ಕುಂದಾಪುರ: ಮೂರು ದಿನಗಳಿಂದ ಬೆಂಗಳೂರಿನಲ್ಲಿ ನಡೆಯುತ್ತಿದ್ದ ಭಾರತೀಯ ರೈಲ್ವೇಯ ವೇಳಾಪಟ್ಟಿ ಸಮಿತಿ (ಐಆರ್‌ಟಿಸಿ)ಯ ಸಭೆಯಲ್ಲಿ ನೂತನ ಬೆಂಗಳೂರು – ಉಡುಪಿ- ಕುಂದಾಪುರ – ಕಾರವಾರ – ವಾಸ್ಕೋ ರೈಲಿನ ಸಂಚಾರಕ್ಕೆ ಹಸಿರು ನಿಶಾನೆ ಲಭಿಸಿದೆ. ಮಾ. 7ರಂದು ಬೆಂಗಳೂರಿನಲ್ಲಿ ರೈಲ್ವೇ ಖಾತೆಯ ರಾಜ್ಯ ಸಚಿವ ಸುರೇಶ್‌ ಅಂಗಡಿ ಚಾಲನೆ ನೀಡುವ ಮೂಲಕ ಕರಾವಳಿಗರ ಬಹು ನಿರೀಕ್ಷಿತ ರೈಲು ಸಂಚಾರ ಆರಂಭಿಸಲಿದೆ.

ಶುಕ್ರವಾರ ಸ್ವತಃ ಸಚಿವರೇ ಐಆರ್‌ಟಿಸಿ ಸಭೆಯಲ್ಲಿ ಭಾಗವಹಿಸಿ, ರೈಲು ಸಂಚಾರಕ್ಕೆ ಎದುರಾಗಿದ್ದ ತೊಡಕುಗಳನ್ನು ಪರಿಹರಿಸಿದ್ದು, ಮಾ. 7ರಿಂದ ರೈಲು ಸಂಚರಿಸಲಿದೆ ಎಂದು ಘೋಷಿಸಿದ್ದಾರೆ. ಬಳಿಕ ಮಾಜಿ ಸಂಸದ ಜಯಪ್ರಕಾಶ್‌ ಹೆಗ್ಡೆ ಯವರಿಗೆ ಕರೆ ಮಾಡಿ ಅಭಿನಂದನೆ ತಿಳಿಸಿದ್ದಾರೆ.

ರೈಲು ಮಂಗಳೂರು ಸೆಂಟ್ರಲ್‌ ಮತ್ತು  ಜಂಕ್ಷನ್‌ ನಿಲ್ದಾಣಗಳಿಗೆ ತೆರಳದೆ ಪಡೀಲ್‌ ಮಾರ್ಗವಾಗಿ ಸಂಚಾರ ಮುಂದುವರಿಸುವುದರಿಂದ ಉಡುಪಿ ಮತ್ತು ಅದಕ್ಕೆ ಮುಂದಿನ ಭಾಗದ ಪ್ರಯಾಣಿಕರಿಗೆ 2 ತಾಸುಗಳು ಉಳಿತಾಯವಾಗುತ್ತವೆ.

ರೈಲಿನ ಕೋಚ್‌ ಗಳು ಬೆಂಗಳೂರಿಗೆ ಆಗಮಿಸಿ, ವೇಳಾಪಟ್ಟಿ ಪ್ರಕಟವಾಗಿ 15 ದಿನಗಳಾಗಿದ್ದವು. ಆದರೂ ಸಂಚಾರ ಆರಂಭಕ್ಕೆ ಸಂಬಂಧಪಟ್ಟ ರೈಲ್ವೇ ಅಧಿಕಾರಿಗಳು, ಕೊಂಕಣ ರೈಲ್ವೇ ಅಧಿಕಾರಿಗಳು ಮೀನಮೇಷ ಎಣಿಸುತ್ತಿರುವುದರ ಬಗ್ಗೆ ಕರಾವಳಿಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಹಿತರಕ್ಷಣ ಸಮಿತಿ ಪ್ರಯತ್ನ
ಕರಾವಳಿಗೆ ಈ ಹೊಸ ರೈಲನ್ನು ನೀಡಬೇಕು ಎನ್ನುವ ಪ್ರಸ್ತಾವವನ್ನು ಮೊದಲಿಗೆ ಸಚಿವರ ಮುಂದೆ ಮಂಡಿಸಿದ್ದು ಕುಂದಾಪುರದ ರೈಲು ಪ್ರಯಾಣಿಕರ ಹಿತರಕ್ಷಣ ಸಮಿತಿ ಮತ್ತು ಕುಮಟಾ ರೈಲ್ವೇ ಯಾತ್ರಿಕರ ಸಂಘ. ರೈಲು ಘೋಷಣೆಯಾದಂದಿನಿಂದ ಹಿತರಕ್ಷಣ ಸಮಿತಿಯು ವೇಳಾಪಟ್ಟಿ, ತಾಂತ್ರಿಕ ತೊಂದರೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ನಿರಂತರ ಶ್ರಮ ವಹಿಸಿದ್ದರಿಂದ ರೈಲು ಸಂಚಾರದ ಹಾದಿ ಸುಗಮಗೊಂಡಿದೆ.

ಈ ರೈಲು ಆರಂಭಕ್ಕೆ ರೈಲ್ವೇ ಸಚಿವರು ಮತ್ತು ಅಧಿಕಾರಿಗಳ ಪ್ರಯತ್ನ ಒಂದೆಡೆಯಾದರೆ, ಅದಕ್ಕಿಂತಲೂ ಮುಖ್ಯವಾಗಿ ಕುಂದಾಪುರದ ರೈಲು ಪ್ರಯಾಣಿಕರ ಹಿತರಕ್ಷಣ ಸಮಿತಿಯ ಪ್ರಯತ್ನ ಪ್ರಮುಖ ಪಾತ್ರ ವಹಿಸಿದೆ. ಸರಿಯಾದ ಸಮಯದಲ್ಲಿ ಅವರು ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳ ಗಮನಕ್ಕೆ ತರುವ ಮೂಲಕ ಸಮಸ್ಯೆ ನಿವಾರಣೆಗೆ ಪ್ರಯತ್ನಿಸಿದ್ದರು.
– ಜಯಪ್ರಕಾಶ್‌ ಹೆಗ್ಡೆ, ಮಾಜಿ ಸಂಸದರು

ಟಾಪ್ ನ್ಯೂಸ್

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.