ಅಭಿವೃದ್ಧಿ ಹೆಸರಲ್ಲಿ ಲಕ್ಷಾಂತರ ರೂ. ಅವ್ಯವಹಾರ : ಕಳಪೆ ಪೀಠೊಪಕರಣ ಖರೀದಿ

50 ಲೀ. ವಾಟರ್‌ ಫಿಲ್ಟರ್‌ಗೆ ದ್ವಿಗುಣ ಬಿಲ್‌

Team Udayavani, Mar 10, 2022, 12:49 PM IST

ಅಭಿವೃದ್ಧಿ ಹೆಸರಲ್ಲಿ ಲಕ್ಷಾಂತರ ರೂ. ಅವ್ಯವಹಾರ : ಕಳಪೆ ಪೀಠೊಪಕರಣ ಖರೀದಿ

ಬೈಂದೂರು : ಶೈಕ್ಷಣಿಕ ವ್ಯವಸ್ಥೆಯನ್ನು ಸುಧಾರಿಸಬೇಕಾದ ಅಧಿಕಾರಿಗಳೇ ಅಭಿವೃದ್ಧಿಯ ಹೆಸರಿನಲ್ಲಿ ಲಕ್ಷಾಂತರ ಅವ್ಯವಹಾರ ತೊಡಗಿರುವುದು ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ವ್ಯಾಪ್ತಿಯಲ್ಲಿ ಕಂಡು ಬಂದಿದೆ.

ಏನಿದು ಪ್ರಕರಣ?
ಬೈಂದೂರು ವ್ಯಾಪ್ತಿಯಲ್ಲಿ ಸಂಸದರು, ಶಾಸಕರು ವಿಶೇಷ ಪ್ರಯತ್ನದಿಂದ ಶಿಕ್ಷಣ ಇಲಾಖೆಗೆ ಹತ್ತಾರು ಕೋ.ರೂ. ಅನುದಾನ ನೀಡಿದ್ದಾರೆ. ಆದರೆ ಅನು ದಾನ ಸಮ ರ್ಪಕ ಬಳ ಕೆ ಯಾ ಗದೆ ಪೀಠೊಪಕರಣ, ಕಂಪ್ಯೂಟರ್‌, ವಾಟರ್‌ ಫಿಲ್ಟರ್‌ ಖರೀದಿಯಲ್ಲಿ ಲಕ್ಷಾಂತರ ರೂ. ಹಗರಣ ನಡೆಸಿರುವುದು ಬೆಳಕಿಗೆ ಬಂದಿದೆ.

2020-21 ಹಾಗೂ 2022ನೇ ಸಾಲಿನಲ್ಲಿ ವಿವಿಧ ಅನುದಾನ ದಲ್ಲಿ ಶಾಲೆಗಳಿಗೆ ಬೆಂಚು, ಕುರ್ಚಿ ಮುಂತಾದ ಸಲಕರಣೆ ಖರೀದಿಸಲಾಗಿದೆ. ಸರಕಾರದ ಸುತ್ತೋಲೆಯಲ್ಲಿರುವ ಯಾವ ನಿಯಮ ಕೂಡ ಪಾಲಿಸದೆ ಕಳಪೆ ಪೀಠೊಪಕರಣಗಳ ಸರಬರಾಜು ಮಾಡಲಾಗಿದೆ. ಸುಮಾರು 10 ಶಾಲೆಗಳಿಗೆ 4.50 ಲ.ರೂ. ವೆಚ್ಚದಲ್ಲಿ ವಾಟರ್‌ ಫಿಲ್ಟರ್‌ ಖರೀದಿಸಲಾಗಿದೆ ಮತ್ತು ತಲಾ 49 ಸಾವಿರ ರೂ.ಯಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಂಜೂರಾತಿ ನೀಡಿದ್ದಾರೆ. ಆದರೆ 50 ಲೀ. ಫಿಲ್ಟರ್‌ಗಳನ್ನು ಅಳವಡಿಸಿ ನೂರು ಲೀ. ಫಿಲ್ಟರ್‌ನ ಬಿಲ್‌ ಪಾಸ್‌ ಮಾಡಲಾಗಿದೆ. ವಿಷಯ ಬಹಿರಂಗವಾಗುತ್ತಿದ್ದಂತೆ ಕೆಲವು ಶಾಲೆಯಲ್ಲಿ ಫಿಲ್ಟರ್‌ ಬದಲಾಯಿಸಲಾಗಿದೆ.

ಗಣಕಯಂತ್ರ ಖರೀದಿಗೆ 4.50 ಲ.ರೂ. ಮಂಜೂರಾಗಿದ್ದು ಮಾರ್ಚ್‌ ಅಂತ್ಯದೊಳಗೆ ಬಿಲ್‌ ಮಂಜೂರಾತಿ ಪಡೆಯಲಿದೆ. ಕಳಪೆ ಗಣಕ ಯಂತ್ರಗಳಿಗೆ ಗರಿಷ್ಠ ಮೊತ್ತದ ಮಂಜೂರಾತಿಯಾಗಿದೆ.

ಇದನ್ನೂ ಓದಿ : ಎಡಗೈಯಲ್ಲಿ ಊಟ ಮಾಡಿದಕ್ಕೆ ವಧುವನ್ನೇ ಬಿಟ್ಟು ಹೊರಟ!

ಶಿಶು ಪಾಲನ ರಜೆ ಬೇಕಾದರೆ ಹಣ ಕೊಡಬೇಕು
ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಲಂಚ ನೀಡದಿದ್ದರೆ ಯಾವುದೇ ಕೆಲಸ ನಡೆಯುದಿಲ್ಲ ಅನ್ನುವುದು ಶಿಕ್ಷಕರ ಅಭಿಪ್ರಾಯವಾಗಿದೆ. ಕೆಲವು ಶಾಲೆಗಳಲ್ಲಿ ಶಿಕ್ಷಕರ ಗೈರು ಹಾಜರಿ ಇದ್ದು ಪ್ರತಿದಿನ ಸಹಿ ಪಡೆಯದೇ ಶಿಕ್ಷಕರು ಕರ್ತವ್ಯಕ್ಕೆ ಬಂದ ಬಳಿಕ ರಜಾ ದಿನದ ಹಾಜರಿ ಹಾಕಿರುವುದು ಕಂಡುಬಂದಿದೆ. ಶಿಶುಪಾಲನ ರಜೆ ಮಂಜೂರಾತಿ, ಕೆ.ಜಿ.ಐ.ಡಿ., ಜಿ.ಪಿ.ಜಿ. ನಿಯೋಜನೆ, ವರ್ಗಾವಣೆ, ನಿವೃತ್ತಿ ವೇತನ ಎಲ್ಲದರಲ್ಲೂ ಕೂಡ ಪ್ರತ್ಯೇಕ ಹಣ ವ್ಯವಹಾರ ಮಾಡುತ್ತಿರುವುದು ಶೈಕ್ಷಣಿಕ ವ್ಯವಸ್ಥೆಯ ದುರಂತವಾಗಿದೆ.

ಲೋಕಾಯುಕ್ತ ತನಿಖೆಯಾಗಲಿ
ಬೈಂದೂರು ವ್ಯಾಪ್ತಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಗಳು ಕಚೇರಿ ಮೂಲಕ ಶಾಲಾ ವಸ್ತು ಖರೀದಿಯಲ್ಲಿ ಮತ್ತು ಶಿಕ್ಷಕರ ನಿಯೋಜನೆಯಲ್ಲಿ ಅವ್ಯವಹಾರ ನಡೆದಿದೆ. ಶಾಲಾ ಕಾಮಗಾರಿ ಗುತ್ತಿಗೆ, ಶೌಚಾಲಯ ದುರಸ್ತಿ, ಕೊಠಡಿ ನಿರ್ಮಾಣ ಕೂಡ ಕಳಪೆಯಾದರೂ ಇಲಾಖೆ ಗಮನಹರಿಸುತ್ತಿಲ್ಲ. ಕಂಪ್ಯೂಟರ್‌, ವಾಟರ್‌ ಫಿಲ್ಟರ್‌ ಖರೀದಿ ಕುರಿತು ಲೋಕಾಯುಕ್ತ ತನಿಖೆಯಾಗ ಬೇಕು ಎನ್ನುವುದು ಶಿಕ್ಷಣಾಭಿಮಾನಿಗಳ ಅಭಿಪ್ರಾಯವಾಗಿದೆ.

ತಪ್ಪು ನಡೆದಿದ್ದರೆ ಕ್ರಮ
ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ವ್ಯಾಪ್ತಿ ಸಮಸ್ಯೆ ಕುರಿತು ಈ ಹಿಂದೆ ಕೂಡ ಮಾಹಿತಿ ಬಂದಿತ್ತು. ತಾ.ಪಂ., ಜಿ.ಪಂ. ವ್ಯಾಪ್ತಿಯ ಅನುದಾನದಲ್ಲಿ ಹಲವು ಯೋಜನೆಗಳು ನಡೆಯುತ್ತದೆ. ಇಲಾಖೆ ವ್ಯಾಪ್ತಿಯಲ್ಲಿ ತಪ್ಪುಗಳು ಕಂಡು ಬಂದಲ್ಲಿ ಕಾನೂನು ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ. -ಗೋವಿಂದ ಮಡಿವಾಳ, ಉಪನಿರ್ದೇಶಕರು ,ಶಿಕ್ಷಣ ಇಲಾಖೆ ಉಡುಪಿ

– ಅರುಣ ಕುಮಾರ್‌ ಶಿರೂರು

ಟಾಪ್ ನ್ಯೂಸ್

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.