ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಹೆಸರಿನಲ್ಲಿ ಹಣ ಲೂಟಿ?

ಗ್ರಾಮಾಂತರ ಕುಂದಾಪುರ: ಅರ್ಜಿಗಾಗಿ ಮುಗಿಬಿದ್ದ ಗ್ರಾಮಸ್ಥರು!

Team Udayavani, Jul 20, 2019, 5:10 AM IST

Beti-Bachao

ಕೊಲ್ಲೂರು: ಕೇಂದ್ರ ಸರಕಾರದ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಬಡ ಹೆಣ್ಣು ಮಕ್ಕಳಿಗೆ 2 ಲಕ್ಷ ರೂ. ನಗದು ನೀಡಲಾಗುತ್ತದೆ ಎಂದು ಆಮಿಷ ಒಡ್ಡಿ ಕುಂದಾಪುರ ತಾಲೂಕಿನ ಅನೇಕ ಗ್ರಾಮಗಳಲ್ಲಿ ಅರ್ಜಿ ವಿತರಿಸಿ ಶುಲ್ಕ ಸಂಗ್ರಹಿಸಲಾಗುತ್ತಿದ್ದು, ಖಾಸಗಿ ವ್ಯಕ್ತಿಗಳು ಬಡವರ ಅಜ್ಞಾನದ ದುರ್ಲಾಭ ಪಡೆದು ಯೋಜನೆಯ ಹೆಸರಿನಲ್ಲಿ ಹಣ ಲೂಟಿ ಮಾಡುತ್ತಿರುವ ಶಂಕೆ ಮೂಡಿಸಿದೆ.

ಬೇಟಿ ಬಚಾವೊ ಬೇಟಿ ಪಡಾವೊ ಯೋಜನೆಯಡಿ ನೇರ ಹಣ ಪಾವತಿ ಯಾಗುವುದಿಲ್ಲ. ಆದರೆ ಕುಂದಾಪುರ ಭಾಗದ ಅನೇಕ ಕಡೆಗಳಲ್ಲಿ ಅರ್ಜಿ ಜತೆಗೆ ಮಗುವಿನ ಆಧಾರ್‌ ಕಾರ್ಡ್‌, ಪಾಲಕರ ಬ್ಯಾಂಕ್‌ ದಾಖಲೆ, ಪಡಿತರ ಕಾರ್ಡ್‌ಗಳ ಜೆರಾಕ್ಸ್‌ ಪ್ರತಿಯೊಂದಿಗೆ ಅಂಚೆ ಶುಲ್ಕ ಎಂದು ರೂ.50ರಿಂದ 100ರ ವರೆಗೆ ಪಡೆಯಲಾಗುತ್ತಿದೆ. ಏಜೆಂಟರ ಹೆಸರಿನಲ್ಲಿ ಅನೇಕ ಕಡೆ ಕೆಲವರು ಈ ಕೆಲಸ ಮಾಡುತ್ತಿದ್ದು, ಅರ್ಜಿ ಗಳಲ್ಲಿ ಗ್ರಾ.ಪಂ. ಅಧ್ಯಕ್ಷರ ಸಹಿ ಪಡೆದು “ಭಾರತ ಸರಕಾರ, ನವದೆಹಲಿ’ ಹೆಸರಿಗೆ ಅಂಚೆ ಮೂಲಕ ಕಳಿಸುತ್ತಿದ್ದಾರೆ.

ಯೋಜನೆಯಡಿ ನೇರ ಹಣ ಪಾವತಿ ಇಲ್ಲ
ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ನೇರ ಹಣ ಪಾವತಿ ಇಲ್ಲ. ಅರ್ಹ ಹೆಣ್ಣುಮಕ್ಕಳಿಗೆ ಪ್ರವೇಶ ಶುಲ್ಕ ಸೇರಿದಂತೆ ಇತರ ಸೌಲಭ್ಯಗಳಿಗೆ ಆಯಾ ಶಿಕ್ಷಣ ಸಂಸ್ಥೆಗಳಿಂದಲೇ ನೇರಪಾವತಿಯಾಗುತ್ತವೆ. ಅದಕ್ಕೆ ಪೋಷಕರು ಅರ್ಜಿ ಸಲ್ಲಿಸಬೇಕಾಗಿಲ್ಲ. ಆದರೆ ಈಗ ದಿಢೀರ್‌ ಆಗಿ ಅರ್ಜಿ ಸ್ವೀಕಾರ ಪ್ರಕ್ರಿಯೆ ಗ್ರಾಮೀಣ ಪ್ರದೇಶದಲ್ಲಿ ಪ್ರಾರಂಭ ವಾಗಿರುವುದು ನಾನಾ ಪ್ರಶ್ನೆಗಳಿಗೆ ಎಡೆ ಮಾಡಿಕೊಟ್ಟಿದೆ.ಗ್ರಾ.ಪಂ.ಗಳಲ್ಲಿ ಗ್ರಾಮಸ್ಥರ ದಂಡು ವಂಡ್ಸೆ, ಚಿತ್ತೂರು, ಹಕ್ಲಾಡಿ ಸಹಿತ ಅನೇಕ ಗ್ರಾ.ಪಂ.ಗಳಲ್ಲಿ ಅರ್ಜಿ ಜತೆಗ್ರಾಮಸ್ಥರು ಗ್ರಾ.ಪಂ. ಅಧ್ಯಕ್ಷರ ಸಹಿ ಗಾಗಿ ದುಂಬಾಲು ಬೀಳುತ್ತಿರುವುದು ಆಯಾ ಗ್ರಾ.ಪಂ.ಗಳ ಅಧ್ಯಕ್ಷರು ಮತ್ತುಪಿಡಿಒಗಳಿಗೆ ನುಂಗಲಾರದ ತುತ್ತಾಗಿದೆ.

ಅಧ್ಯಕ್ಷರ ಸಹಿ ಕಡ್ಡಾಯ ಎಂದು ನಮೂನೆಯಲ್ಲಿ ಸೇರಿಸಲಾಗಿರುವುದು ಇದಕ್ಕೆ ಕಾರಣ. ಇದರಿಂದಾಗಿ ಗ್ರಾಮಸ್ಥರು ಪಂ.ಗೆ ಧಾವಿಸುತ್ತಿದ್ದಾರೆ. ಈ ಅರ್ಜಿ ನಕಲಿ ಎಂದು ಗ್ರಾಮಸ್ಥರಿಗೆ ಮನದಟ್ಟು ಮಾಡಿಕೊಟ್ಟರೂ ಸಹಿ ಹಾಕುವಂತೆ ಒತ್ತಡ ಹೇರುತ್ತಿದ್ದಾರೆ.

ಕೇಂದ್ರ ಸರಕಾರದ ಯೋಜನೆ
ಬೇಟಿ ಬಚಾವೋ ಬೇಟಿ ಪಡಾವೋ ಕೇಂದ್ರ ಸರಕಾರದ್ದು, ಬಡ ಕುಟುಂಬಗಳ ಹೆಣ್ಣುಮಕ್ಕಳ ಶಿಕ್ಷಣ ಇತ್ಯಾದಿಗೆ ನೆರವಾಗುವಂಥದ್ದು. ಹೆಣ್ಣು ಭ್ರೂಣ ಹತ್ಯೆ ತಡೆಯುವುದು, ಹೆಣ್ಣು ಮಗುವಿಗೆ ಕಡ್ಡಾಯ ಶಿಕ್ಷಣ ಯೋಜನೆಯ ಮೂಲ ಉದ್ದೇಶ. ಇದರಲ್ಲಿ ಹೆಣ್ಣುಮಕ್ಕಳಿಗೆ ಅಥವಾ ಅವರ ಹೆತ್ತವರಿಗೆ ನೇರ ಹಣ ವರ್ಗಾಯಿಸುವ ಪದ್ಧತಿ ಇಲ್ಲ.

ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಯಾವುದೇ ಅರ್ಜಿ ಸ್ವೀಕಾರ ಕ್ರಮವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆರಂಭಿಸಿಲ್ಲ. ಈ ಬಗ್ಗೆ ಲಿಖೀತ ದೂರು ನೀಡಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು.
– ಗ್ರೇಸಿ ಗೊನ್ಸಾಲ್ವಿಸ್‌
ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರು, ಉಡುಪಿ

ವಂಡ್ಸೆ ಗ್ರಾ.ಪಂ.ಗೆ
ನೂರಾರು ಸಂಖ್ಯೆಯಲ್ಲಿ ಸಹಿಗಾಗಿ ಆಗಮಿಸುತ್ತಿರುವ ಗ್ರಾಮಸ್ಥರಿಗೆ ಈ ಬಗ್ಗೆ ತಿಳಿಹೇಳಲಾಗಿದೆ. ಯೋಜನೆಯಡಿ ನೇರ ನಗದು ವರ್ಗಾವಣೆ ಇಲ್ಲ ಎಂಬುದಾಗಿ ತಿಳಿಸಲಾಗಿದೆ.
– ಉದಯ್‌ ಕುಮಾರ್‌ ಶೆಟ್ಟಿ
ವಂಡ್ಸೆ ಗ್ರಾ.ಪಂ. ಅಧ್ಯಕ್ಷರು

– ಡಾ| ಸುಧಾಕರ ನಂಬಿಯಾರ್‌

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.