“ಯುವಕರು ಭಗತ್ ಸಿಂಗ್ ಆದರ್ಶ ಮೈಗೂಡಿಸಿಕೊಳ್ಳಿ’
Team Udayavani, Mar 29, 2018, 8:50 AM IST
ತೆಕ್ಕಟ್ಟೆ (ಬೇಳೂರು): ಭಗತ್ ಸಿಂಗ್ ಕ್ರಾಂತಿಕಾರಿ ಬಳಗ, ಬೇಳೂರು ದೇಲಟ್ಟು ಘಟಕವನ್ನು ಬೇಳೂರು ಗ್ರಾಮ ಪಂಚಾಯತ್
ಅಧ್ಯಕ್ಷ ಬೇಳೂರು ಕರುಣಾಕರ ಶೆಟ್ಟಿ ಅವರು ಮಾ. 25ರಂದು ದೇಲಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಉದ್ಘಾಟಿಸಿದರು.
ಅನಂತರ ಮಾತನಾಡಿದ ಅವರು, ಸಾಮಾಜಿಕವಾಗಿ ನ್ಯಾಯ ಒದಗಿಸುವ ನಿಟ್ಟಿನಿಂದ ಕೆಲವೊಮ್ಮೆ ಕ್ರಾಂತಿಕಾರಿ ಹೋರಾಟಗಳು ಕೂಡ ಅನಿವಾರ್ಯ. ಬದಲಾದ ವೇಗದ ಬದುಕಿನಲ್ಲಿ ಯುವ ಸಮುದಾಯದಲ್ಲಿ ದೇಶಾಭಿಮಾನ ಮೂಡುವ ನಿಟ್ಟಿನಿಂದ ಭಗತ್ ಸಿಂಗ್ ಆದರ್ಶಗಳನ್ನು ಮೈಗೂಡಿಸಿಕೊಳ್ಳುವ ಬಗ್ಗೆ ಗಂಭೀರವಾಗಿ ಚಿಂತನೆ ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಭಗತ್ ಸಿಂಗ್ ಕ್ರಾಂತಿಕಾರಿ ಬಳಗ, ಬೇಳೂರು ದೇಲಟ್ಟು ಘಟಕದ ನೂತನ ಅಧ್ಯಕ್ಷ ಮನೀಷ್ ದೇಲಟ್ಟು, ಕೋಟ ಘಟಕದ ಅಧ್ಯಕ್ಷ ಪ್ರಸಾದ್ ಬಿಲ್ಲವ, ತಾಲೂಕು ಸಂಚಾಲಕ ರಾಜೇಶ್ ಕೋಟೇಶ್ವರ, ಪ್ರವೀಣ ಕುಮಾರ್ ಶೆಟ್ಟಿ ಬಡಾಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.ನಿತ್ಯಾನಂದ ದೇಲಟ್ಟು ಸ್ವಾಗತಿಸಿ, ದಿನೇಶ್ ಶೆಟ್ಟಿ ದೇಲಟ್ಟು ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
MUST WATCH
ಹೊಸ ಸೇರ್ಪಡೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…