80 ಸಾವಿರ ರೂ. ಧನ ಸಂಗ್ರಹವನ್ನು ವಿತರಿಸಿದ ಭಗವತಿ ಗ್ರೂಪ್‌


Team Udayavani, Dec 7, 2018, 2:55 AM IST

bhagwati-6-12.jpg

ಪಡುಬಿದ್ರಿ: ಬಡವರಿಗೆ ಸಹಾಯ ಮಾಡುವ ಉದ್ದೇಶದಿಂದ ಹುಟ್ಟು ಹಾಕಲಾಗಿರುವ ಪಡುಬಿದ್ರಿ ಭಗವತಿ ಗ್ರೂಪ್‌ನಿಂದ ನವರಾತ್ರಿ ಉತ್ಸವದ ಕೊನೆಯ 2 ದಿನ ವೇಷಗಳನ್ನು ಹಾಕಿ ಸಹೃದಯಿ ಸಾರ್ವಜನಿಕರಿಂದ ಸಂಗ್ರಹಿಸಿದ್ದ ಎಂಬತ್ತು ಸಾವಿರ ರೂಪಾಯಿಗಳನ್ನು ಅಸೌಖ್ಯದಿಂದ ಬಳಲುತ್ತಿರುವ ಅವಿಭಜಿತ ಜಿಲ್ಲೆಯ ಏಳು ಕುಟುಂಬಗಳಿಗೆ ಅವರ ಮನೆಗೇ ತೆರಳಿ ಸಹಾಯಧನವನ್ನು ಇತ್ತೀಚೆಗೆ ಹಸ್ತಾಂñರಿಸಲಾಯಿತು.

ಯಾವುದೇ ಪದಾಧಿಕಾರಿಗಳಿಲ್ಲದ ಭಗವತಿ ಗ್ರೂಪ್‌ ಸಂಘಟನೆಯಲ್ಲಿ ಸುಮಾರು ಎಂಭತ್ತು ಜನ ಸದಸ್ಯರಿದ್ದಾರೆ. ದುಡಿದು ತಿನ್ನುವ ಈ ಯುವಕರು ಪ್ರತೀ ತಿಂಗಳು ತಾವು ಪಡೆಯುವ ವೇತನದ ಒಂದಂಶವನ್ನು ಗ್ರೂಪ್‌ನಲ್ಲಿ ಸಂಗ್ರಹಿಸಿ ಅದನ್ನು ಸಮಾಜದ ಅಶಕ್ತರಿಗೆ ಧನ ಸಹಾಯವಾಗಿ ನೀಡುವ ಮೂಲಕ ಅವರ ನೋವಿಗೆ ಸ್ಪಂದಿಸುವ ಕೆಲಸವನ್ನು ಮಾಡಿಕೊಂಡು ಬರುತ್ತಿದ್ದಾರೆ. ಈವರೆಗೆ ಲಕ್ಷಾಂತರ ರೂ.ಗಳ  ಸಹಾಯಧನವನ್ನು ಹಲವಾರು ಅಶಕ್ತರಿಗೆ ನೀಡಿದ್ದಾರೆ. ಇದೇ ಉದ್ದೇಶದಿಂದ ಈ ಬಾರಿ ವೇಷ ಧರಿಸಿ ನವರಾತ್ರಿಯ ಕೊನೆಯ ಎರಡು ದಿನಗಳಲ್ಲಿ ಊರೂರು ಸುತ್ತಿ ಧನ ಸಂಗ್ರಹಿಸಿ ಅದನ್ನು ಬಡವರಿಗೆ ವಿತರಿಸುವ ಮೂಲಕ ಅವರ ನೋವಿಗೆ ಸ್ಪಂದಿಸಿದ್ದಾರೆ.

ಸಿದ್ದಕಟ್ಟೆ ಸಂಗಬೆಟ್ಟು ಗ್ರಾಮದ ಸಂಜೀವ ಆಚಾರ್ಯ ಮತ್ತು ಸರಸ್ವತಿಯವರ ಮಗಳಾದ ಪ್ರತಿಮಾ ಅವರ ಗರ್ಭಕೋಶದ ಶಸ್ತ್ರ ಚಿಕಿತ್ಸೆಯ ವೈದ್ಯಕೀಯ ವೆಚ್ಚಕ್ಕಾಗಿ ರೂ. 20,000, ಮಂಗಳೂರು ಕೋಟೆಕಾರ್‌ ಗ್ರಾಮದ  ಪಾರ್ಶ್ವವಾಯುವಿಗೆ ತುತ್ತಾದ ರಾಮಣ್ಣ ಕುಲಾಲ್‌ ರವರಿಗೆ ರೂ.10,000, ಕೆಲಸ ಮಾಡುವಾಗ ಅಕಸ್ಮಿಕವಾಗಿ ಯಂತ್ರಕ್ಕೆ ಸಿಲುಕಿ ಕೈ ಬೆರಳು ತುಂಡಾಗಿ ಚಿಕಿತ್ಸೆ ಪಡೆಯುತ್ತಿರುವ ಪಡುಬಿದ್ರಿ ಪಾದೆಬೆಟ್ಟು ಗ್ರಾಮದ ನಿವಾಸಿ ಸಂಗೀತಾ ಶೆಟ್ಟಿಯವರಿಗೆ ರೂ 10000 ಧನ ಸಹಾಯ ನೀಡಲಾಯಿತು.

ನಂದಿಕೂರು ಶೆಟ್ಟಿಗುಡ್ಡೆ ನಿವಾಸಿ ಜಯಶ್ರೀ ದೇವಾಡಿಗರವರ ಮನೆ ದುರಸ್ತಿಗೆ ರೂ. 10000, ನಂದಿಕೂರು ಆನೆಡ್ಕ ನಿವಾಸಿ ರಿಯಾಜ್‌ ಸಹೋದರಿಯ ಮದುವೆಯ ಖರ್ಚಿಗೆ  ರೂ. 10000,  ಉಡುಪಿ ಬಾಲಕಿಯರ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕಾಪು ತಾಲೂಕಿನ ಸದಾಶಿವ ನಾಯಕ್‌- ಲಕ್ಷ್ಮೀ ದಂಪತಿಯ ಪುತ್ರಿ ಸೌಂದರ್ಯ ಅವರ ಬೆನ್ನಿನ ಶಸ್ತ್ರ ಚಿಕಿತ್ಸೆಗಾಗಿ ರೂ. 10,000 ಹಾಗೂ ಅಪಘಾತದಲ್ಲಿ ಕಾಲು ಕಳೆದುಕೊಂಡು ಕಷ್ಟದಲ್ಲಿ ಜೀವನ ಸಾಗಿಸುತ್ತಿರುವ ಕಾರ್ಕಳ ತಾಲೂಕು ನಿಟ್ಟೆ ಕೆಮ್ಮಣ್ಣು ನಿವಾಸಿ ಶೇಖರ್‌ ದೇವಾಡಿಗರವರ ವೈದ್ಯಕೀಯ ವೆಚ್ಚಕ್ಕೆ ರೂ. 10000 ಸಹಾಯಧನವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಭಗವತಿ ಗ್ರೂಪ್‌ನ ಸದಸ್ಯರು, ಮಂಜಣ್ಣ ಸೇವಾ ಬ್ರಿಗೇಡ್‌, ಪಾದೆಬೆಟ್ಟು ನಿತ್ಯಾನಂದ ಸೇವಾ ಬಳಗದ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.