ಮನದ ಕ್ಲೇಶ ಕಳೆಯಲು ಭಜನೆ ಸಹಕಾರಿ: ಸತೀಶ್‌ ಕೋಟ್ಯಾನ್‌


Team Udayavani, Jul 25, 2018, 2:00 AM IST

bhajane-24-7.jpg

ಪೆರ್ಡೂರು: ಇಲ್ಲಿನ ಶ್ರೀ ಭೈರವನಾಥೇಶ್ವರ ಸೇವಾ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ಸಂಗೀತ ಶಾಲೆಯ ಆರನೇ ವಾರ್ಷಿಕೋತ್ಸವದ ಅಂಗವಾಗಿ ಸುಬ್ರಾಯ ಕಲ್ಯಾಣ ಮಂಟಪದಲ್ಲಿ ಜು. 22ರಂದು ಜರಗಿದ ಅಭಜಿತ ಉಡುಪಿ, ದ.ಕ. ಜಿಲ್ಲಾ ಮಟ್ಟದ ಆಯ್ದ ತಂಡಗಳ ಭಜನೆ ಜುಗಲ್‌ ಬಂದಿ ಸ್ಪರ್ಧೆಯಲ್ಲಿ ಸತತ ಮೂರನೇ ವರ್ಷ ಮಂಗಳೂರು ನೀರುಮಾರ್ಗದ ಶ್ರೀ ಸುಬ್ರಹ್ಮಣ್ಯ ಭಜನ ಮಂಡಳಿ ಪ್ರಥಮ ಬಹುಮಾನ ಗಳಿಸಿದೆ.

ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಮಿತಿ ಅಧ್ಯಕ್ಷ ಸತೀಶ್‌ ಕೋಟ್ಯಾನ್‌, ನಿತ್ಯದ ಬದುಕಿನಲ್ಲಿ ಕಾಡುವ ಮನದ ಕ್ಲೇಶ‌ ಕಳೆದುಕೊಂಡು ಪ್ರಫ‌ುಲ್ಲಗೊಳ್ಳಲು ಭಜನೆ ಸಹಕರಿಸುತ್ತದೆ. ಮಾತ್ರವಲ್ಲದೆ ಸಜ್ಜನರಾಗಿ ಬಾಳುವಂತೆ ಮಾಡುತ್ತದೆ. ಭಜನೆ ಇದ್ದಲ್ಲಿ ದೇವರಿರುತ್ತಾನೆ ಎಂದರು.

ಭಜನೆ ಕ್ಷೇತ್ರದಲ್ಲಿ ದಶಕಗಳ ಸೇವೆ ಸಲ್ಲಿಸಿದ ಗ್ರಾಮದ ಹಿರಿಯರಾದ ಭುಜಂಗ ಶೆಟ್ಟಿ, ಹೆರ್ಡೆ ಸಣ್ಣಮನೆ  ಹಾಗೂ ಬಿ.ಕೆ. ಪದ್ಮನಾಭ ಉಪಾಧ್ಯಾಯ, ಬೆಳ್ಳರ್ಪಾಡಿ ಇವರನ್ನು ಸಮ್ಮಾನಿಸಲಾಯಿತು. ಸ್ಪರ್ಧೆಯ ಹಾಗೂ ಶಾಲೆಯ ಮಕ್ಕಳಿಗಾಗಿ ಆಯೋಜಿಸಲಾಗಿದ್ದ ಭಜನೆ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಮಿತಿಯ ಸದಸ್ಯರ ಕುಟುಂಬದಲ್ಲಿ ಈ ಸಾಲಿನಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಎಸೆಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.


ಸಮಿತಿಯ ಗೌರವಾಧ್ಯಕ್ಷ ಶಾಂತಾರಾಮ ಸೂಡ, ಉಪಾಧ್ಯಕ್ಷ ಪ್ರಮೋದ್‌ ರೈ ಪಳಜೆ, ತೀರ್ಪುಗಾರರಾದ ಖ್ಯಾತ ಗಾಯಕ ಚಂದ್ರಶೇಖರ ಕೆದಿಲಾಯ, ಉಮಾಮಹೇಶ್ವರಿ  ಭಟ್‌ ಆತ್ರಾಡಿ ಹಾಗೂ ಶಶಿಪ್ರಭಾ ಮಾತನಾಡಿದರು. ವೇದಿಕೆಯಲ್ಲಿ ತಾ. ಪಂ. ಸದಸ್ಯ ಸುಭಾಸ್‌ ನಾಯ್ಕ, ಪೆರ್ಡೂರು ಪಂಚಾಯತ್‌ ಅಧ್ಯಕ್ಷೆ ಶಾಂಭವಿ ಕುಲಾಲ್‌, ಸಮಿತಿಯ ಕಾರ್ಯದರ್ಶಿ, ಸಂಗೀತ ಶಾಲೆಯ ಶಿಕ್ಷಕಿ ಅಕ್ಷತಾ ರಾವ್‌ ಉಪಸ್ಥಿತರಿದ್ದರು. ಉಪೇಂದ್ರ ಆಚಾರ್ಯ ನಿರೂಪಿಸಿ, ವಂದಿಸಿದರು.

ಬಹುಮಾನ ವಿಜೇತರು
ಶ್ರೀ  ಸುಬ್ರಹ್ಮಣ್ಯ ಭಜನ ಮಂಡಳಿ, ನೀರುಮಾರ್ಗ, ಮಂಗಳೂರು (ಪ್ರಥಮ), ಅಮೃತವರ್ಷಿಣಿ ಭಜನ ಮಂಡಳಿ, ಪಿತ್ರೋಡಿ, ಉದ್ಯಾವರ (ದ್ವಿತೀಯ), ಮಕ್ಕಳ ಶ್ರೀ ಮಹಾಲಕ್ಷ್ಮೀ ಭಜನ ಮಂಡಳಿ, ಕಾಪು ಪೊಲಿಪು (ತೃತೀಯ), ವಿಶೇಷ ಬಹುಮಾನ: ಶಿವರಂಜಿನಿ ಭಜನ  ಮಂಡಳಿ, ಸುರತ್ಕಲ್‌, ಭಗವಾನ್‌ ಶಿರ್ಡಿ ಸತ್ಯಸಾಯಿ ಸೇವಾ ಕ್ಷೇತ್ರ, ಬೆಳ್ತಂಗಡಿ.

ವೈಯಕ್ತಿಕ ವಿಭಾಗದಲ್ಲಿ ಈಶ್ವರ್‌, ಮಕ್ಕಳ ಶ್ರೀ ಮಹಾಲಕ್ಷ್ಮೀ ಭಜನ ಮಂಡಳಿ, ಕಾಪು ಪೊಲಿಪು (ಉತ್ತಮ ಗಾಯಕ), ಸುಮನ್‌ ದೇವಾಡಿಗ (ತಬಲ), ಪ್ರಸಾದ್‌ (ಹಾರ್ಮೋನಿಯಂ) ಶ್ರೀ ಸುಬ್ರಹ್ಮಣ್ಯ ಭಜನ  ಮಂಡಳಿ, ನೀರುಮಾರ್ಗ, ಮಂಗಳೂರು.

ವಿದ್ಯಾರ್ಥಿಗಳಿಗಾಗಿ ನಡೆದ‌ ಸ್ಪರ್ಧೆಗಳ ವಿಜೇತರು: ಕಿರಿಯರ ವಿಭಾಗ: ಸಾನಿಧ್ಯ (ಪ್ರಥಮ), ಸೌಮ್ಯಶ್ರೀ (ದ್ವಿತೀಯ), ಶಶಾಂಕ್‌  (ತೃತೀಯ),
ಪ್ರೌಢ ವಿಭಾಗ: ಸೌಜನ್ಯಾ (ಪ್ರಥಮ), ಶಯನಾ (ದ್ವಿತೀಯ), ದಿಶಾ ಯು.ಶೆಟ್ಟಿ (ತೃತೀಯ),
ಹಿರಿಯರ ವಿಭಾಗ: ನಾಗಲತಾ (ಪ್ರಥಮ), ಕುಸುಮಾ (ದ್ವಿತೀಯ), ಶ್ರೇಯಾ (ಪ್ರೋತ್ಸಾಹಕ).

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.