ನುಡಿದಂತೆ ನಡೆಯುವ ಮೋದಿ ವಿಶ್ವಾಸಾರ್ಹ ನಾಯಕ


Team Udayavani, Feb 21, 2019, 12:30 AM IST

200219astro02.jpg

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಭರವಸೆಗಳನ್ನು ಈಡೇರಿಸುತ್ತಿರುವುದರಿಂದ ಜನತೆ ಅವರ ನಾಯಕತ್ವದ ಮೇಲೆ ವಿಶ್ವಾಸ ಇಟ್ಟಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಅವಿನಾಶ್‌ ರಾಯ್‌ ಖನ್ನಾ ಹೇಳಿದ್ದಾರೆ.

ಬುಧವಾರ ಶಾರದಾ ಇಂಟರ್‌ನ್ಯಾಶನಲ್‌ನಲ್ಲಿ ಬಿಜೆಪಿ ವತಿಯಿಂದ ಮೀನುಗಾರರು ಹಾಗೂ ಚಿಂತಕರಿಗಾಗಿ ಆಯೋಜಿಸಲಾಗಿದ್ದ “ಮನ್‌ ಕಿ ಬಾತ್‌ ಮೋದಿ ಕೆ ಸಾಥ್‌’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಶ್ರೀಮಂತರು ಗ್ಯಾಸ್‌ ಸಬ್ಸಿಡಿ ತ್ಯಜಿಸಬೇಕು ಎಂಬ ಮನವಿಗೆ ದೇಶದ 1.25 ಕೋಟಿ ಮಂದಿ ಸ್ಪಂದಿಸಿದ್ದಾರೆ. ಇದರಿಂದಾಗಿ 8 ಕೋಟಿ ಮಂದಿಗೆ ಗ್ಯಾಸ್‌ ನೀಡಲು ಸಾಧ್ಯವಾಯಿತು ಎಂದರು.

ಸ್ಪಷ್ಟ ಗುರಿ,ನೀತಿ
ಮೋದಿ ಸರಕಾರ ಸ್ಪಷ್ಟ ಗುರಿ ಮತ್ತು ನೀತಿ ಹೊಂದಿದೆ. ಜನಧನ ಮೂಲಕ ಬಡವರು-ಶ್ರೀಮಂತರ ನಡುವಿನ ಅಂತರ ಕಡಿಮೆ ಮಾಡಿದೆ. ಬಡವರಿಗೆ ಉಚಿತ ಮನೆ, ಗ್ಯಾಸ್‌ ಸಂಪರ್ಕ ನೀಡಿದೆ. ಮುದ್ರಾ ಯೋಜನೆಯಿಂದಾಗಿ ನವ ಉದ್ಯಮಿಗಳು ಭದ್ರತೆ ಇಲ್ಲದೆ ಸಾಲ ಪಡೆಯಲು ಸಾಧ್ಯವಾಗಿದೆ. ಇಂದು ಭಾರತೀಯ ಸೇನೆ ಜಗತ್ತಿನಲ್ಲಿ 3ನೇ ಸ್ಥಾನಕ್ಕೇರಿದೆ ಎಂದರು.

ಬೋಟ್‌ ಪತ್ತೆಗೆ ಗರಿಷ್ಠ ಯತ್ನ
ಬೋಟ್‌ ಸಹಿತ ನಾಪತ್ತೆಯಾಗಿರುವ ಮೀನು ಗಾರರ ಪತ್ತೆಗೆ ಕೇಂದ್ರ ಸರಕಾರ ಗರಿಷ್ಠ ಪ್ರಯತ್ನ ನಡೆಸುತ್ತಿದೆ. ಮೀನುಗಾರರು ತಮ್ಮಲ್ಲಿರುವ ಮಾಹಿತಿ ಹಂಚಿಕೊಳ್ಳಬಹುದು. ಅದರಿಂದ ಕಾರ್ಯಾಚರಣೆಗೆ ಅನುಕೂಲವಾಗುತ್ತದೆ ಎಂದರು.

ಅಂದು “ಸ್ಕ್ಯಾಮ್‌’, ಇಂದು “ಸ್ಕೀಮ್‌’ಫ‌ಲಾನುಭವಿಗಳ ಖಾತೆಗೆ ನೇರ ನಗದು ಪಾವತಿ ವ್ಯವಸ್ಥೆಯಿಂದಾಗಿ ಭ್ರಷ್ಟಾಚಾರಕ್ಕೆ ಕಡಿವಾಣ ಬಿದ್ದಿದೆ. ಈ ಹಿಂದೆ ಸರಕಾರದ ಸ್ಕೀಮ್‌ಗಳು (ಯೋಜನೆ) ಸ್ಕ್ಯಾಮ್‌ (ಹಗರಣ) ವಾಗುತ್ತಿತ್ತು. ಆದರೆ ಇಂದು “ಸ್ಕೀಮ್‌’ ಆಗಿಯೇ ಉಳಿದಿದೆ. ಪಾರದರ್ಶಕವಾದ ಆಡಳಿತ ನಡೆಯುತ್ತಿದೆ ಎಂದು ಹೇಳಿದರು.

ರಾಜ್ಯ ಅಸಹಕಾರ
ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, “ಕೇಂದ್ರದ ಅನೇಕ ಯೋಜನೆಗಳ ಪ್ರಯೋಜನ ಜನರಿಗೆ ದೊರೆಯಲು ರಾಜ್ಯದ ಸರಕಾರ ಅಡ್ಡಿಯಾಗಿದೆ. ಕೇಂದ್ರದ ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಕುಟುಂಬದ ಪ್ರತಿಯೋರ್ವರಿಗೂ ಖಾಸಗಿ ಆಸ್ಪತ್ರೆಗಳಲ್ಲಿ 5 ಲ.ರೂ. ವೆಚ್ಚದ ಚಿಕಿತ್ಸೆ ಉಚಿತವಾಗಿ ದೊರೆಯುವಂತೆ ಮಾಡುತ್ತಿದೆ. ಉಜ್ವಲ ಯೋಜನೆಯಲ್ಲಿ ರಾಜ್ಯದ ಅಡ್ಡಿ ಇರಬಾರದೆಂಬ ಕಾರಣಕ್ಕೆ ತೈಲ ಕಂಪೆನಿಗಳ ಮೂಲಕ ನೇರವಾಗಿ ಜನರಿಗೆ ತಲುಪಿಸಿತು. ರೈತರಿಗೆ ನೀಡಿದ ಶೇ. 3 ಸಬ್ಸಿಡಿಯನ್ನು ರಾಜ್ಯ ಸರಕಾರ ಹಿಡಿದಿಟ್ಟುಕೊಂಡಿದೆ ಎಂದರು.

ಮಾಹಿತಿಗೆ ಗಡು
ಸುವರ್ಣ ತ್ರಿಭುಜ ಬೋಟ್‌ಗೆ ನೌಕಾಪಡೆಯ ಹಡಗಿನ ತಳಭಾಗಕ್ಕೆ ಢಿಕ್ಕಿಯಾಗಿರುವುದೇನು? ಅದು ಸುವರ್ಣ ತ್ರಿಭುಜವೇ? ಎಂಬುದನ್ನು ಬಹಿರಂಗಪಡಿಸಬೇಕು ಎಂದು ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಸತೀಶ್‌ ಕುಂದರ್‌ ಒತ್ತಾಯಿಸಿದರು. 

ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಕೆ. ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌, ಡಾ| ವೈ. ಭರತ್‌ ಶೆಟ್ಟಿ, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಗಣ್ಯರಾದ ಉದಯ ಕುಮಾರ್‌ ಶೆಟ್ಟಿ, ಸದಾನಂದ ಬಳ್ಕೂರು, ಶೋಭೇಂದ್ರ ಸಸಿಹಿತ್ಲು ಉಪಸ್ಥಿತರಿದ್ದರು. ಸಂಚಾಲಕ ಯಶ್‌ಪಾಲ್‌ ಸುವರ್ಣ, ಕುತ್ಯಾರು ನವೀನ್‌ ಶೆಟ್ಟಿ ಮತ್ತು ಕುಯಿಲಾಡಿ ಸುರೇಶ್‌ ನಾಯಕ್‌ ನಿರ್ವಹಿಸಿದರು.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.