Bharat Vikas Parishad ; ಭಾರತ್ ಕೋ ಜಾನೋ ರಸಪ್ರಶ್ನೆ ಕಾರ್ಯಕ್ರಮ
ಆ 26 ರಂದು, ಸೆ. 02 ರಂದು ಟಿಎಪೈ ಆಂಗ್ಲ ಮಾಧ್ಯಮ ಪ್ರೌಢಶಾಲೆ ಕುಂಜಿಬೆಟ್ಟುವಿನಲ್ಲಿ ಕಾರ್ಯಕ್ರಮ
Team Udayavani, Aug 18, 2023, 11:20 PM IST
ಉಡುಪಿ: ಭಾರತ್ ವಿಕಾಸ್ ಪರಿಷತ್ ಸಂಸ್ಥೆಯ “ಭಾರತ್ ಕೋ ಜಾನೋ” ಭಾರತವನ್ನು ತಿಳಿಯಿರಿ ಎಂಬ ರಸಪ್ರಶ್ನೆ ಕಾರ್ಯಕ್ರಮ ಆ 26 ರಂದು, ಸೆ. 02 ರಂದು ಅನುಕ್ರಮವಾಗಿ,ಟಿಎಪೈ ಆಂಗ್ಲ ಮಾಧ್ಯಮ ಪ್ರೌಢಶಾಲೆ ಕುಂಜಿ ಬೆಟ್ಟು,ಉಡುಪಿಯಲ್ಲಿ ಮಧ್ಯಾಹ್ನ ಗಂಟೆ 2 ರಿಂದ ನಡೆಯಲಿದೆ ಎಂದು ಭಾರತ್ ವಿಕಾಸ್ ಪರಿಷದ್, ಭಾರ್ಗವ ಶಾಖೆ,ಕಲ್ಸಂಕ ಉಡುಪಿ ಇದರ ಸಂಚಾಲಕ ಪ.ವಸಂತ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿ ಬಾಲಕ,ಬಾಲಕಿ ತನ್ನ ದೇಶದ ಬಗ್ಗೆ ತಿಳಿದಿರಲಿ, ಹೆಮ್ಮೆಪಟ್ಟು ಸತ್ಪ್ರಜೆಯಾಗಿ ಬೆಳೆಯಲಿ ಎಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಇಂತಹುದೇ ಇನ್ನೊಂದು ಕಾರ್ಯಕ್ರಮ “ರಾಷ್ಟ್ರೀಯ ಸಮೂಹ ಗಾಯನ ಸ್ಪರ್ಧೆ”. ಈ ಸ್ಪರ್ಧೆಯು ಮಕ್ಕಳಲ್ಲಿ, ಜನ ಸಮುದಾಯದಲ್ಲಿ,ದೇಶಭಕ್ತಿ ಕಿಚ್ಚನ್ನು ಹೆಚ್ಚಿಸುವ ನಿಟ್ಟಿನಲ್ಲಿ ಯಶಸ್ವಿಯಾಗಿದೆ. ಈ ಕಾರ್ಯಕ್ರಮಗಳಲ್ಲಿ ಉಡುಪಿ ಸುತ್ತಮುತ್ತಲಿನ ಶಾಲೆಯ ಬಾಲಕ ಬಾಲಕಿಯರು ಪಾಲ್ಗೊಳ್ಳಲಿದ್ದಾರೆ.
ಭಾರತ್ ವಿಕಾಸ್ ಪರಿಷತ್ ಒಂದು ಸೇವಾ ಸಂಸ್ಥೆಯಾಗಿದ್ದು ಇದರ ಶಾಖೆಗಳು ದೇಶದ ಉದ್ದಗಲಗಳಲ್ಲಿ ಹಾಗೂ ವಿದೇಶಗಳಲ್ಲೂ ವ್ಯಾಪಿಸಿದೆ.ಭಾರತ್ ವಿಕಾಸ್ ಪರಿಷತ್ ದೇಶದ ಸರ್ವಾಂಗೀಣ ಪ್ರಗತಿಯಲ್ಲಿ ತನ್ನನ್ನು ತಾನು ಸಮರ್ಪಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ