ಭಾರತ ಬಂದ್: ಕಾರ್ಕಳದಲ್ಲಿ ಎಂದಿನಂತಿತ್ತು ಬಸ್‌ ಸೇವೆ, ಅಂಗಡಿ ಮುಂಗಟ್ಟು


Team Udayavani, Jan 8, 2020, 1:59 PM IST

arka

ಕಾರ್ಕಳ: ಕೇಂದ್ರ ಸರಕಾರದ ಕಾರ್ಮಿಕ ಕಾನೂನು, ಖಾಸಗೀಕರಣ ನೀತಿ ವಿರೋಧಿಸಿ ಹಾಗೂ ಕಾರ್ಮಿಕರ 18 ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿದ ಮುಷ್ಕರಕ್ಕೆ ಕಾರ್ಕಳ ತಾಲೂಕಿನಲ್ಲಿ ಯಾವುದೇ ಪರಿಣಾಮ ಬೀರಿಲ್ಲ.

ಖಾಸಗಿ ಮತ್ತು ಸರಕಾರಿ ಬಸ್‌ ಸಂಚಾರದಲ್ಲಿ ಯಾವೊಂದು ವ್ಯತ್ಯಯವಾಗಿಲ್ಲ. ಶಾಲಾ ಕಾಲೇಜು, ಅಂಗಡಿ ಮುಂಗಟ್ಟು, ಸಿನಿಮಾ ಥಿಯೇಟರು ಕಾರ್ಕಳದಲ್ಲಿ ಎಂದಿನಂತೆ ಕಾರ್ಯನಿರ್ವಹಿಸುತ್ತಿತ್ತು. ಕೆಲವೊಂದು ಆಟೋ ಚಾಲಕರು ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾಗ್ಯೂ ತಮ್ಮ ಸೇವೆಯನ್ನು ಸ್ಥಗಿತಗೊಳಿಸಿಲ್ಲ. ಆದರೆ ಕೆಲವೊಂದು ಬ್ಯಾಂಕ್‌ಗಳು ಮುಷ್ಕರಕ್ಕೆ ಬೆಂಬಲ ನೀಡಿ ಸೇವೆಯನ್ನು ಸ್ಥಗಿತಗೊಳಿಸಿತ್ತು.

ಕಾರ್ಕಳದಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ನಗರದ ಬಸ್‌ ನಿಲ್ದಾಣದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ರಾಜ್ಯ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಕೇಂದ್ರ ಸರಕಾರ ಕರಾವಳಿಯ ಪ್ರಮುಖ ಬ್ಯಾಂಕ್‌ಗಳನ್ನು ವಿಲೀನಗೊಳಿಸುವ ಮೂಲಕ ಕರಾವಳಿಗೆ ಅನ್ಯಾಯವೆಸಗಿದೆ. ಈ ಬ್ಯಾಂಕ್‌ಗಳು ಮುಂದಿನ ದಿನಗಳಲ್ಲಿ ಅಂಬಾನಿ, ಅದಾನಿ ಪಾಲಾಗುವ ಆತಂಕವಿದೆ ಎಂದರು.

ಬಸ್‌ ನೌಕರರು, ಆಟೋ ಚಾಲಕರು ಸೇರಿದಂತೆ ಅಸಂಘಟಿತ ಕಾರ್ಮಿಕರ ಹಿತ ಕಾಪಾಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ನಿರ್ಲಕ್ಷ್ಯ ವಹಿಸುತ್ತಿವೆ. ಭವಿಷ್ಯ ನಿಧಿ ಪಿಂಚಣಿ ಜಾರಿ, ಡಾ| ಸ್ವಾಮಿನಾಥನ್‌ ಶಿಫಾರಸ್ಸಿನಂತೆ ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಂಬಲ ಬೆಲೆ ನಿಗದಿ, ಗುತ್ತಿಗೆ ಪದ್ಧತಿಯ ರದ್ಧತಿಯೊಂದಿಗೆ ನೌಕರರ ಖಾಯಂಗೊಳಿಸಬೇಕೆಂದು ಆಗ್ರಹಿಸಿದ ಬಾಲಕೃಷ್ಣ ಶೆಟ್ಟಿ ಅವರು ಕೇವಲ ಪಾಕಸ್ತಾನವನ್ನು ತೆಗಳಿದರೆ ದೇಶಪ್ರೇಮವಲ್ಲ. ಆಡಳಿತ ನಡೆಸುವವರು ದೇಶದ ಕುರಿತಾಗಿ ಕಾಳಜಿ ಹೊಂದುವುದೂ ದೇಶಪ್ರೇಮವೆಂದರು.

ತಾಲೂಕು ಸಿಐಟಿಯು ಸಮಿತಿ ಸದಸ್ಯ ನಾಗೇಶ್‌ ಮಾತನಾಡಿ, ಆರ್ಥಿಕ ಹಿಂಜರಿತ, ಕುಸಿಯುತ್ತಿರುವ ಜಿಡಿಪಿ, ನಿರುದ್ಯೋಗ ಸಮಸ್ಯೆ ಹೋಗಲಾಡಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಯಾವೊಂದು ಕ್ರಮ ಕೈಗೊಂಡಿಲ್ಲ. ರಾಷ್ಟ್ರೀಯ ಸಮಾನ ಕನಿಷ್ಠ ವೇತನ ರೂ. 21,000 ನಿಗದಿಗೊಳಿಸಬೇಕು. ರೈಲ್ವೆ , ಬ್ಯಾಂಕ್‌, ವಿಮೆ ಮೊದಲಾದ ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣವನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿದರು.

5 ಸಾವಿರ ನೀಡಿ
ಬಿಸಿಯೂಟ ನೌಕರರ ಸಂಘದ ಅಧ್ಯಕ್ಷೆ ಬೇಬಿ ಭಂಡಾರಿ ಮಾತನಾಡಿ, ಕಳೆದ 3 ವರ್ಷಗಳಿಂದ ನಮಗೆ ವೇತನದಲ್ಲಿ ಕೇವಲ 500 ರೂ. ಹೆಚ್ಚಳ ಮಾಡಲಾಗಿದೆ. ಇದೀಗ ನಮಗೆ ದೊರೆಯುವ 2600ರಲ್ಲಿ ನಮ್ಮ ಜೀವನ ಸಾಗಿಸುವುದು ಕಷ್ಟಕರ. ಹೀಗಾಗಿ ಕನಿಷ್ಠ 5 ಸಾವಿರ ರೂ. ವೇತನ ಕೊಡಬೇಕೆಂದು ಆಗ್ರಹಿಸಿದರು. ಲೆಮಿನಾ ಕಾರ್ಮಿಕ ಸಂಘದ ಅಧ್ಯಕ್ಷ ದಿನೇಶ್‌ ಪೂಜಾರಿ, ಬೀಡಿ ಕಾರ್ಮಿಕರ ಸಂಘದ ಅಧ್ಯಕ್ಷೆ ಸುನಿತಾ ಶೆಟ್ಟಿ, ಸಿಐಟಿಯು ತಾಲೂಕು ಸಂಚಾಲಕ ಶೇಖರ್‌ ಕುಲಾಲ್‌ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು. ನಾಗೇಶ್‌ ನಿರ್ವಹಿಸಿದರು.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.