ಭಾಸ್ಕರ ಶೆಟ್ಟಿ ಕೊಲೆ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
Team Udayavani, Aug 22, 2017, 6:15 AM IST
ಉಡುಪಿ: ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾದ ರಾಜೇಶ್ವರಿ ಶೆಟ್ಟಿ (51), ನವನೀತ್ ಶೆಟ್ಟಿ (21), ನಂದಳಿಕೆ ನಿರಂಜನ ಭಟ್ (26), ಸಾಕ್ಷ್ಯನಾಶದ ಆರೋಪಿಗಳಾದ ನಿರಂಜನನ ತಂದೆ ಶ್ರೀನಿವಾಸ ಭಟ್ (57) ಮತ್ತು ಕಾರು ಚಾಲಕ ರಾಘು (26) ಸೋಮವಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.
ಹೆಚ್ಚುವರಿ ಚಾರ್ಜ್ಶೀಟ್ ಸಲ್ಲಿಕೆಯಾಗದ ಕಾರಣ ಪ್ರಕರಣದ ಚಾರ್ಜ್ ನಡೆಯಲಿಲ್ಲ. ಹಾಗಾಗಿ ಮುಂದಿನ ವಿಚಾರಣಾ ಪ್ರಕ್ರಿಯೆಯ ದಿನಾಂಕವನ್ನು ಅ. 23ಕ್ಕೆ ನ್ಯಾಯಾಧೀಶರು ನಿಗದಿಪಡಿಸಿದರು.
ಖಾಸಗಿ ಕಾರಿನಲ್ಲಿ ಪಯಣ
ರಾಜೇಶ್ವರಿ, ನಿರಂಜನ ಮತ್ತು ನವನೀತ್ ಅವರನ್ನು ಮಂಗಳೂರು ಜೈಲಿನಿಂದ ಕರೆದುಕೊಂಡು ಬರಲಾಗಿತ್ತು. ಪೊಲೀಸ್ ಎಸ್ಕಾರ್ಟ್ ವಾಹನದ ಬದಲಾಗಿ ಖಾಸಗಿ ಹವಾನಿಯಂತ್ರಿತ ಕಾರಿನಲ್ಲಿ ಆರೋಪಿಗಳನ್ನು ಕೋರ್ಟ್ಗೆ ಕರೆದುಕೊಂಡು ಬರಲಾಗಿತ್ತು. ಇದು ಚರ್ಚೆಗೆ ಗ್ರಾಸವಾಯ್ತು.ಎಸ್ಕಾರ್ಟ್ ಲಭ್ಯವಿಲ್ಲದ ಸಂದರ್ಭ ಖಾಸಗಿ ವಾಹನದಲ್ಲಿ ಕರೆದೊಯ್ಯಲು ಕಾನೂನಿನಲ್ಲಿ ಅಡ್ಡಿ ಇಲ್ಲ ಎಂದು ನ್ಯಾಯವಾದಿಯೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಹಣವಂತರಾದರೆ ಅವರಿಗೆ ಎಸಿ ಕಾರಿನ ರಾಜ ಮರ್ಯಾದೆಯನ್ನು ಪೊಲೀಸರು ಕೊಡುವುದು ವಾಡಿಕೆಯಾಗಿಬಿಟ್ಟಿದೆ ಎಂದು ಸಾಮಾನ್ಯ ಜನರು ಕೋರ್ಟ್ ಆವರಣದಲ್ಲಿ ಮಾತನಾಡಿಕೊಳ್ಳುತ್ತಿದ್ದರು.
ಮೂವರ ಅಮಾನತು: ಆರೋಪಿಗಳನ್ನು ಖಾಸಗಿ ಕಾರಿನಲ್ಲಿ ಕರೆದು ಕೊಂಡು ಬಂದ ಹಿನ್ನೆಲೆಯಲ್ಲಿ ಮೂವರು ಸಿಬಂದಿಯನ್ನು ಅಮಾನತು ಗೊಳಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದರು. ಸುಧಾಕರ್, ರೇಣುಕಾ ಹಾಗೂ ಸಲ್ಮಾನ್ ಖಾನ್ ಅಮಾನತುಗೊಂಡವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಇನ್ನೂ ನಡೆಯದ ಟೆಂಡರ್ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ
Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು
Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು
Theme Park Karkala ಅವಶೇಷ ತೆರವಿಗೆ ಕೋರ್ಟ್ ಆದೇಶ; ಜಿಲ್ಲಾಧಿಕಾರಿ ತಡೆ!
Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್ ಶೆಟ್ಟಿ ಆರೋಪ
MUST WATCH
ಹೊಸ ಸೇರ್ಪಡೆ
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ
Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು
Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ
Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ