ಭಾಸ್ಕರ ಶೆಟ್ಟಿ ಕೊಲೆ ಕೇಸ್: ಹೆಚ್ಚುವರಿ ಚಾರ್ಜ್ಶೀಟ್
Team Udayavani, Jan 26, 2018, 12:07 PM IST
ಉಡುಪಿ: ಉದ್ಯಮಿ ಇಂದ್ರಾಳಿಯ ಭಾಸ್ಕರ ಶೆಟ್ಟಿ (52) ಅವರನ್ನು ಹೋಮಕುಂಡದಲ್ಲಿ ಹಾಕಿ ಸುಟ್ಟು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ ಸಿಐಡಿ ಪೊಲೀಸರು ಗುರುವಾರ 101 ಪುಟಗಳ ಹೆಚ್ಚುವರಿ ಚಾರ್ಜ್ಶೀಟ್ ಅನ್ನು ಉಡುಪಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಈ ಹಿಂದೆ 816 ಪುಟಗಳ ಚಾರ್ಜ್ ಶೀಟ್ ಅನ್ನು ಸಿಐಡಿ ಪೊಲೀಸರು ಸಲ್ಲಿಸಿದ್ದು, ಈಗ 817ರಿಂದ 918 ಪುಟ ಸಂಖ್ಯೆಯನ್ನು ಹೆಚ್ಚುವರಿ ಚಾರ್ಜ್ ಶೀಟ್ನಲ್ಲಿ ನಮೂದಿಸಲಾಗಿದೆ. ಅಂದು 147 ಸಾಕ್ಷಿಗಳನ್ನು ಉಲ್ಲೇಖೀಸ ಲಾಗಿತ್ತು. ಈಗ ಹೆಚ್ಚುವರಿ ಚಾರ್ಜ್ ಶೀಟ್ನಲ್ಲಿ ಮತ್ತೆ 20 ಸಾಕ್ಷಿಗಳನ್ನು ಉಲ್ಲೇಖೀಸಲಾಗಿದೆ. ತಜ್ಞರ ವರದಿಗಳ ಸಹಿತ ಹಲವು ದಾಖಲೆ, ಸಾಕ್ಷ್ಯಗಳು ಹೆಚ್ಚುವರಿ ಚಾರ್ಜ್ಶೀಟ್ನಲ್ಲಿವೆ.
ಸಿಐಡಿ ಡಿವೈಎಸ್ಪಿ ಚಂದ್ರಶೇಖರ್ ಅವರು ಹೆಚ್ಚುವರಿ ಚಾರ್ಜ್ಶೀಟ್ ಅನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ. ವೆಂಕಟೇಶ್ ನಾಯ್ಕ ಮುಂದೆ ಸಲ್ಲಿಸಿದರು. ಸರಕಾರಿ ಅಭಿಯೋಜಕಿ ಶಾಂತಿ ಬಾಯಿ ಹಾಗೂ ಆರೋಪಿಗಳ ಪರ ಅರುಣ್ ಬಂಗೇರ ಬೆಳುವಾಯಿ ಅವರು ಉಪಸ್ಥಿತರಿದ್ದರು.
ಫೆ. 9ರಂದು ಮುಂದಿನ ಪ್ರಕ್ರಿಯೆ
ಪ್ರಕರಣದ ಆರೋಪಿಗಳಾದ ರಾಜೇಶ್ವರಿ ಶೆಟ್ಟಿ (51), ನವನೀತ ಶೆಟ್ಟಿ (21) ಮತ್ತು ನಂದಳಿಕೆ ನಿರಂಜನ ಭಟ್ಟ (27) ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಗುರುವಾರ ಅವರನ್ನು ಬೆಂಗಳೂರಿನಿಂದಲೇ ವೀಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟಿಗೆ ಹಾಜರುಪಡಿಸಲಾಯಿತು. ಜಾಮೀನಿನಲ್ಲಿರುವ ಸಾಕ್ಷ್ಯನಾಶದ ಆರೋಪಿಗಳಿಬ್ಬರು ಉಡುಪಿ ಕೋರ್ಟ್ನಲ್ಲಿ ಹಾಜರಿದ್ದರು. ಮುಂದಿನ ವಿಚಾರಣಾ ಪ್ರಕ್ರಿಯೆಗೆ ನ್ಯಾಯಾಧೀಶರು ಫೆ. 9ಕ್ಕೆ ದಿನಾಂಕ ನಿಗದಿಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ