ನಗರದಲ್ಲಿ ಕರ್ಕಶ ಹಾರ್ನ್, ಸೈಲೆನ್ಸರ್‌ ಬಳಕೆಗೆ ಬೇಕಿದೆ ನಿಯಂತ್ರಣ


Team Udayavani, Aug 27, 2021, 4:20 AM IST

ನಗರದಲ್ಲಿ ಕರ್ಕಶ ಹಾರ್ನ್, ಸೈಲೆನ್ಸರ್‌ ಬಳಕೆಗೆ ಬೇಕಿದೆ ನಿಯಂತ್ರಣ

ಉಡುಪಿ: ನಗರ ಸೇರಿದಂತೆ ಜಿಲ್ಲಾದ್ಯಂತ ಸಂಚರಿಸುತ್ತಿರುವ ವಾಹನಗಳಲ್ಲಿ ಕರ್ಕಶ ಹಾರ್ನ್ ಹಾಗೂ ಸೈಲೆನ್ಸರ್‌ಗಳಿಂದ ಸಾರ್ವಜನಿಕರು ತೊಂದರೆಗೀಡಾಗುತ್ತಿದ್ದಾರೆ.

ಜಿಲ್ಲೆಯಲ್ಲಿ 2017ರಲ್ಲಿ 4,267 ಪ್ರಕರಣ, 2018ರಲ್ಲಿ 4,061, 2019ರಲ್ಲಿ 3,230, 2020ರಲ್ಲಿ 225, 2021ರಲ್ಲಿ 66 ಪ್ರಕರಣ ಸೇರಿದಂತೆ ಒಟ್ಟು 11,849 ಪ್ರಕರಣಗಳಿಂದ ಇಲ್ಲಿಯವರೆಗೆ 13.98 ಲ.ರೂ. ದಂಡವನ್ನು ಪೊಲೀಸ್‌ ಇಲಾಖೆ ಸಂಗ್ರಹಿಸಿದೆ. ಆದರೂ ನಗರದಲ್ಲಿ ಕರ್ಕಶ ಹಾರ್ನ್ ಹಾಗೂ ನಿಗದಿತ ಶಬ್ದಕ್ಕಿಂತ ಹೆಚ್ಚು ಸದ್ದು ಮಾಡುವ ವಾಹನಗಳು ಸಾರ್ವಜನಿಕರ ನೆಮ್ಮದಿಯನ್ನು ಭಂಗ ಮಾಡಿದೆ.

ನಗರದ ಮಾಲಿನ್ಯದಲ್ಲಿ ಶಬ್ದ ಮಾಲಿನ್ಯವೂ ಒಂದು. ಇದಕ್ಕೆ ಮುಖ್ಯಕಾರಣ ವಾಹನಗಳ ಕರ್ಕಶ ಹಾರ್ನ್. ನಗರದ ಕೆಲವು ಬಸ್‌, ಟೆಂಪೋ ಸಹಿತ ಘನ ವಾಹನಗಳಲ್ಲಿ ವಾಕ್ಯೂಮ್‌ ಹಾರ್ನ್

ಗಳನ್ನು ಇಂದಿಗೂ ಬಳಸಲಾಗುತ್ತಿದೆ. ಇದು ಅನೇಕ ಬಾರಿ ದ್ವಿಚಕ್ರ, ಆಟೋರಿûಾಗಳಲ್ಲಿ ಪ್ರಯಾಣಿಸುವವರನ್ನು, ರಸ್ತೆ ಬದಿ ನಿಂತಿರುವ ಮತ್ತು ನಡೆದುಕೊಂಡು ಹೋಗುವವರನ್ನು ಗಲಿಬಿಲಿಗೊಳಿಸುತ್ತಿದೆ. ಅತಿಯಾಗಿ ಸದ್ದು ಮಾಡುವ ಸೈಲೆನ್ಸರ್‌ ವಾಹನಗಳು ಹಾದು ಹೋಗುವಾಗ ಸಾರ್ವಜನಿಕರಿಗೆ ಒಮ್ಮೆಗೆ ಎದೆಬಡಿತ ನಿಂತ ಅನುಭವವೂ ಆಗುತ್ತದೆ.

ನಿಷೇಧಿತ ಪ್ರದೇಶದಲ್ಲಿ ಹಾರ್ನ್  :

ಹಾರ್ನ್ ನಿಷೇಧಿತ ಪ್ರದೇಶವೆಂದು ಗುರುತಿಸ ಲಾಗುವ ಶಾಲಾ ಕಾಲೇಜು, ಆಸ್ಪತ್ರೆ ಮೊದಲಾದ ಪರಿಸರ ದಲ್ಲಿಯೂ ಹಾರ್ನ್ ಹಾವಳಿ ಇದೆ. ಜತೆಗೆ ಉಡುಪಿ ನಗರ ಸಂಸ್ಕೃತ ಕಾಲೇಜಿನ ವೃತ್ತದ ಸುತ್ತಮುತ್ತಲಿನ ರಸ್ತೆಯಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಸದ್ದು ಮಾಡುವ ಸೈಲೆನ್ಸರ್‌ ಅಳವಡಿಸಿಕೊಂಡು ರಾತ್ರಿ- ಹಗಲು ಎನ್ನುವ ವ್ಯತ್ಯಾಸವಿಲ್ಲದೆ ತಿರುಗುತ್ತಿರುವುದರಿಂದ ಸಾರ್ವ ಜನಿಕರು ಬೇಸತ್ತು ಹೋಗಿದ್ದಾರೆ.

ಕಾರ್ಯಾಚರಣೆ ಅಗತ್ಯವಿದೆ! :

ಸಂಚಾರಿ ಪೊಲೀಸರು ಕರ್ಕಶ ಹಾರ್ನ್ ಬಳಕೆ ಮಾಡುವವರ ವಿರುದ್ಧ ಕ್ರಮಗಳನ್ನು ಕೈಗೊಳ್ಳುತ್ತಾರಾದರೂ ಇತ್ತೀಚಿನ ದಿನದಲ್ಲಿ ಬಹಳ ಅಪರೂಪ ಎನ್ನುವಂತಿದೆ. ಇಂತಹ ಕರ್ಕಶ ಹಾರ್ನ್ ಬಳಕೆ ಮಾಡುವವರ, ನಿರಂತರ ಹಾರ್ನ್ ಹಾಕಿ ಸಾರ್ವಜನಿಕರ ನೆಮ್ಮದಿಗೆ ಭಂಗವನ್ನುಂಟು ಮಾಡುವವರ ವಿರುದ್ಧ ಪೊಲೀಸರ ಕಾರ್ಯಾಚರಣೆ ಹೆಚ್ಚಾಗಬೇಕಿದೆ.

ಸಂಚಾರ ನಿಷೇಧ! :

ಕೆಲವರು ಶೋಕಿಗಾಗಿ ಬೈಕ್‌ಗಳ ಸೈಲೆನ್ಸರ್‌ಗಳ ವಿನ್ಯಾಸ ಬದಲಿಸಿ ಹೆಚ್ಚಿನ ಶಬ್ದ ಬರುವಂತೆ ಮಾಡುವವರ ವಿರುದ್ಧ ಕಟ್ಟುನಿಟ್ಟಾಗಿ ಕ್ರಮ ತೆಗೆದುಕೊಳ್ಳಬೇಕು. ನಗರ ಪ್ರದೇಶದಲ್ಲಿ ಹಾಗೂ ಹೆಚ್ಚು ಜನರು ತಿರುಗಾಡುವ ಪ್ರದೇಶದಲ್ಲಿ ನಿಗದಿತ ಶಬ್ದಕ್ಕಿಂತ ಹೆಚ್ಚು ಸದ್ದು ಮಾಡುವ ವಾಹನಗಳ ಸಂಚಾರವನ್ನೇ ನಿಷೇಧಿಸಬೇಕು ಎಂದು ಸ್ಥಳೀಯರು  ಆಗ್ರಹಿಸಿದರು.

ಕಳೆದ 5 ವರ್ಷಗಳಲ್ಲಿ ದಾಖಲಾದ ಪ್ರಕರಣ, ಸಂಗ್ರಹವಾದ ದಂಡದ ಮೊತ್ತ

ಇಸವಿ  ಪ್ರಕರಣ ದಂಡ

 2017      4,267     4,13,600

 2018      4,061     4,42,900

 2019      3,230     3,96,300

 2020      225         1,08,200

ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಕರ್ಕಶ ಹಾರ್ನ್ ಹಾಗೂ ನಿಗದಿತ ಶಬ್ದಕ್ಕಿಂತ ಹೆಚ್ಚು ಸದ್ದು ಮಾಡುವ ವಾಹನಗಳ ಓಡಾಟ ನಡೆಸಿದರೆ ಆ ವಾಹನಗಳ ನಂಬರ್‌ ಪ್ಲೇಟ್‌ ಸಂಖ್ಯೆಯನ್ನು ಪೊಲೀಸರಿಗೆ ನೀಡಿದರೆ ಅಂತಹ ವಾಹನದ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ. ಜತೆಗೆ ಜಿಲ್ಲಾದ್ಯಂತ ನಿರಂತವಾಗಿ ಕರ್ಕಶ ಹಾರ್ನ್ ಹಾಗೂ ಸೈಲೆನ್ಸರ್‌ಗಳ ವಿರುದ್ಧ ಕಾರ್ಯಾಚರಣೆ ಮಾಡಲಾಗಿದೆ. – ವಿಷ್ಣುವರ್ಧನ್‌ಪೊಲೀಸ್‌ ವರಿಷ್ಠಾಧಿಕಾರಿ ,ಉಡುಪಿ ಜಿಲ್ಲೆ.

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.